Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನವರಿ 1ರಿಂದ ಕಾಪು ತಾಲೂಕು: ಮಿನಿ...

ಜನವರಿ 1ರಿಂದ ಕಾಪು ತಾಲೂಕು: ಮಿನಿ ವಿಧಾನಸೌಧಕ್ಕೆ ಯೋಜನೆ ಸಿದ್ಧ

ಕಾಪು ಪುರಸಭೆಯಲ್ಲಿ ಶಾಸಕ ಸೊರಕೆ

ವಾರ್ತಾಭಾರತಿವಾರ್ತಾಭಾರತಿ30 Nov 2017 9:12 PM IST
share
ಜನವರಿ 1ರಿಂದ ಕಾಪು ತಾಲೂಕು: ಮಿನಿ ವಿಧಾನಸೌಧಕ್ಕೆ ಯೋಜನೆ ಸಿದ್ಧ

ಪಡುಬಿದ್ರಿ,ನ.30: ಈಗಿರುವ ಬಂಗ್ಲೆ ಪ್ರದೇಶದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೂ ಯೋಜನೆ ಸಿದ್ದಪಡಿಸಲಾಗಿದ್ದು, ಕಾಪು ತಾಲ್ಲೂಕು ಕೇಂದ್ರವಾಗಿ ಜನವರಿ ಒಂದರಿಂದ ಕಾರ್ಯಾಚರಿಸಲಿದೆ ಎಂದು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.

ಅವರು  ಶುಕ್ರವಾರ ನಡೆದ ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ತಿಳಿಸಿದ ಅವರು, ಪುರಸಭೆ ವ್ಯಾಪ್ತಿಯಲ್ಲಿ ಸ್ಥಳಾವಕಾಶದ ಕೊರತೆಯಿದ್ದು, ಅರಣ್ಯ ಇಲಾಖೆಗೆ ಸೇರಿದ ಒಂದು ವಸತಿಗೃಹವನ್ನು ತೆರವುಗೊಳಿಸಲು ಮನವಿ ಮಾಡಲಾಗಿದೆ ಎಂದರು. 

ಪುರಸಭೆಯ 23ನೇ ವಾರ್ಡ್‍ನಲ್ಲಿ  ಪರಿಶಿಷ್ಟ ಪಂಗಡದವರಿಗೆ ಸಮುದಾಯ ಭವನ ನಿರ್ಮಿಸಲು ರೂ. 84 ಲಕ್ಷ ಮಂಜೂರಾಗಿ ಟೆಂಡರ್ ಆಗಿದೆ. ಭವನ ನಿರ್ಮಾಣಕ್ಕೆ 20 ಸೆಂಟ್ಸ್ ಜಾಗ ಬೇಕಾಗಿದ್ದು, ಸರಕಾರಿ ಜಮೀನಿನ ಕೊರತೆ ಇದೆ ಎಂದು ಮುಖ್ಯಾಧಿಕಾರಿ ರಾಯಪ್ಪ ಹೇಳಿದರು. 
ಈ ಬಗ್ಗೆ ಮಾತನಾಡಿದ ಸೊರಕೆ, ಕಾಪು ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನಿನ ಕೊರತೆ ಇದ್ದು, ಅನುದಾನ ಹೊಂದಿಕೆ ಮಾಡಿಕೊಂಡು ಕಡಿಮೆ ಬೆಲೆಗೆ ಖಾಸಗಿ ಜಮೀನು ಖರೀದಿಸಲು ಮುಂದಾಗುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಕಾಪುವಿನ ಮೇಲ್ದರ್ಜೆಗೇರಿರುವ ಸಮುದಾಯ ಆಸ್ಪತ್ರೆಯು ಮುಂದೆ ತಾಲ್ಲೂಕು ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳಲಿದೆ. ಪುರಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ದಾನಿಗಳ ಹಾಗೂ ಅನಿವಾಸಿ ಭಾರತೀಯರ ಸಹಾಯಹಸ್ತವನ್ನೂ ಚಾಚಾಲಾಗುವುದು ಎಂದು ಸೊರಕೆ ನುಡಿದರು. 

