Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೋಕಾ ಲಾ ಸಮೀಪ ಚಳಿಗಾಲದಲ್ಲೂ ಸೈನಿಕರ...

ಡೋಕಾ ಲಾ ಸಮೀಪ ಚಳಿಗಾಲದಲ್ಲೂ ಸೈನಿಕರ ನಿಯೋಜನೆ: ಚೀನಾ ಇಂಗಿತ

ವಾರ್ತಾಭಾರತಿವಾರ್ತಾಭಾರತಿ1 Dec 2017 10:18 PM IST
share
ಡೋಕಾ ಲಾ ಸಮೀಪ ಚಳಿಗಾಲದಲ್ಲೂ ಸೈನಿಕರ ನಿಯೋಜನೆ: ಚೀನಾ ಇಂಗಿತ

ಬೀಜಿಂಗ್, ಡಿ. 1: ಭಾರತದೊಂದಿಗೆ ಡೋಕಾ ಲಾ ಬಿಕ್ಕಟ್ಟು ಏರ್ಪಟ್ಟ ಸ್ಥಳದ ಸಮೀಪದಲ್ಲಿ ಈ ಚಳಿಗಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸುವ ಇಂಗಿತವನ್ನು ಚೀನಾ ಸೇನೆ ಗುರುವಾರ ವ್ಯಕ್ತಪಡಿಸಿದೆ.

ಈಶಾನ್ಯದ ರಾಜ್ಯಗಳನ್ನು ಸಂಪರ್ಕಿಸುವ ಭಾರತದ ಕಿರಿದಾದ ಪ್ರದೇಶದ ಸಮೀಪ ಆಯಕಟ್ಟಿನ ರಸ್ತೆ ನಿರ್ಮಿಸಲು ಚೀನಾ ಆರಂಭಿಸಿದ ಬಳಿಕ ಈ ವರ್ಷದ ಜೂನ್ ತಿಂಗಳಲ್ಲಿ ಬಿಕ್ಕಟ್ಟು ಆರಂಭಗೊಂಡಿತ್ತು.

ರಸ್ತೆ ನಿರ್ಮಾಣಗೊಳ್ಳುತ್ತಿರುವ ಸ್ಥಳ ತನಗೆ ಸೇರಿದ್ದು ಎಂದು ಚೀನಾ ಹೇಳಿಕೊಂಡರೆ, ಅದು ತನ್ನದು ಎಂಬುದಾಗಿ ನೆರೆಯ ಭೂತಾನ್ ಕೂಡ ಹೇಳಿತ್ತು. ಭಾರತೀಯ ಸೈನಿಕರು ಭೂತಾನ್ ಪರವಾಗಿ ಮುನ್ನುಗ್ಗಿ ರಸ್ತೆ ನಿರ್ಮಾಣಕ್ಕೆ ತಡೆಯೊಡ್ಡಿದ್ದರು.

ಈ 73 ದಿನಗಳ ಬಿಕ್ಕಟ್ಟು ಅಂತಿಮವಾಗಿ ಆಗಸ್ಟ್ 28ರಂದು ಕೊನೆಗೊಂಡಿತು. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ರಸ್ತೆ ನಿರ್ಮಾಣವನ್ನು ನಿಲ್ಲಿಸಿತು.

ಚೀನಾ ನಿರ್ಮಿಸುತ್ತಿರುವ ರಸ್ತೆಯು ಆ ಪ್ರದೇಶದಲ್ಲಿ ತಾನು ಹೊಂದಿರುವ ಕಿರಿದಾದ ಪ್ರದೇಶಕ್ಕೆ ಬೆದರಿಕೆಯಾಗಿದೆ ಎಂಬುದಾಗಿ ಭಾರತ ವಾದಿಸಿತ್ತು.

ಈವರೆಗಿನ ಸಂಪ್ರದಾಯದಂತೆ, ಚಳಿಗಾಲದ ಅವಧಿಯಲ್ಲಿ ಡೋಕಾ ಲ ಪ್ರದೇಶದ ಮುಂಚೂಣಿ ಪ್ರದೇಶಗಳಿಂದ ಭಾರತ ಮತ್ತು ಚೀನಾಗಳೆರಡೂ ತಮ್ಮ ಸೇನೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದವು. ಈ ಭಾಗದಲ್ಲಿ ಚಳಿಗಾಲ ತುಂಬಾ ಕಠಿಣವಾಗಿರುತ್ತದೆ.

ಡೋಕಾ ಲಾ ಬಿಕ್ಕಟ್ಟು ಏರ್ಪಟ್ಟ ಸ್ಥಳದ ಸಮೀಪ ದೊಡ್ಡ ಸಂಖ್ಯೆಯ ಸೈನಿಕರ ನಿಯೋಜನೆಯನ್ನು ಮುಂದುವರಿಸಲಾಗುವುದು ಹಾಗೂ ಚಳಿಗಾಲದಲ್ಲಿ ಆ ಸ್ಥಳದಿಂದ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಸಂಪ್ರದಾಯವನ್ನು ಕೈಬಿಡಲಾಗುವುದು ಎಂಬ ವರದಿಗಳ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಚೀನಾದ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ವು ಕಿಯನ್, ‘‘ಡಾಂಗ್‌ಲಾಂಗ್ (ಡೋಕಾ ಲಾ) ಚೀನಾದ ಭೂಭಾಗವಾಗಿದೆ’’ ಎಂದರು.

‘‘ಈ ತತ್ವದ ಆಧಾರದಲ್ಲಿ, ಸೇನೆ ನಿಯೋಜನೆ ಬಗ್ಗೆ ನಾವೇ ನಿರ್ಧಾರ ತೆಗೆದುಕೊಳ್ಳುತ್ತೇವೆ’’ ಎಂದು ಅವರು ಹೇಳಿದರು. ಆದರೆ, ಅವರು ಹೆಚ್ಚಿನ ವಿವರಗಳನ್ನು ನೀಡಲಿಲ್ಲ.

ಡೋಕಾ ಲಾ ಸಮೀಪದ ಯಟುಂಗ್‌ನಲ್ಲಿ ಚೀನಾ ಸೈನಿಕರ ನಿರಂತರ ಉಪಸ್ಥಿತಿಯ ಹಿನ್ನೆಲೆಯಲ್ಲಿ, ಭಾರತವೂ ಅಲ್ಲಿ ತನ್ನ ಸೈನಿಕರನ್ನು ನಿಯೋಜಿಸಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X