Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ದೇಶದ 10 ವಿವಿಗಳಿಗೆ ಶೇ. 100 ರಷ್ಟು...

'ದೇಶದ 10 ವಿವಿಗಳಿಗೆ ಶೇ. 100 ರಷ್ಟು ಸ್ವಾಯತ್ತತೆ ಚಿಂತನೆ' : ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

ವಾರ್ತಾಭಾರತಿವಾರ್ತಾಭಾರತಿ2 Dec 2017 8:18 PM IST
share

ಶಿವಮೊಗ್ಗ, ಡಿ. 2: 'ವಿಶ್ವವಿದ್ಯಾಲಯಗಳ ರಾಷ್ಟ್ರೀಯ ಮೌಲ್ಯಾಂಕದ ವ್ಯವಸ್ಥೆಯ ಮೇಲೆ ಒತ್ತು ನೀಡಲಾಗಿದೆ. ವಿವಿಗಳು ತಮ್ಮ ಸಾಮಥ್ರ್ಯವನ್ನು ಆರೋಗ್ಯಕರ ಸ್ಪರ್ಧೆಯ ಮೂಲಕ ವೃದ್ದಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿಯೇ ದೇಶದ 10 ವಿವಿಗಳನ್ನು ಅತ್ಯುತ್ಕøಷ್ಟ ಕೇಂದ್ರಗಳೆಂದು ಗುರುತಿಸಿ ಅವುಗಳಿಗೆ ಶೇಕಡಾ 100 ರಷ್ಟು ಆಡಳಿತಾತ್ಮಕ ಮತ್ತು ಶೈಕ್ಷಣಿಕ ಸ್ವಾಯತ್ತತೆಯನ್ನು ಕೊಡುವ ಚಿಂತನೆ ನಡೆಸಲಾಗಿದೆ' ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವಡೆಕರ್ ತಿಳಿಸಿದ್ದಾರೆ. 

ಜಿಲ್ಲೆಯ ಶಂಕರಘಟ್ಟದಲ್ಲಿ ಶನಿವಾರ ಕುವೆಂಪು ವಿಶ್ವವಿದ್ಯಾಲಯದ 28 ನೇ ಘಟಿಕೋತ್ಸವ ಸಮಾರಂಭ ಆಯೋಜಿಸಲಾಗಿತ್ತು. ಘಟಿಕೋತ್ಸವ ಭಾಷಣ ಮಾಡಬೇಕಾಗಿದ್ದ ಸಚಿವ ಪ್ರಕಾಶ್ ಜಾವಡೆಕರ್‍ರವರು ಗೈರು ಹಾಜರಾಗಿದ್ದರು. ಆದರೆ ಭಾಷಣದ ಪ್ರತಿಯನ್ನು ವಿವಿಗೆ ಕಳುಹಿಸಿಕೊಟ್ಟಿದ್ದರು. ಅವರ ಅನುಪಸ್ಥಿತಿಯಲ್ಲಿ ವಿವಿಯ ಕಲಾನಿಕಾಯದ ಡೀನ್ ಪ್ರೊ.ರಾಜಾರಾಂ ಹೆಗ್ಡೆರವರು ಸಚಿವರು ಕಳುಹಿಸಿಕೊಟ್ಟಿದ್ದ ಭಾಷಣದ ವಿವರಗಳನ್ನು ಸಭೆಯ ಮುಂದಿಟ್ಟರು. 

ಜಾಗತೀಕರಣಗೊಂಡ ಜಗತ್ತಿನಲ್ಲಿ ಶಿಕ್ಷಣ ಪಡೆಯುವುದು ಮಾತ್ರ ಮುಖ್ಯವಲ್ಲ. ಕೌಶಲ್ಯ ಅಥವಾ ಮಾಹಿತಿಯನ್ನು ಪಡೆಯುವುದು ಮುಖ್ಯವಲ್ಲ. ಈ  ಮಾಹಿತಿಯನ್ನು ಸಂಸ್ಕರಿಸಿ ನಮ್ಮ ಸಾಮಾಜಿಕ ಸಂದರ್ಭಕ್ಕೆ ಸೂಕ್ತವಾಗುವ ವಿಚಾರಗಳ ಮತ್ತು ಕ್ರಿಯೆಗಳ ಸುಸಂಗತವಾದ ರೂಪವೊಂದನ್ನು ಸೃಷ್ಟಿಸಬಲ್ಲ ಸಂತುಲಿತವಾದ ಮನಸ್ಸು ಇಂದು ಮುಖ್ಯವಾಗಿ ಬೇಕಾಗಿದೆ ಎಂದು ಹೇಳಿದರು.

