Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೆಯಲ್ಲಿ ಡಿಜಿಟಲ್ ಪಾವತಿಗೆ ಕಳಪೆ...

ರೈಲ್ವೆಯಲ್ಲಿ ಡಿಜಿಟಲ್ ಪಾವತಿಗೆ ಕಳಪೆ ಪ್ರತಿಕ್ರಿಯೆ

ಕೇವಲ ಶೇ.3ರಷ್ಟು ಜನರಿಂದ ಕಾರ್ಡ್ ಮೂಲಕ ಪಾವತಿ

ವಾರ್ತಾಭಾರತಿವಾರ್ತಾಭಾರತಿ1 Dec 2017 9:27 PM IST
share
ರೈಲ್ವೆಯಲ್ಲಿ ಡಿಜಿಟಲ್ ಪಾವತಿಗೆ ಕಳಪೆ ಪ್ರತಿಕ್ರಿಯೆ

ಹೊಸದಿಲ್ಲಿ,ಡಿ.1: ನೋಟು ಅಮಾನ್ಯದ ಬಳಿಕ ರೈಲ್ವೆ ನಿಲ್ದಾಣಗಳ ಟಿಕೆಟ್ ಕೌಂಟರ್ ಗಳಲ್ಲಿ ನಗದು ರಹಿತ ವಹಿವಾಟು ಆರಂಭಗೊಂಡು ಒಂದು ವರ್ಷ ಕಳೆದಿದ್ದರೂ 23 ದಶಲಕ್ಷ ಪ್ರಯಾಣಿಕರ ಪೈಕಿ ಕೇವಲ ಶೇ.3ರಷ್ಟು ಜನರು ಟಿಕೆಟ್‌ಗಳ ಖರೀದಿಗಾಗಿ ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳನ್ನು ಬಳಸುತ್ತಿದ್ದಾರೆ.

ರೈಲ್ವೆಯು ಒದಗಿಸಿರುವ ಮಾಹಿತಿಯಂತೆ ಪ್ರತಿದಿನ ಆನ್‌ಲೈನ್ ಬುಕಿಂಗ್ ವ್ಯವಸ್ಥೆಯ ಮೂಲಕ 80 ಕೋ.ರೂ.ವೌಲ್ಯದ ಟಿಕೆಟ್‌ಗಳು ಖರೀದಿಯಾಗುತ್ತಿದ್ದರೆ, ಪ್ರಯಾಣಿಕರು ಟಿಕೆಟ್ ಕೌಂಟರ್‌ಗಳಲ್ಲಿ 78 ಕೋ.ರೂ.ವೌಲ್ಯದ ಟಿಕೆಟ್‌ಗಳನ್ನು ನಗದು ಹಣದ ಮೂಲಕ ಖರೀದಿಸುತ್ತಿದ್ದಾರೆ. ಇವುಗಳಲ್ಲಿ ಕಾಯ್ದಿರಿಸಿದ ಟಿಕೆಟ್‌ಗಳ ಪಾಲು 30 ಕೋ.ರೂ. ಮತ್ತು ಕಾಯ್ದಿರಿಸದ ಟಿಕೆಟ್‌ಗಳ ಪಾಲು 48 ಕೋ.ರೂ.ಗಳಾಗಿವೆ. 23 ದಶಲಕ್ಷ ಪ್ರಯಾಣಿಕರ ಪೈಕಿ ಶೇ.94ರಷ್ಟು ಜನರು ಮೀಸಲುರಹಿತ ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸುತ್ತಾರೆ.

ಕಳೆದ ವರ್ಷದ ನ.8ರಂದು ನೋಟು ಅಮಾನ್ಯ ಕ್ರಮದ ಬಳಿಕ ರೈಲ್ವೆಯು ಡಿಜಿಟಲ್ ಹಣ ಪಾವತಿಗಳನ್ನು ಉತ್ತೇಜಿಸಲು ದೇಶಾದ್ಯಂತ ರಿಜರ್ವೇಷನ್ ಕೌಂಟರ್‌ಗಳಲ್ಲಿ ಪಾಯಿಂಟ್ ಆಫ್ ಸೇಲ್(ಪಿಒಎಸ್) ಯಂತ್ರಗಳನ್ನು ಪರಿಚಯಿಸಿತ್ತು. ಆನ್‌ಲೈನ್‌ನಲ್ಲಿ ಟಿಕೆಟ್ ಬುಕಿಂಗ್ ಮೇಲಿನ ಸೇವಾ ಶುಲ್ಕಕ್ಕೆ ವಿನಾಯಿತಿಯನ್ನು ಐಆರ್‌ಸಿಟಿಸಿ ಮುಂದುವರಿಸಿದೆ.

ಮೀಸಲುರಹಿತ ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸುವವರು ಟಿಕೆಟ್‌ಗಳ ಖರೀದಿಗಾಗಿ ನಗದು ಪಾವತಿಯನ್ನೇ ಇಷ್ಟಪಡುತ್ತಿದ್ದಾರೆ. ಉಪನಗರ ನಿಲ್ದಾಣಗಳಲ್ಲಿ ಪಿಒಎಸ್ ಯಂತ್ರಗಳು ಮತ್ತು ಪೇಮೆಂಟ್ ವ್ಯಾಲೆಟ್‌ಗಳು ಲಭ್ಯವಿದ್ದರೂ ಪ್ರಯಾಣಿಕರು ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳ ಮೂಲಕ ಟಿಕೆಟ್ ಹಣವನ್ನು ಪಾವತಿಸುತ್ತಿಲ್ಲ ಎಂದು ರೈಲ್ವೆ ಮಂಡಳಿಯ ಸದಸ್ಯ(ಸಂಚಾರ) ಮುಹಮ್ಮದ್ ಜಂಷೆಡ್ ಅವರು ತಿಳಿಸಿದರು.

 ರೈಲ್ವೆಯ ಇ-ಟಿಕೆಟಿಂಗ್‌ನಲ್ಲಿ ಶೇ.12ರಷ್ಟು ಏರಿಕೆ ಕಂಡು ಬಂದಿದೆ. ಕಳೆದ ವರ್ಷ ಶೇ.58ರಷ್ಟು ಕಾಯ್ದಿರಿಸಿದ ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಬುಕ್ ಆಗಿದ್ದರೆ, ನೋಟು ಅಮಾನ್ಯದ ಬಳಿಕ ಇದು ಶೇ.70ಕ್ಕೇರಿದೆ.

ಡಿ.1ರಿಂದ ಎಲ್ಲ ರಿಜರ್ವೇಷನ್ ಕೌಂಟರ್‌ಗಳಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್(ಯುಪಿಐ) ಅನ್ನು ನಾವು ಆರಂಭಿಸಿದ್ದೇವೆ. ಪ್ರಯಾಣಿಕರು ಕೌಂಟರ್‌ಗಳಲ್ಲಿ ತಮ್ಮ ಸೆಲ್ ಫೋನ್‌ಗಳ ಮೂಲಕ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು ಎಂದು ಜಂಷೆಡ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X