Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರ...

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವೇ ಹೆಚ್ಚು

ವಾರ್ತಾಭಾರತಿವಾರ್ತಾಭಾರತಿ1 Dec 2017 7:43 PM IST
share
ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವೇ ಹೆಚ್ಚು

ಹೊಸದಿಲ್ಲಿ, ಡಿ.1: 2014-16ರ ಅವಧಿಯಲ್ಲಿ ಪರಿಶಿಷ್ಟ ಜಾತಿಗಳ ವಿರುದ್ಧ ನಡೆದಿರುವ  ಅಪರಾಧ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಪರಿಶಿಷ್ಟ ಜಾತಿಗಳ ಮಹಿಳೆಯರ ವಿರುದ್ಧ ನಡೆದಿದೆ ಎಂದು ಗುರುವಾರ ಬಿಡುಗಡೆಗೊಂಡಿರುವ ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ(ಎನ್‌ಸಿಆರ್‌ಬಿ) ದ ವರದಿಯಲ್ಲಿ ತಿಳಿಸಲಾಗಿದೆ.

 ಈ ಅಂಕಿಅಂಶದಲ್ಲಿ ಪೊಲೀಸರಲ್ಲಿ ದಾಖಲಾಗಿರುವ ದೂರನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಎನ್‌ಸಿಆರ್‌ಬಿ ತಿಳಿಸಿದೆ. ನಗರಪ್ರದೇಶಗಳಲ್ಲಿ ಜಾತಿ ಆಧಾರದಲ್ಲಿ ವ್ಯಕ್ತಿಯನ್ನು ಗುರುತಿಸುವ ಪ್ರಕರಣಗಳು ಕಡಿಮೆ ಎಂಬ ಊಹೆಯನ್ನು ಈ ಅಂಕಿಅಂಶ ಸುಳ್ಳಾಗಿಸಿದೆ. ಎನ್‌ಸಿಆರ್‌ಬಿ ಅಂಕಿಅಂಶದ ಪ್ರಕಾರ ಉತ್ತರಪ್ರದೇಶದಲ್ಲಿ ಅತ್ಯಧಿಕ ದಲಿತ ದೌರ್ಜನ್ಯ ಪ್ರಕರಣ (ಶೇ.25.6) ದಾಖಲಾಗಿದ್ದರೆ, ಬಿಹಾರ (ಶೇ.14) ಮತ್ತು ರಾಜಸ್ತಾನ(ಶೇ.12.6) ಆ ಬಳಿಕದ ಸ್ಥಾನದಲ್ಲಿವೆ. ಕರ್ನಾಟಕದಲ್ಲಿ 1,869 (ಶೇ.4.3) ಪ್ರಕರಣ ನಡೆದಿದೆ . ಅಪರಾಧ ಪ್ರಕರಣದಲ್ಲಿ ಮಧ್ಯಪ್ರದೇಶ ನಾಲ್ಕನೇ ಸ್ಥಾನದಲ್ಲಿದ್ದರೆ , ಅಪರಾಧ ಪ್ರಮಾಣ ದರದಲ್ಲಿ ಮಧ್ಯಪ್ರದೇಶ ಪ್ರಥಮ ಸ್ಥಾನದಲ್ಲಿದೆ(ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಜನಸಂಖ್ಯೆ ಮತ್ತು ದಾಖಲಾಗಿರುವ ಅಪರಾಧ ಪ್ರಕರಣ ಸಂಖ್ಯೆಯ ಆಧಾರದಲ್ಲಿ ಅಪರಾಧ ಪ್ರಮಾಣ ದರವನ್ನು ಅಂದಾಜಿಸಲಾಗುತ್ತದೆ).