ಕಳೆದ ಎರಡು ದಶಕಗಳಲ್ಲಿ ಭಾರತ ತನ್ನ ಉನ್ನತ ಶಿಕ್ಷಣ ಕ್ಷೇತ್ರದ ಸ್ವರೂಪವನ್ನು ಗಮನಾರ್ಹವಾಗಿ ರೂಪಾಂತರಿಸಿಕೊಂಡಿದೆ. ಅದು ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ಕಲಿಕೆಯ ನಿರೀಕ್ಷಿತ ಫಲಿತಾಂಶಗಳನ್ನು ಕೂಡ ಬದಲಾಯಿಸಿಕೊಂಡಿದೆ. ಸರ್ಕಾರವು ಕೇಂದ್ರದಿಂದ ಬೆಂಬಲಿತವಾದ ಎರಡು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.

ಸರ್ವ ಶಿಕ್ಷಣ ಅಭಿಯಾನ, ರಾಷ್ಟ್ರಿಯ ಮಾಧ್ಯಮಿಕ ಶಿಕ್ಷಾ ಅಭಿಯಾನ, ರಾಷ್ಟ್ರೀಯ  ರಾಷ್ಟ್ರೀಯ ಉಚ್ಚತಮ ಶಿಕ್ಷಾ ಅಭಿಯಾನ ಆಶಾದಾಯಕವಾದ ಪರಿಣಾಮವನ್ನು ಬೀರಿವೆ. ಈಗಿರುವ ಶಿಕ್ಷಣದ ಸ್ಥಿತಿಯನ್ನು ಗಮನಿಸಿ ಕೇಂದ್ರ ಸರ್ಕಾರ ಪಂಡಿತ್ ಮದನ್ ಮೋಹನ ಮಾಳವೀಯ ರಾಷ್ಟ್ರೀಯ ಶಿಕ್ಷಣ ಹಾಗೂ ಶಿಕ್ಷಕ ಯೋಜನೆಯನ್ನು ಅನುಷ್ಟಾನಕ್ಕೆ ತಂದಿದೆ. 

ಈ ಯೋಜನೆಯು ಶಿಕ್ಷಕರು ಭೋಧನೆ, ಶಿಕ್ಷಕರ ತಯಾರಿ, ವೃತ್ತಿಪರ ಪ್ರಗತಿ, ಪಠ್ಯಕ್ರಮ ರಚನೆ, ಬೋಧನಾ ಕ್ರಮದಲ್ಲಿ ಸಂಶೋಧನೆ, ಪರಿಣಾಮಕಾರಿಯಾದ ಬೋಧನಾ ಕ್ರಮ ರಚನೆ ಇವೇ ಮೊದಲಾದ ಎಲ್ಲ ಅಂಶಗಳನ್ನು ಉದ್ದೇಶಿಸಿದೆ. ಮುಂದಿನ ಎರಡು ದಶಕದಲ್ಲಿ ತ್ವರಿತವಾದ ಪ್ರಗತಿಯನ್ನು ಸಾಧಿಸಬೇಕಾದರೆ ಶಿಕ್ಷಣ ಸಂಸ್ಥೆ, ಉದ್ದಿಮೆ ಹಾಗೂ ಸರ್ಕಾರದಿಂದ ಬದ್ದತೆಯುಳ್ಳ ಒಗ್ಗೂಡಿದ ಪ್ರಯತ್ನದ ಅವಶ್ಯಕತೆ ಇದೆ ಎಂದು ಹೇಳಿದರು.

ಬಹುಕಾಲದಿಂದ ಶ್ರೇಷ್ಟತೆ ಮತ್ತು ಸಮಾನತೆಗಳ ನಡುವೆ ನಡೆದು ಬಂದಿದ್ದ ವಿವಾದವನ್ನು ತಂತ್ರಜ್ಞಾನದ ಪರಿಣಾಮಕಾರಿಯಾದ ಬಳಕೆಯ ಮೂಲಕ ಭಾರತವು ನಿವಾರಿಸಿಕೊಂಡಿದೆ. ವಿಶ್ವವಿದ್ಯಾಲಯಗಳು ಇಂದಿನ ಸಂದರ್ಭದಲ್ಲಿ ಶಿಕ್ಷಣದ ಬಗೆಗಿನ ತಮ್ಮ ಮಾದರಿಯನ್ನು ಮರುವ್ಯಾಖ್ಯಾನಗೊಳಿಸುವ ಅವಶ್ಯಕತೆ ಇದೆ. ನಮ್ಮಲ್ಲಿ ವಿವಿಧ ಶಿಸ್ತುಗಳ ಮಧ್ಯ ಹಾಗೂ ನಿಕಾಯಗಳ ನಡುವೆ ಪ್ರಬಲವಾದ ಗೋಡೆಗಳಿವೆ. ಪದವಿಗಳನ್ನು ಕೂಡ ಅದೇ ಮಾದರಿಯಲ್ಲಿ ನೀಡಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಪತಿ ಪ್ರೊ. ಜೋಗನ್ ಶಂಕರ್, ಕುಲಸಚಿವ ಪ್ರೊ. ಹೆಚ್.ಎಸ್. ಬೋಜಾನಾಯ್ಕ, ಮೌಲ್ಯಮಾಪನ ಕುಲಸಚಿವ ಪ್ರೊ.ರಾಜಾನಾಯಕ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X