Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂಡಮಾರುತ ಪೀಡಿತ ತಮಿಳುನಾಡಿಗೆ ನಿರ್ಮಲಾ...

ಚಂಡಮಾರುತ ಪೀಡಿತ ತಮಿಳುನಾಡಿಗೆ ನಿರ್ಮಲಾ ಸೀತಾರಾಮನ್ ಭೇಟಿ

ಕೇರಳದ 248 ಸೇರಿದಂತೆ ಒಟ್ಟು 357 ಮೀನುಗಾರರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ3 Dec 2017 7:28 PM IST
share
ಚಂಡಮಾರುತ ಪೀಡಿತ ತಮಿಳುನಾಡಿಗೆ ನಿರ್ಮಲಾ ಸೀತಾರಾಮನ್ ಭೇಟಿ

ಚೆನ್ನೈ,ಡಿ.3: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರವಿವಾರ ಒಖಿ ಚಂಡಮಾರುತದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ತಮಿಳುನಾಡಿಗೆ ಭೇಟಿ ನೀಡಿದ್ದು, ಕನ್ಯಾಕುಮಾರಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಪ್ರಕ್ಷುಬ್ಧ ಸಮುದ್ರದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಒಟ್ಟು 357 ಮೀನುಗಾರರನ್ನು ರವಿವಾರ ಬೆಳಿಗ್ಗೆ ರಕ್ಷಿಸಲಾಗಿದೆ ಎಂದು ಅವರು ಟ್ವೀಟಿಸಿದ್ದಾರೆ.

ತಮಿಳುನಾಡಿನ 71, ಕೇರಳದ 248 ಮತ್ತು ಲಕ್ಷದ್ವೀಪ ನಡುಗಡ್ಡೆಗಳಿಂದ 38 ಮೀನುಗಾರರು ಸೇರಿದಂತೆ ಒಟ್ಟು 357 ಮೀನುಗಾರರನ್ನು ವಾಯುಪಡೆ, ನೌಕಾಪಡೆ ಮತ್ತು ತಟ ರಕ್ಷಣಾ ಪಡೆಗಳ ಸಿಬ್ಬಂದಿಗಳು ರವಿವಾರ ರಕ್ಷಿಸಿದ್ದಾರೆ. ನಾಪತ್ತೆಯಾಗಿರುವ ಮೀನುಗಾರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೀತಾರಾಮನ್ ತಿಳಿಸಿದ್ದಾರೆ.

ತಿರುವನಂತಪುರ ವರದಿ: ಒಖಿ ಚಂಡಮಾರುತಕ್ಕೆ ಸಿಲುಕಿ ಕಳೆದ ಐದು ದಿನಗಳಿಂದ ಸಮುದ್ರದಲ್ಲಿ ಬಾಕಿಯಾಗಿದ್ದ 17 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ನೌಕಾಪಡೆ ಮೂಲಗಳು ತಿಳಿಸಿವೆ. ಐಎನ್‌ಎಸ್ ಕಲ್ಪೇನಿಯು ರವಿವಾರ ಬೆಳಿಗ್ಗೆ ಆಳಸಮುದ್ರದಲ್ಲಿ ಸಿಕ್ಕಿಹಾಕಿಕೊಂಡಿದ್ದ 13 ಮೀನುಗಾರರನ್ನು ರಕ್ಷಿಸಿ ಕೊಲ್ಲಂನಲ್ಲಿ ಅಧಿಕಾರಿಗಳಿಗೆ ಹಸ್ತಾಂತರಿಸಿದೆ. ಕಾಯಂಕುಳಂನಿಂದ ಪಶ್ಚಿಮಕ್ಕೆ ಸುಮಾರು 30 ಕಿ.ಮೀ.ದೂರದ ಕಡಲಲ್ಲಿ ನಾಲ್ವರು ಮೀನುಗಾರರನ್ನು ವಾಯುಪಡೆಯ ಹೆಲಿಕಾಪ್ಟರ್ ರಕ್ಷಿಸಿದ್ದು, ಅವರನ್ನು ತಿರುವನಂತಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಯುಪಡೆಯ ನಾಲ್ಕು, ನೌಕಾಪಡೆಯ ಮೂರು ವಿಮಾನಗಳು ಮತ್ತು 10 ಹಡಗುಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ತಟರಕ್ಷಣಾ ಪಡೆಯ ಹಡಗುಗಳನ್ನೂ ಕಾರ್ಯಾಚರಣೆಯಲ್ಲಿ ತೊಡಗಿಸಲಾಗಿದೆ.

