Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ನಿರ್ನಾಮ ಸಿದ್ದರಾಮಯ್ಯನವರ...

ಜೆಡಿಎಸ್ ನಿರ್ನಾಮ ಸಿದ್ದರಾಮಯ್ಯನವರ ಭ್ರಮೆ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ27 Nov 2017 10:38 PM IST
share
ಜೆಡಿಎಸ್ ನಿರ್ನಾಮ ಸಿದ್ದರಾಮಯ್ಯನವರ ಭ್ರಮೆ: ಎಚ್.ಡಿ.ದೇವೇಗೌಡ

ನಾಗಮಂಗಲ, ನ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಏಳು ಶಾಸಕರನ್ನು ಸೆಳೆದು ಜೆಡಿಎಸ್ ನಿರ್ನಾಮ ಮಾಡುವ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟೀಕಿಸಿದ್ದಾರೆ.

ಬೆಳ್ಳೂರಿನಲ್ಲಿ ಸೋಮವಾರ ಜೆಡಿಎಸ್ ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷ ತ್ಯಜಿಸಿರುವ ಏಳು ಶಾಸಕರ ಹೆಸರು ಹೇಳಲು ಇಚ್ಛಿಸುವುದಿಲ್ಲ. ಆದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ನನ್ನ ಹಾಗೂ ಸಿದ್ದರಾಮಯ್ಯ ನಡುವೆಯಷ್ಟೇ ಎಂದು ಸವಾಲು ಹಾಕಿದರು.

ಕೆಲವರನ್ನು ಸೆಳೆದುಕೊಂಡ ಮಾತ್ರಕ್ಕೆ ಒಂದು ಪಕ್ಷ ನಿರ್ನಾಮವಾಗುವುದು ಎಲ್ಲಾದರೂ ಉಂಟೆ ಎಂದು ಪ್ರಶ್ನಿಸಿರುವ ಅವರು, ಅವಕಾಶ ಸಿಕ್ಕಿದಾಗಲೆಲ್ಲ ಜನರು ಬೆಳೆಸಿದ ಪಕ್ಷವನ್ನು ನಿರ್ನಾಮ ಮಾಡುತ್ತೇನೆಂದು ಸಿದ್ದರಾಮಯ್ಯನವರು ಭ್ರಮೆಯಲ್ಲಿದ್ದಾರೆಂದು ಅವರು ಲೇವಡಿ ಮಾಡಿದರು.

ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ನಾನು ದ್ರೋಹ ಮಾಡಿದೆ ಎಂದು ಹೇಳುತ್ತಾರೆ. ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದಾಗಿ ಹೇಳುತ್ತಾರೆ. ಕೊಡಿಸಿದ್ದರ ಬಗ್ಗೆ ಏಕೆ ಹೇಳಲಾರರೆಂದು ಪ್ರಶ್ನಿಸಿದ ಅವರು, ಪಕ್ಷದಲ್ಲಿ ಲಿಂಗಾಯತ ಜನಾಂಗಕ್ಕೆ 32 ಶಾಸಕರಿದ್ದರೂ ನಾಲ್ಕು ಶಾಸರನ್ನಷ್ಟೇ ಹೊಂದಿದ್ದ ಕುರುಬ ಸಮುದಾಯದ ಸಿದ್ದರಾಮಯ್ಯನನ್ನು ಉಪಮುಖ್ಯಮಂತ್ರಿ ಮಾಡಲಿಲ್ಲವೆ, ಅದೇನು ಸ್ವಯಂಸೃಷ್ಟಿಯಾಯಿತೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಜನರು ಕಟ್ಟಿ ಬೆಳೆಸಿದ ಪಕ್ಷ. ಜನರ ಬೆಂಬಲ ಇರುವವರೆಗೂ ಅದರ ಅಸ್ತಿತ್ವಕ್ಕೆ ಯಾವ ಧಕ್ಕೆಯೂ ಆಗದು. ರೈತರು, ನೆಲ, ಜಲದ ಪ್ರಶ್ನೆ ಉದ್ಭವಿಸಿದಾಗಲೆಲ್ಲ ಬೀದಿಗಿಳಿದು ಹೋರಾಟ ಮಾಡಿದವನು. ಈ ಇಳಿ ವಯಸ್ಸಿನಲ್ಲೂ ರೈತರ ಪರ ಉಪವಾಸ ಕುಳಿತು ಹೋರಾಟ ಮಾಡಿದವನು. ಸಿದ್ದರಾಮಯ್ಯ ಮಾಡಿರುವುದಾದರೂ ಏನೆಂದು ಅವರು ಟೀಕಿಸಿದರು.

ದೇವರಲ್ಲಿ ನಂಬಿಕೆ ಇಟ್ಟವನು ನಾನು. ನಂಬಿದವರನ್ನು ದೇವರು ಎಂದೂ ಕೈಬಿಟ್ಟಿಲ್ಲ. ಚುನಾವಣೆಗೆ ಕೇವಲ 120 ದಿನ ಬಾಕಿ ಇದೆ. ಜನ ಬೆಂಬಲವಿರುವ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ನಿರ್ನಾಮ ಮಾಡಲು ಬಿಜೆಪಿ, ಕಾಂಗ್ರೆಸ್‍ನಿಂದ ಸಾಧ್ಯವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಸಿ.ಎಸ್. ಪುಟ್ಟರಾಜು, ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮಾಜಿ ಶಾಸಕರಾದ ಸುರೇಶ್‍ಗೌಡ, ಎಂ. ಶೀನಿವಾಸ್, ಜಿಪಂ ಸದಸ್ಯ ಶಿವಪ್ರಕಾಶ್, ಮಾಜಿ ಸದಸ್ಯರಾದ ಚಂದ್ರೇಗೌಡ, ಡಿ.ಟಿ.ಶ್ರೀನಿವಾಸ್, ಪಪಂ ಅಧ್ಯಕ್ಷ ವಿಜಯ್‍ಕುಮಾರ್, ಮುಖಂಡ ನೆಲ್ಲಿಗೆರೆ ಬಾಲು, ಇತರ ಮುಖಂಡರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X