Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಐಎಡಿಎಂಕೆಯಲ್ಲಿ ಮುಂದುವರಿದ ಚಿಹ್ನೆ...

ಎಐಎಡಿಎಂಕೆಯಲ್ಲಿ ಮುಂದುವರಿದ ಚಿಹ್ನೆ ಸಮರ: ಚುನಾವಣಾ ಆಯೋಗದ ನಿರ್ಧಾರಕ್ಕೆ ಶಶಿಕಲಾ ಬಣ ವಿರೋಧ

ವಾರ್ತಾಭಾರತಿವಾರ್ತಾಭಾರತಿ1 Dec 2017 9:43 PM IST
share
ಎಐಎಡಿಎಂಕೆಯಲ್ಲಿ ಮುಂದುವರಿದ ಚಿಹ್ನೆ ಸಮರ: ಚುನಾವಣಾ ಆಯೋಗದ ನಿರ್ಧಾರಕ್ಕೆ ಶಶಿಕಲಾ ಬಣ ವಿರೋಧ

ಹೊಸದಿಲ್ಲಿ, ಡಿ.1: ತಮಿಳುನಾಡು ಮುಖ್ಯಮಂತ್ರಿ ಇ ಕೆ ಪಳನಿಸ್ವಾಮಿಯ ಏಕೀಕೃತ ಎಐಎಡಿಎಂಕೆಯನ್ನು ನಿಜವಾದ ಎಐಎಡಿಎಂಕೆ ಪಕ್ಷವೆಂದು ಘೋಷಿಸಿ ಅವರಿಗೆ ಪಕ್ಷದ ಚಿಹ್ನೆಯಾದ ಎರಡೆಲೆಯನ್ನು ಉಪಯೋಗಿಸಲು ಅನುಮತಿ ನೀಡಿರುವ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಶಶಿಕಲಾ-ಟಿಟಿವಿ ದಿನಕರನ್ ಬಣ ದಿಲ್ಲಿ ಉಚ್ಛನ್ಯಾಯಾಲಯದ ಮೊರೆ ಹೋಗಿದೆ.

ಈ ಪ್ರಕರಣದ ವಿಚಾರಣೆ ಕೋರಿ ಪ್ರಬಾರ ಮುಖ್ಯ ನ್ಯಾಯಾಧೀಶರಾದ ಗೀತಾ ಮಿತ್ತಲ್ ಮತ್ತು ನ್ಯಾಯಾಧೀಶ ಸಿ ಹರಿಶಂಕರ್ ನೇತೃತ್ವದ ಪೀಠದ ಮುಂದೆ ಮನವಿ ಮಾಡಲಾಗಿದ್ದು ಚುನಾವಣಾ ಆಯೋಗದ ನವೆಂಬರ್ 23ರ ಆದೇಶವನ್ನು ರದ್ದು ಮಾಡುವಂತೆ ಕೋರಲಾಗಿದೆ.

ಶಶಿಕಲಾ ಮತ್ತು ದಿನಕರನ್ ಪರ ವಕೀಲರಾದ ಹಿರಿಯ ನ್ಯಾಯವಾದಿ ಕೀರ್ತಿ ಉಪ್ಪಲ್, ಚುನಾವಣಾ ಆಯೋಗದ ಆದೇಶವು ಕಾನೂನಾತ್ಮಕವಾಗಿ ಸರಿಯಲ್ಲದಿರುವ ಕಾರಣ ಅದನ್ನು ಬದಿಗಿರಸಬೇಕಾದ ಅಗತ್ಯವಿರುವ ಕಾರಣ ಈ ಪ್ರಕರಣದ ವಿಚಾರಣೆಯನ್ನು ಶೀಘ್ರ ನಡೆಸಬೇಕಿದೆ ಎಂದು ಹೇಳಿಕೊಂಡಿದ್ದಾರೆ. ಹಿರಿಯ ವಕೀಲರ ಮಾತಿಗೆ ಸಮ್ಮತಿ ಸೂಚಿಸಿದ ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ಶನಿವಾರಕ್ಕೆ ನಿಗದಿಪಡಿಸಿದೆ.

 ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾರ ಸಾವಿನಿಂದ ತೆರವಾದ ಆರ್‌ಕೆ ನಗರ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಘೋಷಿಸಿದ ನಂತರದ ದಿನಗಳಿಂದ ಚಿಹ್ನೆ ವಿವಾದವು ಭುಗಿಲೆದ್ದಿತ್ತು. ಆರ್‌ಕೆ ನಗರ್ ಉಪಚುನಾವಣೆಯು ಡಿಸೆಂಬರ್ 21ರಂದು ನಡೆಯಲಿದೆ.

ನವೆಂಬರ್ 23ರಂದು ಚುನಾವಣಾ ಆಯೋಗವು ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ನೇತೃತ್ವದ ಏಕೀಕೃತ ಎಐಎಡಿಎಂಕೆ ಎರಡೆಲೆಯ ಚಿಹ್ನೆಯನ್ನು ಉಪಯೋಗಿಸಲು ಅನುಮತಿ ನೀಡುವ ಮೂಲಕ ಶಶಿಕಲಾ-ದಿನಕರನ್ ಬಣ ತೀವ್ರ ಮುಖಭಂಗಕ್ಕೀಡಾಗಿತ್ತು.

ಆರ್‌ಕೆ ನಗರ್ ಉಪಚುನಾವಣೆಯಲ್ಲಿ ಎಐಎಡಿಎಂಕೆಯ ಅಭ್ಯರ್ಥಿ ಮಧುಸೂಧನನ್, ಪಳನಿಸ್ವಾಮಿ, ಪನ್ನೀರ್‌ಸೆಲ್ವಂ ಮತ್ತು ಶಾಸಕ ಸೆಮ್ಮಲೈ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಮನವಿಯಲ್ಲಿ ಕೋರಲಾಗಿತ್ತು. ಚಿಹ್ನೆಗೆ ಸಂಬಂಧಪಟ್ಟಂತೆ ಇರುವ ತಕರಾರಿನ ಬಗ್ಗೆ ಇರುವ ದಾಖಲೆಗಳನ್ನು ಒದಗಿಸುವಂತೆಯೂ ಶಶಿಕಲಾ ಬಣ ಮನವಿ ಮಾಡಿತ್ತು.

ಚುನಾವಣಾ ಆಯೋಗವು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಕೇವಲ ವ್ಯತಿರಿಕ್ತ ಹೇಳಿಕೆಯನ್ನು ನೀಡಿದ್ದು ಮಾತ್ರವಲ್ಲ ಗಂಭೀರ ಅಕ್ರಮಗಳನ್ನೂ ಮಾಡಿದೆ ಎಂದು ಉಪ್ಪಲ್ ನ್ಯಾಯಾಲಯಕ್ಕೆ ವಿವರಿಸಿದರು. ಅವರ ಜೊತೆ ಇನ್ನೋರ್ವ ವಕೀಲ ಅಮಿತ್ ಆನಂದ್ ತಿವಾರಿ ಕೂಡಾ ಉಪಸ್ಥಿತರಿದ್ದರು. ಚುನಾವಣಾ ಆಯೋಗದ ಈ ಆದೇಶವು ಆಸ್ತಿ ಅವ್ಯವಹಾರ ಆರೋಪದಡಿ ಸದ್ಯ ಬೆಂಗಳೂರಿನ ಜೈಲಿನಲ್ಲಿ ನಾಲ್ಕು ವರ್ಷಗಳ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಮತ್ತು ದಿನಕರನ್‌ಗೆ ತೀವ್ರ ಹಿನ್ನಡೆಯುಂಟುಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X