ನಗರ ಯೋಜನಾ ಪ್ರಾಧಿಕಾರವು ಬೆಂಗಳೂರು ನಗರ ಮಾನದಂಡವನ್ನು ಅನುಸರಿಸಿದ ಪರಿಣಾಮ ಜನರಿಗೆ ತೊಂದರೆಯಾಗುತ್ತಿದೆ. ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರಿನಲ್ಲಿಯೇ ಕುಳಿತು ತರಾತುರಿಯಲ್ಲಿ ಭೂಪರಿವರ್ತನೆ, ಭೂ ನಕ್ಷೆಯನ್ನು ಗೂಗಲ್‍ನಲ್ಲಿ ಸಿದ್ದಪಡಿಸಿದ್ದಾರೆ. ಪ್ರಾಧಿಕಾರದಲ್ಲಿ ಅಧಿಕಾರಿಗಳು ಇಲ್ಲದೆ ಜನರಿಗೆ ತೊಂದರೆಯಾಗುತ್ತಿದೆ. ಸ್ಥಳೀಯ ನಿಯಮ ಅಳವಡಿಸಿ ವಲಯ ರಚನೆ ಮಾಡುವಂತೆ ಸದಸ್ಯರಾದ ಅರುಣ್ ಶೆಟ್ಟಿ ಹಾಗೂ ಕಿರಣ್ ಆಳ್ವ ಒತ್ತಾಯಿಸಿದರು. 

ಪ್ರಾಧಿಕಾರ ರಚನೆ ಆಗುವ ಮೊದಲೇ ಭೂ ಪರಿವರ್ತನೆ, ನಕ್ಷೆ ಸಿದ್ದ ಪಡಿಸಲಾಗಿದೆ. ಪ್ರಾಧಿಕಾರದ ಸಭೆ ಡಿಸೆಂಬರ್ 5 ರಂದು ನಡೆಯಲಿದೆ. ಈ ಸಭೆಯಲ್ಲಿ ಸದಸ್ಯರು ವಿಷಯ ಪ್ರಸ್ತಾಪಿಸುವಂತೆ ಮುಖ್ಯಾಧಿಕಾರಿ ರಾಯಪ್ಪ ಸೂಚಿಸಿದರು.

ಗ್ರಾಮೀಣ ಪ್ರದೇಶದ ಎಸ್‍ಸಿ, ಎಸ್‍ಟಿ ಜನರಿಗೆ ಅಡುಗೆ ಅನಿಲ ವಿತರಣೆ ಮಾಡಲಾಗಿದೆ. ಆದರೆ ಪುರಸಭೆ ವ್ಯಾಪ್ತಿಯ ಜನರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಸದಸ್ಯೆ ಸುಲೋಚನಾ ಬಂಗೇರ ಅಲವತ್ತುಕೊಂಡರು. ಪುರಸಭಾ ವ್ಯಾಪ್ತಿಯಲ್ಲಿ ಮನೆ ದುರಸ್ತಿಗೆ ಅನುದಾನ ನೀಡದಿರುವ ಬಗ್ಗೆ ಹಮೀದ್ ಮೂಳೂರು ಬೇಸರ ವ್ಯಕ್ತಪಡಿಸಿದರು. ಇದಕ್ಕುತ್ತರಿಸಿದ ಮುಖ್ಯಾಧಿಕಾರಿ, ಎಸ್‍ಎಫ್‍ಸಿ ಅನುದಾನದಲ್ಲಿ ಎಸ್‍ಸಿ, ಎಸ್‍ಟಿ ಜನರಿಗೆ ಅನಿಲ ಭಾಗ್ಯ ಕಲ್ಪಿಸಲಾಗುವುದು. ಪುರಸಭೆಯ ಆದಾಯ ಹೆಚ್ಚಿಸಿದಲ್ಲಿ ಬಜೆಟ್‍ನಲ್ಲಿ ಮನೆ ದುರಸ್ತಿಗೆ ಅನುದಾನ ಮೀಸಲಿಡುವುದಾಗಿ ಭರವಸೆ ನೀಡಿದರು.
ಪುರಸಭಾ ಅಧ್ಯಕ್ಷೆ ಸೌಮ್ಯಾ, ಉಪಾಧ್ಯಕ್ಷ ಕೆ.ಎಚ್. ಉಸ್ಮಾನ್, ಸ್ಥಾಯೀ ಸಮಿತಿ ಅಧ್ಯಕ್ಷೆ ಶಾಂತಲತಾ ಶೆಟ್ಟಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X