Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶ್ರಮಿಕರ ಕೈಗೆ ಆರ್ಥಿಕ ಶಕ್ತಿ ತುಂಬುವೆ:...

ಶ್ರಮಿಕರ ಕೈಗೆ ಆರ್ಥಿಕ ಶಕ್ತಿ ತುಂಬುವೆ: ದೇವೇಗೌಡ

‘ನಮ್ಮ ಟೈಗರ್’ ಟ್ಯಾಕ್ಸಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Nov 2017 9:30 PM IST
share
ಶ್ರಮಿಕರ ಕೈಗೆ ಆರ್ಥಿಕ ಶಕ್ತಿ ತುಂಬುವೆ: ದೇವೇಗೌಡ

ಬೆಂಗಳೂರು, ನ.29: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ, ಭಾಗ್ಯಗಳ ಬದಲು ಶ್ರಮಿಸುವ ಕೈಗಳಿಗೆ ಆರ್ಥಿಕ ಶಕ್ತಿ ತುಂಬುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಬುಧವಾರ ನಗರದ ಪುರಭವನದಲ್ಲಿ 'ನಮ್ಮ ಟೈಗರ್ ಕ್ಯಾಬ್' ಸೇವೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. 20 ತಿಂಗಳಲ್ಲಿ ಆಡಳಿತ ನಡೆಸಿ ಜನರ ಮೆಚ್ಚುಗೆಗೆ ಪಾತ್ರವಾದವರು. ಇನ್ನು ಐದು ತಿಂಗಳಷ್ಟೆ, ಮತ್ತೆ ನಮ್ಮದೇ ಪಕ್ಷ ಆಡಳಿತಕ್ಕೆ ಬರಲಿದೆ. ಬಳಿಕ ಯಾವುದೇ ಭಾಗ್ಯವನ್ನು ಕಲ್ಪಿಸುವುದಿಲ್ಲ. ಬದಲಿಗೆ ದುಡಿಯುವ ಕೈಗೆ ಆರ್ಥಿಕ ಶಕ್ತಿ ಕಲ್ಪಿಸುತ್ತೇವೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಉದ್ಯೋಗ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.

ಯಾರು ಎಷ್ಟೇ ಹೊಟ್ಟೆ ಕಿಚ್ಚುಪಟ್ಟರೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಾನು ಕೊಡುವ ಭಾಗ್ಯವಲ್ಲ, ನಾಡಿನ ಜನರು ನೀಡುವ ಭಾಗ್ಯವಾಗಿದೆ ಎಂದು ನುಡಿದರು.

ಎಲ್ಲೆಡೆ 'ಕುಮಾರಣ್ಣ ಕುಮಾರಣ್ಣ' ಎಂಬ ಕೂಗು ಎದ್ದಿದೆ. ಅಲ್ಲದೆ, ಪುತ್ರವಾತ್ಸಲ್ಯದಿಂದ ಲಾಂಛನ ಬಿಡುಗಡೆಗೆ ದೇವೇಗೌಡರು ಹೋಗಿದ್ದಾರೆ ಎಂದು ಟೀಕೆ ಬರಬಹುದು ಅದಕ್ಕೆ ನಾನು ಭಯಪಡೋದಿಲ್ಲ ಎಂದವರು, ಚಾಲಕರು ಸಂಸಾರವನ್ನು ನಡೆಸುವ ನಿಟ್ಟಿನಲ್ಲಿ ಉದ್ಯೋಗ ಕಲ್ಪಿಸುತ್ತೇವೆ. ಕೂತು ತಿನ್ನುವವರನ್ನು ಹಿಂದೆ ಸರಿಸಿ, ಚಾಲಕರಿಗೆ ಸಾಕಷ್ಟು ಸೌಲಭ್ಯ ಕೊಡಲು ನಮ್ಮ ಟೈಗರ್ ಸಂಸ್ಥೆ ನಿರ್ಧರಿಸಿದೆ. ಚಾಲಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಯೋಗ್ಯವಾದ ನಿರ್ಣಯ ಮಾಡಿದ್ದಾರೆ ಎಂದರು.

ರಾಜ್ಯದ ಸಂಪತ್ತನ್ನು ಉಳಿಸಿ ಬೆಳೆಸುವ ಕೆಲಸ ಮಾಡುವ ಸಲುವಾಗಿ ನಮ್ಮ ಟೈಗರ್ ಟ್ಯಾಕ್ಸಿಯ ಲಾಂಛನದಲ್ಲಿ ಹುಲಿ ಮುಖ ಇದೆ. ಆದರೆ, ಇದು ಯಾರನ್ನೂ ತಿನ್ನಲ್ಲ. ಲೂಟಿ ಮಾಡುವ ರಾಜಕಾರಣಿಗಳತ್ತ ಕಣ್ಣಿಡಲಿದೆ ಎಂದು ಹೇಳಿದರು.

ಈ ವೇಳೆ ಎಚ್‌ಡಿಕೆ ರಕ್ತದಾನಿಗಳ ಸಮಿತಿ ಲಾಂಛನವನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಚೌಡರೆಡ್ಡಿ, ಚಾಲಕ ಸಂಘದ ಅಧ್ಯಕ್ಷ ತನ್ವೀರ್ ಪಾಷಾ, ನಮ್ಮ ಟೈಗರ್ ಸಂಸ್ಥೆಯ ಸಂಸ್ಥಾಪಕ ಆದಿತ್ಯ ಪೊದ್ದರ್, ವ್ಯವಸ್ಥಾಪಕ ನಿರ್ದೇಶಕ ದೀಪಾಂಜಲ್ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X