Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂತರ್ಜಾಲದಲ್ಲಿ ಪುಸ್ತಕ ಮಾರಾಟ...

ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ30 Nov 2017 7:31 PM IST
share

ಬೆಂಗಳೂರು, ನ.29: ಕನ್ನಡ ಪುಸ್ತಕ ಪ್ರಾಧಿಕಾರವು ಆರಂಭಿಸಿರುವ ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆಗೆ ಕಾಮಧೇನು ಪುಸ್ತಕ ಭವನದ ಮುಖ್ಯಸ್ಥ ಡಿ.ಕೆ.ಶ್ಯಾಮಸುಂದರರಾವ್ ಗುರುವಾರ ಚಾಲನೆ ನೀಡಿದರು.

ಪುಸ್ತಕ ಹೀಗೆ ಖರೀದಿಸಿ: ಪುಸ್ತಕ ಪ್ರಾಧಿಕಾರದ ಜಾಲತಾಣಕ್ಕೆ ಭೇಟಿ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನಂತರ ಪ್ರಾಧಿಕಾರ ಪ್ರಕಟಿಸಿರುವ ಪುಸ್ತಕಗಳಲ್ಲಿ ಯಾವುದನ್ನು ಕೊಳ್ಳಬೇಕೊ, ಅವುಗಳನ್ನು ಆಯ್ಕೆ ಮಾಡಬೇಕು. ಬಳಿಕ ಆನ್‌ಲೈನ್ ಮೂಲಕ ಪುಸ್ತಕಗಳ ಬೆಲೆಯ ಮೊತ್ತವನ್ನು ಪಾವತಿಸಬೇಕು. ನೋಂದಾಯಿಸಿದ ವಿಳಾಸಕ್ಕೆ ಪ್ರಾಧಿಕಾರವು ಸ್ಪೀಡ್‌ಪೋಸ್ಟ್ ಮೂಲಕ ಪುಸ್ತಕಗಳನ್ನು ಕಳುಹಿಸಿಕೊಡುತ್ತದೆ. ಅಂಚೆ ವೆಚ್ಚವನ್ನು ಗ್ರಾಹಕರೆ ಭರಿಸಬೇಕು.

ಮಾಜಿ ಶಾಸಕಿ ಬಿ.ಟಿ.ಲಲಿತಾನಾಯಕ್ ಮಾತನಾಡಿ, ಹೊಟ್ಟೆಗೆ ಆಹಾರ ಸೇವಿಸುವಂತೆ, ಮೆದುಳಿಗೆ ಮೇವು ಹಾಕಲು ಪುಸ್ತಕಗಳನ್ನು ಓದಬೇಕು. ಜಗತ್ತಿನ ಬಹುತೇಕ ಬದಲಾವಣೆಗಳು ಪುಸ್ತಕಗಳಿಂದಲೆ ಆಗಿವೆ. ವಿದ್ಯಾರ್ಥಿಗಳು ಹೆಚ್ಚು ಓದಬೇಕು, ಅದುವೆ ಸರಸ್ವತಿಪೂಜೆ. ಎಲ್ಲರೂ ವಯಸ್ಸಿನ ಭೇದವಿಲ್ಲದೆ ಹೊಸದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡುತ್ತ, ಪ್ರಾಧಿಕಾರದ ಮಳಿಗೆ ಅಥವಾ ಜಾಲತಾಣದಲ್ಲಿ ಖರೀದಿಸುವ ಪುಸ್ತಕಗಳಿಗೆ ಶೇ.15ರಿಂದ ಶೇ.50 ರವರೆಗೆ ರಿಯಾಯಿತಿ ನೀಡಿದ್ದೇವೆ. ಅವುಗಳಲ್ಲಿ ಹಳೆಯ ಪುಸ್ತಕಗಳು ಇವೆ. ರಾಜ್ಯದ ಎಲ್ಲ ಊರುಗಳಿಗೂ ಪುಸ್ತಕಗಳನ್ನು ಅಂಚೆ ಮೂಲಕ ಕಳುಹಿಸುತ್ತೇವೆ. ಓದುಗರು ಹೊಸ ವ್ಯವಸ್ಥೆಯ ಉಪಯೋಗ ಪಡೆಯಬೇಕು ಎಂದರು.

ಪ್ರಾಧಿಕಾರವು ಹಲವಾರು ಪ್ರಕಾಶಕರಿಂದ ಸಾವಿರಾರು ಪುಸ್ತಕಗಳನ್ನು 14 ಮತ್ತು 15ನೆ ಸಗಟು ಖರೀದಿ ಯೋಜನೆಯಡಿ ಖರೀದಿಸಿದೆ. ಅವುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸರಕಾರಿ ಶಾಲೆಗಳ ಮಕ್ಕಳಿಗೆ ಹಂಚುತ್ತೇವೆ. ಪ್ರಕಾಶಕರು ಮತ್ತು ಪುಸ್ತಕದ ವ್ಯಾಪಾರಿಗಳಿಗೆ ಜಿಎಸ್‌ಟಿ ಕುರಿತು ಇರುವ ಗೊಂದಲಗಳನ್ನು ನಿವಾರಿಸಲು ಕಾರ್ಯಕ್ರಮ ಆಯೋಜಿಸುತ್ತೇವೆ. ಡಿಸೆಂಬರ್ ಅಥವಾ ಜನವರಿಯಲ್ಲಿ ಪ್ರಕಾಶಕರ ಸಮಾವೇಶ ಏರ್ಪಡಿಸುತ್ತೇವೆ. ಮುಂಬರುವ ದಿನಗಳಲ್ಲಿ ಪುಸ್ತಕ ಮೇಳ, ಸಂಚಾರಿ ಪುಸ್ತಕ ಜಾಥಾ ಆಯೋಜಿಸುತ್ತೇವೆ ಎಂದು ಮಾಹಿತಿ ನೀಡಿದರು.

ಲೇಖಕ ನಾ.ಸೋಮೇಶ್ವರ, ಹಲವಾರು ವಿಷಯಗಳ ಕುರಿತು ಕನ್ನಡದಲ್ಲಿ ಪುಸ್ತಕಗಳು ಇಲ್ಲ. ಅಂತಹ ವಿಷಯಗಳನ್ನು ಪಟ್ಟಿ ಮಾಡಿ, ಪ್ರಾಧಿಕಾರ ತಜ್ಞರಿಂದ ಹೊತ್ತಗೆಗಳನ್ನು ರಚಿಬೇಕು ಎಂದು ಮನವಿ ಮಾಡಿದರು.

ಮಹಿಳೆಯರ ಕುರಿತು ‘ಲೋಕಕಾಣದ ಲೋಕ’, ಕರಕುಶಲತೆ, ಆಹಾರ ಪದ್ಧತಿ ಹಾಗೂ ವಿಜ್ಞಾನದ ಕುರಿತ ‘ದೇಶಿ ಜ್ಞಾನ’ ಮತ್ತು ‘ಪುಸ್ತಕೋದ್ಯಮ ಚರಿತೆ’ ಎಂಬ ಹೊಸ ಪುಸ್ತಕಗಳನ್ನು ತಜ್ಞರಿಂದ ರಚಿಸಲು ಪ್ರಾಧಿಕಾರ ನಿರ್ಧರಿಸಿದೆ.

-ಡಾ.ವಸುಂಧರಾ ಭೂಪತಿ, ಅಧ್ಯಕ್ಷೆ, ಕನ್ನಡ ಪುಸ್ತಕ ಪ್ರಾಧಿಕಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X