ಅತ್ಯಧಿಕ ದಲಿತ ದೌರ್ಜನ್ಯ ದಾಖಲಾಗಿರುವ 19 ಮೆಟ್ರೊಪಾಲಿಟನ್ ನಗರದ ಪಟ್ಟಿಯಲ್ಲಿ ಕೂಡಾ ಉತ್ತರಪ್ರದೇಶದ ಲಕ್ನೊ ನಗರ ಪ್ರಥಮ ಸ್ಥಾನದಲ್ಲಿದ್ದರೆ, ಪಾಟ್ನಾ ಮತ್ತು ಜೈಪುರ ಆ ಬಳಿಕದ ಸ್ಥಾನದಲ್ಲಿವೆ. 2015ರಲ್ಲಿ ಭಾರತದಲ್ಲಿ 38,670 ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದರೆ 2016ರಲ್ಲಿ ಈ ಸಂಖ್ಯೆ 40,801ಕ್ಕೆ ತಲುಪಿದೆ. ದಾಖಲಾಗಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಬಹುತೇಕ ಮಹಿಳೆಯರ ವಿರುದ್ಧ ನಡೆದಿರುವ ಅಪರಾಧ ಪ್ರಕರಣಗಳಾಗಿದ್ದು ಹಲ್ಲೆ, ಲೈಂಗಿಕ ಪೀಡನೆ, ಹಿಂಬಾಲಿಸುವುದು, ಚುಡಾಯಿಸುವುದು, ಅಶ್ಲೀಲ ಪದ ಬಳಸಿ ನಿಂದಿಸುವುದು ಇತ್ಯಾದಿ ಸೇರಿದೆ.

 ಮಹಿಳೆಯರ ವಿರುದ್ಧ ನಡೆದ ಅಪರಾಧದ ಪ್ರಮಾಣ ದಿಲ್ಲಿಯಲ್ಲಿ ಅಧಿಕವಾಗಿದ್ದು 2016ರಲ್ಲಿ ದಿಲ್ಲಿಯಲ್ಲಿ 15,310 ಪ್ರಕರಣ ದಾಖಲಾಗಿದೆ. ಮಹಿಳೆಯರ ವಿರುದ್ಧ ನಡೆದಿರುವ ಅಪರಾಧ ಪ್ರಕರಣದಲ್ಲಿ ಬಹುತೇಕ ಪ್ರಕರಣಗಳು, ಅಂದರೆ ಶೇ.32.6ರಷ್ಟು ಪತಿ ಅಥವಾ ಪತಿಯ ಸಂಬಂಧಿಕರಿಂದ ನಡೆದಿರುವ ಕ್ರೌರ್ಯ ಪ್ರಕರಣಗಳಾಗಿವೆ. ಶೇ.25ರಷ್ಟು ಪ್ರಕರಣ ಶೀಲ ಶಂಕಿಸಿ ನಡೆದಿರುವ ಹಲ್ಲೆ ಪ್ರಕರಣಗಳಾಗಿದ್ದರೆ, ಶೇ.19ರಷ್ಟು ಪ್ರಕರಣಗಳು ಮಹಿಳೆಯರ ಅಪಹರಣ ಹಾಗೂ ಶೇ.11.5ರಷ್ಟು ಅತ್ಯಾಚಾರ ಪ್ರಕರಣಗಳಾಗಿವೆ. 2016ರಲ್ಲಿ ದೇಶದಲ್ಲಿ ಮಹಿಳೆಯರ ಮೇಲೆ ನಡೆದಿರುವ ಹಲ್ಲೆ ಘಟನೆಗೆ ಸಂಬಂಧಿಸಿ ಉತ್ತರಪ್ರದೇಶದಲ್ಲಿ ಶೇ.14.5, ಪಶ್ಚಿಮ ಬಂಗಾಲದಲ್ಲಿ ಶೇ.9.6 ಪ್ರಕರಣ ದಾಖಲಾಗಿದೆ.

 2016ರಲ್ಲಿ ಮಹಿಳೆಯರ ಮೇಲಿನ ಹಲ್ಲೆ ಘಟನೆಗೆ ಸಂಬಂಧಿಸಿ 19 ಮೆಟ್ರೊಪಾಲಿಟನ್ ನಗರಗಳ ಪೈಕಿ ದಿಲ್ಲಿಯಲ್ಲಿ ಅತ್ಯಧಿಕ (13,803) ಪ್ರಕರಣ ದಾಖಲಾದರೆ, ಮುಂಬೈಯಲ್ಲಿ 5,128 ಪ್ರಕರಣ ದಾಖಲಾಗಿದ್ದು ದ್ವಿತೀಯ ಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X