ಕೊಚ್ಚಿ ತಟರಕ್ಷಣಾ ಪಡೆಯ ಹೆಲಿಕಾಪ್ಟರ್ ಓರ್ವ ವ್ಯಕ್ತಿಯನ್ನು ರಕ್ಷಿಸಿದ್ದರೆ, ಹಡಗೊಂದು ಸಮುದ್ರಮಧ್ಯೆ ದೋಣಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಒಂಭತ್ತು ಮೀನುಗಾರರನ್ನು ರಕ್ಷಿಸಿದೆ.

203 ಮೀನುಗಾರರಿರುವ ಸುಮಾರು 20 ದೋಣಿಗಳು ಲಕ್ಷದ್ವೀಪದ ವಿವಿಧ ನಡುಗಡ್ಡೆಗಳ ಬಳಿ ಆಶ್ರಯ ಪಡೆದುಕೊಂಡಿವೆ.

ತನ್ಮಧ್ಯೆ ಕೇರಳ ಸರಕಾರವು ರಕ್ಷಣಾ ಕಾರ್ಯವನ್ನು ಚುರುಕಾಗಿ ನಡೆಸಿಲ್ಲವೆಂದು ಮೀನುಗಾರರು ಮತ್ತು ಅವರ ಕುಟುಂಬಗಳು ಆರೋಪಿಸಿದ್ದು, ಕೇರಳ ಕರಾವಳಿಯಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿವೆ.

ಐದು ದಿನಗಳ ಹಿಂದೆ ಪುಣ್ತೂರ್‌ನಿಂದ ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದ 33 ಮೀನುಗಾರರ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ರವಿವಾರ ನಸುಕಿನಲ್ಲಿ ಮಿನುಗಾರರು 40 ಸಣ್ಣ ದೋಣಿಗಳಲ್ಲಿ ಆಳಸಮುದ್ರಕ್ಕೆ ತೆರಳಿದ್ದು, ಬಳಿಕ ಸ್ವಲ್ಪಹೊತ್ತಿನಲ್ಲಿ ರಕ್ಷಣಾ ಕಾರ್ಯಕರ್ತರು ಮೃತದೇಹವೊಂದನ್ನು ಪತ್ತೆ ಹಚ್ಚಿ ತೀರಕ್ಕೆ ತಂದಿದ್ದಾರೆ.

ತನ್ಮಧ್ಯೆ ಒಖಿ ಚಂಡಮಾರುತ ಉತ್ತರ-ವಾಯುವ್ಯಾಭಿಮುಖವಾಗಿ ಚಲಿಸಿದ್ದು, ಲಕ್ಷದ್ವೀಪದ ಅಮಿನಿ ದಿವಿ ನಡುಗಡ್ಡೆಯಿಂದ 390 ಕಿ.ಮೀ.ದೂರದಲ್ಲಿ ಆಗ್ನೇಯ ಮತ್ತು ಪೂರ್ವ-ಮಧ್ಯ ಅರಬ್ಬೀ ಸಮುದ್ರದ ಮೇಲೆ ಸ್ಥಿತಗೊಂಡಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಮುಂದಿನ 12 ಗಂಟೆಗಳಲ್ಲಿ ಉತ್ತರ ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ.

ಒಖಿ ಚಂಡಮಾರುತದ ಅಬ್ಬರಕ್ಕೆ ಈವರೆಗೆ ತಮಿಳುನಾಡು ಮತ್ತು ಕೇರಳದಲ್ಲಿ 14 ಜನರು ಮತ್ತು ಶ್ರೀಲಂಕಾದಲ್ಲಿ 13 ಜನರು ಬಲಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X