Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ.2 ರಿಂದ ಮಸ್ತಕಾಭಿಷೇಕಕ್ಕೆ ಪೂರಕವಾದ...

ಡಿ.2 ರಿಂದ ಮಸ್ತಕಾಭಿಷೇಕಕ್ಕೆ ಪೂರಕವಾದ ವಿಶೇಷ ಕಾರ್ಯಕ್ರಮಗಳ ಪ್ರಸಾರ

ವಾರ್ತಾಭಾರತಿವಾರ್ತಾಭಾರತಿ30 Nov 2017 7:23 PM IST
share

ಬೆಂಗಳೂರು, ನ.30: ಮುಂದಿನ ವರ್ಷ ನಡೆಯಲಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ ಆಕಾಶವಾಣಿಯಿಂದ ಡಿ.2 ರಿಂದ ಫೆ.20 ರವರೆಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಕಾಶವಾಣಿಯ ನಿರ್ದೇಶಕಿ ಎಚ್.ಎಸ್.ಸರಸ್ವತಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶವಾಣಿಯ ದೈನಂದಿನ ಕಾರ್ಯಕ್ರಮಗಳ ಜತೆಗೆ ಮಹಾ ಮಸ್ತಕಾಭಿಷೇಕ ಸಂದರ್ಭಕ್ಕೆ ಪೂರಕವಾದ ವಿಶೇಷ ಕಾರ್ಯಕ್ರಮಗಳ ಯೋಜನೆ ಸಿದ್ಧಪಡಿಸಲಾಗಿದೆ. ಹೊಸ ಪೀಳಿಗೆಯ ಯುವ ಕೇಳುಗರಿಗೆ, ಕರ್ನಾಟಕ ಜೈನ ಧರ್ಮೀಯರ ಪರಂಪರೆ, ಇತಿಹಾಸ, ಧಾರ್ಮಿಕತೆ ಸೇರಿದಂತೆ ಅನೇಕ ಅಂಶಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.

ಆಕಾಶವಾಣಿ ಸಹ ನಿರ್ದೇಶಕ ಡಾ.ಎನ್.ರಘು ಮಾತನಾಡಿ, ಡಿ.2 ರಿಂದ ಆರಂಭವಾಗುವ ವಿಶೇಷ ಸರಣಿಯಲ್ಲಿ ಐದು ಭಾಗಗಳಾಗಿ ಕಾರ್ಯಕ್ರಮಗಳನ್ನು ವಿಂಗಡನೆ ಮಾಡಿದ್ದು, ಅದರಲ್ಲಿ ಜಿನ ವಂದನ, ಜಿನ ಚಿಂತನ, ಜಿನ ದರ್ಶನ, ಜಿನ ಸೌರಭ ಹೆಸರಿನಲ್ಲಿ ನಡೆಯುತ್ತದೆ. ಜೈನ ಕವಿಗಳ ಸಾಹಿತ್ಯ ಸಾಧನೆಯ ಕುರಿತ ರೂಪಕಗಳು, ರಾಜ್ಯದ ವಿವಿಧ ಪ್ರದೇಶಗಳನ್ನಾಳಿದ ಜೈನ ರಾಜವಂಶಗಳ ಪರಿಚಯ, ಪ್ರಸಿದ್ಧ ಜೈನ ತೀರ್ಥ ಕ್ಷೇತ್ರಗಳು, ಜೈನ ಭಕ್ತಿಗೀತೆಗಳು, ಜೈನ ಪರಂಪರೆಯ ವಿವಿಧ ವಿಚಾರಗಳ ಕುರಿತ ಚಿಂತನೆಗಳು, ಬಾನುಲಿ ಭಾಷಣಗಳು, ಆಸಕ್ತ ಶ್ರೋತೃವರ್ಗಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದರು.

ಪಂಡಿತ ರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಗಳು ಸಂಪಾದಿಸಿರುವ ಜಿನಭಜನಸಾರ ಮತ್ತು ರತ್ನಾಕರವರ್ಣಿ ವಿರಚಿತ ಅಣ್ಣನ ಹಾಡುಗಳಿಂದ ಆಯ್ದ 30 ಸಾಂಪ್ರದಾಯಿಕ ಜಿನ ಭಕ್ತಿಗೀತೆಗಳನ್ನು ರಾಜ್ಯದ ಐದು ಕೇಂದ್ರಗಳಿಂದ ಪ್ರಸಾರವಾಗಲಿವೆ. ಅಲ್ಲದೆ, ಮೊದಲಬಾರಿಗೆ ನಯನಸೇನನ ಧರ್ಮಾಮೃತ ಮತ್ತು ವಡ್ಡಾರಾಧನೆಯ ಕಥೆಗಳನ್ನು ಆಧರಿಸಿ ಕಿರು ನಾಟಕಗಳ ಸರಣಿಗಳು ಪ್ರಸಾರ ಮಾಡಲಾಗುತ್ತಿದೆ ಹಾಗೂ ಜೈನ ಧರ್ಮದ ಕುರಿತು ಸಾಹಿತಿ ಮತ್ತು ಚಿಂತಕರ 14 ನಿಮಿಷಗಳ ಭಾಷಣವನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಮಹಾಮಸ್ತಕಾಭಿಷೇಕದ ಅಂಗವಾಗಿ ಯುವಜನರನ್ನು ಆಕರ್ಷಿಸಲು ಫೋನ್ ಇನ್ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜ.10, 11, 12 ರಂದು ರಾಜ್ಯಮಟ್ಟದ ಯುವ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ, ಫೆ.10 ರಿಂದ 20 ರವರೆಗೆ ಶ್ರವಣಬೆಳಗೊಳದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮ ಕುರಿತು ಐದು ನಿಮಿಷಗಳ ಮಾಹಿತಿ ಪ್ರಸಾರ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X