Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಮೀನುಗಾರರನ್ನು ಜಪಾನಿ ನೌಕೆ...

ಕೇರಳದ ಮೀನುಗಾರರನ್ನು ಜಪಾನಿ ನೌಕೆ ರಕ್ಷಿಸಿದ ಸುದ್ದಿ ಸುಳ್ಳು: ಪಿಣರಾಯಿ ವಿಜಯನ್

“ಇಂತಹ ವದಂತಿ ಹರಡುವವರು ಹುಚ್ಚರು”

ವಾರ್ತಾಭಾರತಿವಾರ್ತಾಭಾರತಿ2 Dec 2017 10:14 PM IST
share
ಕೇರಳದ ಮೀನುಗಾರರನ್ನು ಜಪಾನಿ ನೌಕೆ ರಕ್ಷಿಸಿದ ಸುದ್ದಿ ಸುಳ್ಳು: ಪಿಣರಾಯಿ ವಿಜಯನ್

ತಿರುವನಂತಪುರ,ಡಿ.2: ಆಳಸಮುದ್ರದಲ್ಲಿ ಸಿಕ್ಕಿಹಾಕಿಕೊಂಡಿದ್ದ ಕೇರಳದ 60 ಮೀನುಗಾರರನ್ನು ಜಪಾನಿನ ವಾಣಿಜ್ಯ ನೌಕೆಯೊಂದು ರಕ್ಷಿಸಿದೆ ಎಂಬ ವರದಿಗಳು ಸುಳ್ಳು ಎನ್ನುವುದು ಬೆಳಕಿಗೆ ಬಂದಿದೆ. ಈ ವದಂತಿ ಸೃಷ್ಟಿಸಿದವರನ್ನು ಶನಿವಾರ ತರಾಟೆಗೆತ್ತಿಕೊಂಡ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಇಂತಹ ವದಂತಿಗಳನ್ನು ಹರಡುತ್ತಿರುವವರು ಹುಚ್ಚರು ಎಂದು ಬಣ್ಣಿಸಿದರು.

ಒಖಿ ಚಂಡಮಾರುತವು ಕೇರಳದ ಕರಾವಳಿಯನ್ನು ಅಪ್ಪಳಿಸಿದ ಬಳಿಕ 60 ಮೀನುಗಾರರನ್ನು ಜಪಾನಿನ ನೌಕೆಯೊಂದು ರಕ್ಷಿಸಿದ್ದಕ್ಕಾಗಿ ತಾನು ಆ ರಾಷ್ಟ್ರದ ಸರಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸಲು ಬಯಸಿರುವುದಾಗಿ ತಿರುವನಂತಪುರ ಜಿಲ್ಲಾಧಿಕಾರಿ ಎಸ್.ವಾಸುಕಿ ಅವರು ಶುಕ್ರವಾರ ಸಂಜೆ ಮಾಧ್ಯಮಗಳಿಗೆ ತಿಳಿಸಿದ್ದರು. ರಕ್ಷಿಸಲ್ಪಟ್ಟ ಮೀನುಗಾರರು ವಿಝಿಂಜಂ ಕಡಲತೀರಕ್ಕೆ ಆಗಮಿಸಲಿದ್ದಾರೆ ಎಂದೂ ಅವರು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದ ತಮ್ಮ ಸಹೋದ್ಯೋಗಿಗಳನ್ನು ಸ್ವಾಗತಿಸಲು ಭಾರೀ ಸಂಖ್ಯೆಯಲ್ಲಿ ಮೀನುಗಾರರು ಕಡಲತಡಿಯಲ್ಲಿ ಸೇರಿದ್ದರು. ಬಂದರಿನಲ್ಲಿ ಹಲವಾರು ಆ್ಯಂಬುಲೆನ್ಸ್‌ಗಳನ್ನು ಸಿದ್ಧವಾಗಿರಿಸುವಂತೆಯೂ ಸೂಚಿಸಲಾಗಿತ್ತು. ಜಪಾನಿ ನೌಕೆ ಕೊಚ್ಚಿಗೆ ಪ್ರಯಾಣಿಸುತ್ತಿರುವುದರಿಂದ ಮೀನುಗಾರರನ್ನು ಅಲ್ಲಿಯೇ ಇಳಿಸಲಿದೆ ಎಂಬ ಹೊಸಸುದ್ದಿ ಯೊಂದು ಬಳಿಕ ಬಂದಿತ್ತು.

ತಡರಾತ್ರಿಯಲ್ಲಷ್ಟೇ ಇದೊಂದು ಸುಳ್ಳುಸುದ್ದಿ ಎನ್ನುವುದು ಬಹಿರಂಗಗೊಂಡಿತ್ತು.

 ಕೆಲವು ಜನರು ಹುಚ್ಚರಾಗಿದ್ದು, ಕೆಟ್ಟ ಸಂದರ್ಭಗಳಲ್ಲಿ ಇಂತಹ ಸುಳ್ಳುಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಕಿಡಿಕಾರಿದ ವಿಜಯನ್, ಈವರೆಗೆ ಸುಮಾರು 400 ಮೀನುಗಾರರನ್ನು ರಕ್ಷಿಸಲಾಗಿದ್ದು, ಸುಮಾರು 100 ಜನರನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ ಎಂದು ತಿಳಿಸಿದರು.

ನಾಪತ್ತೆಯಾಗಿರುವ ಕೇರಳದ 102 ಮೀನುಗಾರರನ್ನು ಪತ್ತೆ ಹಚ್ಚಲು ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ತಟರಕ್ಷಣಾ ಪಡೆಗಳು ಶ್ರಮಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X