Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. "ಭೂ ನ್ಯಾಯ ಮಂಡಳಿ ಬೈಠಕ್ ಸ್ಥಗಿತಕ್ಕೆ...

"ಭೂ ನ್ಯಾಯ ಮಂಡಳಿ ಬೈಠಕ್ ಸ್ಥಗಿತಕ್ಕೆ ಶಾಸಕಿ ಶಕುಂತಳಾ ಕಾರಣ"

ಮಾಜಿ ಸದಸ್ಯ ಪುರುಷೋತ್ತಮ ರೈ ಆರೋಪ

ವಾರ್ತಾಭಾರತಿವಾರ್ತಾಭಾರತಿ30 Nov 2017 7:36 PM IST
share

ಪುತ್ತೂರು,ನ.30 : ವಾರಕ್ಕೊಮ್ಮೆ ನಡೆಯುತ್ತಿದ್ದ ಪುತ್ತೂರು ಭೂ ನ್ಯಾಯ ಮಂಡಳಿ ಸಮಿತಿಯ ಬೈಠಕ್ ಕಳೆದ 2 ತಿಂಗಳಿಂದ ನಡೆಯದೆ ಯಾವುದೇ ತೀರ್ಮಾನ ಕೈಗೊಳ್ಳಲಾಗದ ಕಾರಣ ಬಡ ಗೇಣಿದಾರರಿಗೆ ಅನ್ಯಾಯವಾಗುತ್ತಿದೆ. ಈ ಸ್ಥಿತಿ ನಿರ್ಮಾಣಕ್ಕೆ ಸಂಸದೀಯ ಕಾರ್ಯದರ್ಶಿಯಾಗಿರುವ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರೇ ಕಾರಣ ಎಂದು ಭೂನ್ಯಾಯ ಮಂಡಳಿಯ ಮಾಜಿ ಸದಸ್ಯ ಬೂಡಿಯಾರು ಪುರುಷೋತ್ತಮ ರೈ ಆರೋಪಿಸಿದ್ದಾರೆ.

ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2014 ರ ಜನವರಿ 28 ರಂದು ಈಗಿನ ಸರ್ಕಾರದ ಭೂ ನ್ಯಾಯ ಮಂಡಳಿ ಸಮಿತಿ ರಚನೆಯಾಗಿದ್ದು, 4 ವರ್ಷಗಳಲ್ಲಿ ಕೆಲವು ತಿದ್ದುಪಡಿ ಹೊರತುಪಡಿಸಿ ಒಂದೇ ಒಂದು ತೀರ್ಮಾನ ಕೈಗೊಳ್ಳಲು ಸಮಿತಿಗೆ ಸಾಧ್ಯವಾಗಿಲ್ಲ. ಈ ಅವಧಿಯಲ್ಲಿ 3-4 ಮಂದಿ ಉಪವಿಭಾಗಾಧಿಕಾರಿಗಳು ಬಂದು ವರ್ಗಾವಣೆಯಾಗಿ ಹೋಗಿರುವುದೇ ಸಮಸ್ಯೆಗೆ ಮುಖ್ಯ ಕಾರಣವಾಗಿದೆ ಎಂದರು.

ಆದೇಶ ಉಲ್ಲಂಘನೆ-ಜಿಲ್ಲಾಧಿಕಾರಿಗೆ ದೂರು
ಎರಡು ತಿಂಗಳ ಹಿಂದೆ ಭೂ ನ್ಯಾಯ ಮಂಡಳಿ ಸಮಿತಿಯಿಂದ ತಮ್ಮನ್ನು ವಜಾಗೊಳಿಸಿ ಲಕ್ಷ್ಮಣ ಎಂಬವರನ್ನು ಆಯ್ಕೆ ಮಾಡಲಾಗಿದೆ. ಆದರೆ ನ್ಯಾಯಾಲಯದಿಂದ ಈ ಕ್ರಮಕ್ಕೆ ತಾನು ತಡೆಯಾಜ್ಞೆ ತಂದಿದ್ದೇನೆ. ಆದರೂ ನ್ಯಾಯಾಲಯದ ಆದೇಶವನ್ನು ಪಾಲಿಸದೆ ನಿಯಮ ಉಲ್ಲಂಘಿಸಲಾಗಿದೆ. ಶಾಸಕರು ತಹಶೀಲ್ದಾರರಿಗೆ ಒತ್ತಡ ಹೇರಿ ನ್ಯಾಯಾಲಯದ ಆದೇಶ ಪಾಲನೆಯಾಗದಂತೆ ಮಾಡಿದ್ದಾರೆ ಎಂದು ಆರೋಪಿಸಿದ ಪುರುಷೋತ್ತಮ ರೈ ಅವರು ಈ ಕುರಿತು ಜಿಲ್ಲಾಧಿಕಾರಿಯವರಿಗೆ ದೂರು ನೀಡಿರುವುದಾಗಿ ತಿಳಿಸಿದರು. 

