Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ ಭರ್ಜರಿ...

ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ

ರಣಜಿ: ಕ್ವಾರ್ಟರ್‌ಫೈನಲ್‌ನಲ್ಲಿ ವಿನಯ್ ಪಡೆಗೆ ಮುಂಬೈ ಎದುರಾಳಿ

ವಾರ್ತಾಭಾರತಿವಾರ್ತಾಭಾರತಿ28 Nov 2017 11:35 PM IST
share

ಹೊಸದಿಲ್ಲಿ, ನ.28: ಆಫ್-ಸ್ಪಿನ್ನರ್ ಕೃಷ್ಣಪ್ಪ ಗೌತಮ್(7-72) ಅವರ ಅತ್ಯುತ್ತಮ ಬೌಲಿಂಗ್ ನೆರವಿನಿಂದ ಕರ್ನಾಟಕ ತಂಡ ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯವನ್ನು 209 ರನ್‌ಗಳ ಅಂತರದಿಂದ ಗೆದ್ದುಕೊಂಡಿತು.

 ಕರ್ನೈಲ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಣಜಿ ಟ್ರೋಫಿಯ ‘ಎ’ ಗುಂಪಿನ ಪಂದ್ಯದ ನಾಲ್ಕನೆ ದಿನವಾದ ಮಂಗಳವಾರ ಭರ್ಜರಿ ಜಯ ಸಾಧಿಸಿರುವ ಕರ್ನಾಟಕ ತಂಡ ಸತತ 4ನೇ ಜಯ ಸಾಧಿಸಿ ಒಟ್ಟು 32 ಅಂಕ ಗಳಿಸಿ ‘ಎ’ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿದೆ. ವಿನಯ್‌ಕುಮಾರ್ ಪಡೆ ಕ್ವಾರ್ಟರ್ ಫೈನಲ್‌ನಲ್ಲಿ ‘ಸಿ’ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಮುಂಬೈ ತಂಡವನ್ನು ಎದುರಿಸಲಿದೆ.

  ಮಾಯಾಂಕ್ ಅಗರವಾಲ್ ಈ ಋತುವಿನಲ್ಲಿ ಗಳಿಸಿದ ಐದನೇ ಶತಕದ ನೆರವಿನಿಂದ ಕರ್ನಾಟಕ ತಂಡ ಎರಡನೇ ಇನಿಂಗ್ಸ್‌ನಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 275 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡು ರೈಲ್ವೇಸ್ ತಂಡದ ಗೆಲುವಿಗೆ 377 ರನ್ ಗುರಿ ನಿಗದಿಪಡಿಸಿತು. ನಾಲ್ಕನೇ ಹಾಗೂ ಅಂತಿಮದಿನವಾದ ಮಂಗಳವಾರ ರೈಲ್ವೇಸ್ ಬ್ಯಾಟ್ಸ್‌ಮನ್‌ಗಳಿಗೆ ಸ್ಪಿನ್ನರ್ ಕೃಷ್ಣಪ್ಪ ಗೌತಮ್ ಸವಾಲಾಗಿ ಪರಿಣಮಿಸಿದರು. ಗೌತಮ್ ಏಳು ಬ್ಯಾಟ್ಸ್ ಮನ್‌ಗಳನ್ನು ಎಲ್ಬಿಡಬ್ಲು ಹಾಗೂ ಕ್ಲೀನ್‌ಬೌಲ್ಡ್ ಮಾಡುವ ಮೂಲಕ ಪೆವಿಲಿಯನ್‌ಗೆ ಕಳುಹಿಸಿದರು. ಪಂದ್ಯದಲ್ಲಿ 142 ರನ್‌ಗೆ 10 ವಿಕೆಟ್‌ಗಳನ್ನು ಕಬಳಿಸಿ ಜೀವನಶ್ರೇಷ್ಠ ಬೌಲಿಂಗ್ ಸಂಘಟಿಸಿದರು. ಪ್ರಥಮ್ ಸಿಂಗ್ 36 ರನ್ ಗಳಿಸಿ ರೈಲ್ವೇಸ್ ಪರ ಅಗ್ರ ಸ್ಕೋರರ್ ಎನಿಸಿಕೊಂಡರು.

 14ನೇ ಓವರ್‌ನಲ್ಲಿ ಶಿವಕಾಂತ್ ಶುಕ್ಲಾ(13) ಅವರನ್ನು ಕ್ಲೀನ್ ಬೌಲ್ಡ್ ಮಾಡುವುದರೊಂದಿಗೆ ಗೌತಮ್ ರೈಲ್ವೇಸ್ ಬ್ಯಾಟಿಂಗ್ ಪತನಕ್ಕೆ ನಾಂದಿ ಹಾಡಿದರು. ರೈಲ್ವೇಸ್ ತಂಡದ ಬ್ಯಾಟ್ಸ್‌ಮನ್‌ಗಳನ್ನು ನಿರಂತರವಾಗಿ ಕಾಡಿದ ಗೌತಮ್ ದೊಡ್ಡ ಜೊತೆಯಾಟ ನಡೆಯದಂತೆ ನೋಡಿಕೊಂಡರು.

ರೈಲ್ವೇಸ್ 99 ರನ್ ಗಳಿಸುವಷ್ಟರಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಗೌತಮ್‌ಗೆ ಸಮರ್ಥ ಸಾಥ್ ನೀಡಿದ ಇನ್ನೋರ್ವ ಸ್ಪಿನ್ನರ್ ಎಸ್.ಗೋಪಾಲ್(2-59) ರೈಲ್ವೇಸ್ ತಂಡವನ್ನು 63 ಓವರ್‌ಗಳಲ್ಲಿ 167 ರನ್‌ಗಳಿಗೆ ಆಲೌಟ್ ಮಾಡಲು ನೆರವಾದರು.

ಈ ಋತುವಿನಲ್ಲಿ 1 ತ್ರಿಶತಕ, 4 ಶತಕಗಳ ಸಹಿತ ಒಟ್ಟು 1,064 ರನ್ ಗಳಿಸಿರುವ ಮಾಯಾಂಕ್ ಅಗರವಾಲ್ 104 ರನ್‌ನಿಂದ ನಾಲ್ಕನೇ ದಿನದಾಟವನ್ನು ಆರಂಭಿಸಿದರು. ದಿನದ 9ನೇ ಓವರ್‌ನಲ್ಲಿ 134 ರನ್ ಗಳಿಸಿದ್ದಾಗ ವಿನಿತ್ ಧುಲಪ್‌ಗೆ ವಿಕೆಟ್ ಒಪ್ಪಿಸಿದರು.

ಮಾಯಾಂಕ್ ಔಟಾಗಿ 5 ಓವರ್‌ಗಳ ಬಳಿಕ ಕರ್ನಾಟಕ 4 ವಿಕೆಟ್‌ಗಳ ನಷ್ಟಕ್ಕೆ 275 ರನ್‌ಗೆ 2ನೇ ಇನಿಂಗ್ಸ್ ಡಿಕ್ಲೇರ್ ಮಾಡಿತು. ಕರುಣ್ ನಾಯರ್ ಅಜೇಯ 20 ರನ್ ಗಳಿಸಿದ್ದರು. ಔಟಾಗದೇ 41 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ್ದ ನಿಶ್ಚಲ್ ನಿನ್ನೆಯ ಮೊತ್ತಕ್ಕೆ 4 ರನ್ ಸೇರಿಸಿ ಕರಣ್ ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X