Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ರಾಜರೇ ನನ್ನ ಐಡಿಯಾ ಒಪ್ಪಿದ್ದು...

ಮೈಸೂರು ರಾಜರೇ ನನ್ನ ಐಡಿಯಾ ಒಪ್ಪಿದ್ದು ಸಂತೋಷ : ಉಪೇಂದ್ರ

ವಾರ್ತಾಭಾರತಿವಾರ್ತಾಭಾರತಿ2 Dec 2017 5:32 PM IST
share
ಮೈಸೂರು ರಾಜರೇ ನನ್ನ ಐಡಿಯಾ ಒಪ್ಪಿದ್ದು ಸಂತೋಷ : ಉಪೇಂದ್ರ

ಚಾಮರಾಜನಗರ,ಡಿ.02: ಪ್ರಜಾಕಿಯ ಪಕ್ಷದ ಸಂಸ್ಥಾಪಕ ಹಾಗೂ ಚಲನ ಚಿತ್ರ ರಂಗದ ರಿಯಲ್ ಸ್ಟಾರ್ ಉಪೇಂದ್ರ ಸದ್ದು ಗದ್ದಲವಿಲ್ಲದೆ ಚಾಮರಾಜನಗರ ಜಿಲ್ಲೆಯಲ್ಲಿ ತಮ್ಮ ಪಕ್ಷದ ಪ್ರಚಾರವನ್ನು ಮಾಡುತ್ತಾ, ಜನಸಂಪರ್ಕ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಮತ್ತು ಅಗತನಗೌಡನಹಳ್ಳಿಯಲ್ಲಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿದ ಬಳಿಕ ಯಾವ ಮುನ್ಸೂಚನೆಯನ್ನು ನೀಡದೆ ಚಾಮರಾಜನಗರಕ್ಕೆ ಆಗಮಿಸಿದ ಉಪೇಂದ್ರ ತಮ್ಮ ಆಪ್ತ ಬಳಗವನ್ನು ಸಂಪರ್ಕಿಸಿ ಪ್ರಜಾಕೀಯ ಪಕ್ಷದ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.

ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಉಪೇಂದ್ರ, ರಾಜಕಾರಣ ಒಂದು ವ್ಯವಹಾರವಾಗಿ ಬಿಟ್ಟಿದೆ. ಅದನ್ನು ಬದಲಾವಣೆ ಮಾಡುವ ಸಲುವಾಗಿ ತಾವು ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾಗಿ ಹೇಳಿದರು.

ಕೇವಲ ಹಣವಿದ್ದವರು ಹಾಗೂ ಜಾತಿ ಮತ್ತು ತೋಳ್ಬಲವಿದ್ದರು ಮಾತ್ರ ಚುನಾವಣೆ ರಾಜಕಾರಣ ಮಾಡಬಹುದು ಎನ್ನುವ ಸಿದ್ದಾಂತಕ್ಕೆ ನಾಂದಿ ಹಾಕುವ ಸಲುವಾಗಿ ಹಣವಿಲ್ಲದೆ ಅಂದ್ರೆ ಕ್ಯಾಶ್ ಲೆಸ್ ಪಾರ್ಟ್ ಮಾಡಿದ್ದೇನೆ ಎಂದು ಹೇಳಿದರು.

ಭಾರತ ದೇಶಕ್ಕೆ ಅಂಬೇಡ್ಕರ್‍ರವರು ಅತ್ಯುತ್ತಮ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ, ಅವರು ಹೇಳಿದಂತೆ ಕಾಲಕ್ಕೆ ತಕ್ಕಂತೆ ಸಮಾಜಕ್ಕೆ ಅನುಗುಣವಾಗಿ ಸಂವಿಧಾನದಲ್ಲಿ ಮಾರ್ಪಡು ಮಾಡಿ ಎಂದಿದ್ದಾರೆ. ಅದೇ ರೀತಿಯಾಗಿ ಅಧಿಕಾರದಲ್ಲಿರುವ ರಾಜಕಾರಣಿಗಳು ಸಂವಿಧಾನವನ್ನು ಮಾರ್ಪಾಡು ಮಾಡುತ್ತಿದ್ದಾರೆ ಎಂದು ಹೇಳಿದರು.

ತಮಗೆ ಹತ್ತು ವರ್ಷದಿಂದ ಹಲವಾರು ಪಕ್ಷಗಳಿಂದ ಆಹ್ವಾನ ಬಂದಿತ್ತು, ಆದ್ರೆ ಸಮಯ ಬಂದಾಗ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದೆ ಅದೇ ರೀತಿಯಾಗಿ ಪ್ರಸ್ತುತ ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡಿದ್ದೇನೆ ಎಂದರು.

ಇದೇ ವೇಳೆ ತಮ್ಮ ನೆಚ್ಚಿನ ನಾಯಕ ನಟ ಆಗಮಿಸಿದ್ದನ್ನು ತಿಳಿದ ಉಪೇಂದ್ರ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. 

ತಾನು ಅಸ್ಥಿತ್ವಕ್ಕೆ ತಂದಿರುವ ಪ್ರಜಾಕೀಯ ಪಕ್ಷದ ಬಗ್ಗೆ ಮೈಸೂರು ರಾಜ ಮನೆತನದ ಶ್ರೀಕಂಠದತ್ತ ಚಾಮರಾಜ ಯದುವೀರ ಮಹಾರಾಜರು ಒಳ್ಳೇಯ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಸ್ವಾಗತಿಸಿದ ಉಪೇಂದ್ರ ತಮ್ಮ ಐಡಿಯಾಗಳು ಮಹಾರಾಜರಿಗೆ ಹಿಡಿಸಿದೆ ಎಂದು ಹೇಳಿದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಅಚ್ಗಾಳ್ ಯಾತ್ರಿ ನಿವಾಸ್‍ದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಉಪೇಂದ್ರ, ಜನರಿಗೆ ತಮ್ಮ ಪಕ್ಷದ ಸಿದ್ದಾಂತವನ್ನು ಹೇಳಿ ಅವರು ಇಷ್ಟ ಪಟ್ಟರೆ ಪ್ರಜಾಕೀಯಕ್ಕೆ ಬೆಂಬಲ ನೀಡುವರು ಎಂದು ವಿವರಿಸಿದರು.      

share
ವಾರ್ತಾಭಾರತಿ
ವಾರ್ತಾಭಾರತಿ
Next Story
X