ಭೂ ನ್ಯಾಯ ಮಂಡಳಿ ಸಮಿತಿಗೆ ಹೊಸದಾಗಿ ನೇಮಿಸಿರುವವರನ್ನೇ ಮುಂದುವರೆಸಲು ಶಾಸಕರು ಇಚ್ಚಿಸಿದಲ್ಲಿ ತಾನೂ ಹೋರಾಟ ಮುಂದುವರೆಸುವುದಾಗಿ ಅವರು ಎಚ್ಚರಿಸಿದರು.  

ತಮ್ಮನ್ನು ಭೂನ್ಯಾಯ ಮಂಡಳಿಯ ಸದಸ್ಯತನದದಿಂದ ವಜಾಗೊಳಿಸಿರುವ ಕುರಿತು ಅ.7 ರಂದು ಮನೆಯ ಗೋಡೆಗೆ ನೋಟೀಸ್ ಅಂಟಿಸಿರುವುದಾಗಿ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ. ಆದರೆ ತನಗೆ ಗ್ರಾಮಕರಣಿಕರು ಈ ಕುರಿತಾದ ನೊಟೀಸ್‍ನ್ನು ನೀಡಿರುವುದು ಅ.18 ರಂದು ಎಂದ ಅವರು ನೊಟೀಸ್ ನೀಡುವ ವಿಚಾರದಲ್ಲಿಯೂ ಅಧಿಕಾರಿಗಳು ಕಾನೂನು ನಿಯಮವನ್ನು ಮೀರಿದ್ದಾರೆ. ಈ ಕುರಿತು ರಾಜ್ಯ ಕಾರ್ಯದರ್ಶಿಯವರಿಗೂ ದೂರು ನೀಡಿದ್ದೇನೆ ಎಂದರು.

ನ್ಯಾಯ ಒದಗಿಸಿ
ಭೂ ನ್ಯಾಯ ಮಂಡಳಿಯ ಬೈಠಕ್ ಸರಿಯಾಗಿ ನಡೆಯದೇ ಇರುವುದರಿಂದ ಹಲವು ಮಂದಿ ಗೇಣಿದಾರರು ನ್ಯಾಯ ವಂಚಿತರಾಗಿದ್ದಾರೆ. ತಿದ್ದುಪಡಿಗಾಗಿ 6 ವರ್ಷಗಳಿಂದ ಕಾಯುತ್ತಿರುವವರು, ರಾಜಿಯಲ್ಲಿ ಮುಗಿಸಲು ಸಾಧ್ಯವಿದ್ದರೂ 40 ವರ್ಷಗಳಿಂದ ಮುಂದುವರೆದಿರುವ ಪ್ರಕರಣಗಳು ಇನ್ನೂ ಬಾಕಿ ಇವೆ ಎಂದ ಪುರುಷೋತ್ತಮ ರೈ ಅವರು  ಶಾಸಕರು ಮತ್ತು ಸರ್ಕಾರ  ಇವರಿಗೆ ನ್ಯಾಯ ಒದಗಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಚಂದ್ರಶೇಖರ ಗೌಡ ಬಡಗನ್ನೂರು, ಗುರ್ಮಣ್ಣ ಗೌಡ ಬಜತ್ತೂರು, ವೀರಪ್ಪ ಗೌಡ ಬಜತ್ತೂರು, ಬಾಪ ಕುಂಞಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X