Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಾನಪ್ರಸ್ಥ: ನಗರ-ಕಾಡುಗಳ ನಡುವಿನ...

ವಾನಪ್ರಸ್ಥ: ನಗರ-ಕಾಡುಗಳ ನಡುವಿನ ತಿಕ್ಕಾಟ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ29 Nov 2017 12:11 AM IST
share
ವಾನಪ್ರಸ್ಥ: ನಗರ-ಕಾಡುಗಳ ನಡುವಿನ ತಿಕ್ಕಾಟ

ಪುರಾತನ ಭಾರತೀಯ ಜೀವನ ವ್ಯವಸ್ಥೆಯಲ್ಲಿ ‘ವಾನಪ್ರಸ್ಥ’ ಆಶ್ರಮ ಮಹತ್ವದ್ದಾಗಿದೆ. ಬದುಕಿನ ಎಲ್ಲ ಹಂತಗಳನ್ನು ಅನುಭವಿಸಿ, ದಂಪತಿಗಳು ಕಾಡು ಸೇರಿ ಅಲ್ಲಿನ ನಿಸರ್ಗದತ್ತ ಜೀವನವನ್ನು ಅನುಭವಿಸುವುದನ್ನು ನಾವು ವಾನಪ್ರಸ್ಥ ವ್ಯವಸ್ಥೆಯಲ್ಲಿ ಕಾಣುತ್ತೇವೆ. ಬಹುಶಃ ಸದ್ಯದ ಜೀವನದಲ್ಲಿ, ವೃದ್ಧರು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವುದು ಆ ಸ್ಥಾನವನ್ನು ತುಂಬಿದೆ. ಪ್ರಾಚೀನ ಕಾಲದಲ್ಲಿ ದೇವಸ್ಥಾನಗಳು, ಪುಣ್ಯ ಕ್ಷೇತ್ರಗಳು ಎನ್ನುವುದು ಇರಲಿಲ್ಲ. ನದಿ ಮೂಲಗಳು, ಕಾಡು ಮೊದಲಾದ ಸ್ಥಳಗಳೇ ಪುಣ್ಯ ಸ್ಥಳಗಳು. ಡಾ. ಗಣೇಶ್ ದೇವಿ ತಮ್ಮ ‘ವಾನಪ್ರಸ್ಥ’ ಬದುಕನ್ನು ಇಲ್ಲಿ ವಿಭಿನ್ನವಾಗಿ ಮಂಡಿಸಿದ್ದಾರೆ. ಈ ಆಚರಣೆಗೆ ಒಂದು ಅರ್ಥಪೂರ್ಣ ವ್ಯಾಖ್ಯಾನವನ್ನು ಈ ಕೃತಿಯಲ್ಲಿ ನೀಡಿದ್ದಾರೆ.
ಗಣೇಶ್ ದೇವಿ ಬರೋಡೆಯ ಸನಿಹದಲ್ಲಿರುವ ತೇಜಗಡ ಎಂಬ ಆದಿವಾಸಿ ಹಾಡಿಯಲ್ಲಿ ತಮ್ಮ ವಾನಪ್ರಸ್ಥವನ್ನು ಆರಂಭಿಸಿದರು. ಆದಿವಾಸಿಗಳ ಅಸ್ಮಿತೆಯ ವಿಕಾಸವೇ ಈಗ ದೇವಿಯವರ ಉಳಿದ ಬದುಕಿನ ಆಯುಷ್ಯವಾಗಿದೆ. ಆಧುನಿಕ ಮತ್ತು ಪ್ರಾಚೀನತೆಯ ನಡುವಿನ ಸಮನ್ವಯ, ಬಿಕ್ಕಟ್ಟು, ಸಂಘರ್ಷ ಇವೆಲ್ಲವನ್ನೂ ಅವರ ವಾನಪ್ರಸ್ಥದಲ್ಲಿ ನಾವು ಕಾಣಬಹುದು. ಸಂಶೋಧನೆ ಮತ್ತು ಸೃಜನಶೀಲತೆಯ ಒಂದು ಅಪೂರ್ವ ರಸಾಯನವು ಓದುಗನನ್ನು ಪುಲಕಿತಗೊಳಿಸುತ್ತದೆ. ಉಪಭಾಷೆ, ಗುಜರಾತ್ ದಂಗೆ, ಕಾಡಿನ ನಾಶ ಇವೆಲ್ಲವನ್ನು ಒಂದಕ್ಕೊಂದು ಜೋಡಿಸುತ್ತಾ ಹೋಗುವ ಅವರ ನಿರೂಪಣೆಯ ಕ್ರಮ ಕುತೂಹಲಕಾರಿಯಾದುದು.
 ಈ ಕೃತಿಯಲ್ಲಿ ಮೂರು ಅಧ್ಯಾಯಗಳಿವೆ. ಕಾಡು ಅವರ ಮನದೊಳಗಿನ ಅಭಿವ್ಯಕ್ತಿಯಾಗಿ ಸಹಜ ರೀತಿಯಲ್ಲಿ ಹೊರಹೊಮ್ಮುತ್ತದೆ. ಪರಂಪರೆ, ಆಧುನಿಕತೆ, ನಿಸರ್ಗ, ನಗರ ಇವುಗಳ ನಡುವಿನ ತಿಕ್ಕಾಟಗಳನ್ನು ಅವರ ವಾನಪ್ರಸ್ಥ ತೆರೆದಿಡುತ್ತದೆ. ಆಧುನಿಕ ಆರ್ಥಿಕ ಗುಲಾಮಗಿರಿಗೆ ಸಿಕ್ಕಿ ಹಾಕಿಕೊಂಡ ಮನುಷ್ಯ ಹೇಗೆ ಕಾಡು ಮತ್ತು ಅದನ್ನು ಆಧರಿಸಿಕೊಂಡ ಜೀವವೈವಿಧ್ಯಗಳಿಗೆ ಕಾರಣನಾಗುತ್ತಾನೆ ಎನ್ನುವುದನ್ನೂ ಕೃತಿ ತೆರೆದಿಡುತ್ತದೆ. ಕಿಕ್ಯಾರಿಯಾ ಎನ್ನುವ ಶಬ್ದವನ್ನು, ಸ್ವರವನ್ನು ಇಟ್ಟುಕೊಂಡು ಅವರು ಗುಜರಾತ್‌ದಂಗೆಯನ್ನು ವಿಶ್ಲೇಷಿಸುವ ಪರಿ ನಮ್ಮನ್ನು ತಲ್ಲಣಿಸುವಂತೆ ಮಾಡುತ್ತದೆ. ಇದು ಸಂಶೋಧನಾತ್ಮಕ ಕೃತಿಯೂ ಹೌದು. ಸೃಜನಶೀಲ ಕೃತಿಯೂ ಹೌದು. ಅಥವಾ ಲೇಖಕರೇ ಹೇಳುವಂತೆ ಇದೊಂದು ಆತ್ಮಾನುಭೂತಿ. ಈ ಕೃತಿಯನ್ನು ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ತಂದಿದ್ದಾರೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 160 ರೂಪಾಯಿ.

share
-ಕಾರುಣ್ಯ
-ಕಾರುಣ್ಯ
Next Story
X