Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೇ ಸಬ್ಸಿಡಿ ಕೈಬಿಟ್ಟ 9 ಲಕ್ಷ ಹಿರಿಯ...

ರೈಲ್ವೇ ಸಬ್ಸಿಡಿ ಕೈಬಿಟ್ಟ 9 ಲಕ್ಷ ಹಿರಿಯ ನಾಗರಿಕರು: ಸರಕಾರಕ್ಕೆ ಉಳಿತಾಯವಾದ ಹಣ ಎಷ್ಟು ಕೋಟಿ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ3 Dec 2017 10:03 PM IST
share
ರೈಲ್ವೇ ಸಬ್ಸಿಡಿ ಕೈಬಿಟ್ಟ 9 ಲಕ್ಷ ಹಿರಿಯ ನಾಗರಿಕರು: ಸರಕಾರಕ್ಕೆ ಉಳಿತಾಯವಾದ ಹಣ ಎಷ್ಟು ಕೋಟಿ ಗೊತ್ತೇ?

ಹೊಸದಿಲ್ಲಿ, ಡಿ.3: ರೈಲ್ವೇ ಇಲಾಖೆಯ ಗಿವ್ ಅಪ್ (ಕೈಬಿಡಿ) ಯೋಜನೆಯಡಿ ಒಂಬತ್ತು ಲಕ್ಷಕ್ಕೂ ಅಧಿಕ ಹಿರಿಯ ನಾಗರಿಕರು ರೈಲ್ವೇ ಸಬ್ಸಿಡಿಯನ್ನು ಕೈಬಿಟ್ಟ ಪರಿಣಾಮ ಸರಕಾರವು ರೂ. 40 ಕೋಟಿ ಉಳಿತಾಯ ಮಾಡಿದೆ.

ಕಳೆದ ವರ್ಷ ಪರಿಚಯಿಸಲಾದ ಈ ಯೋಜನೆಯಲ್ಲಿ ಹಿರಿಯ ನಾಗರಿಕರು ರೈಲು ಟಿಕೆಟ್‌ಗಳಲ್ಲಿ ತಮಗೆ ಒದಗಿಸಲಾಗಿರುವ ಸಂಪೂರ್ಣ ರಿಯಾಯಿತಿಯನ್ನು ಪಡೆದುಕೊಳ್ಳುವ ಅಥವಾ ಸಂಪೂರ್ಣ ಮೊತ್ತವನ್ನು ಕೈಬಿಡುವ ಅವಕಾಶವನ್ನು ನೀಡಲಾಗಿತ್ತು. ಈ ವರ್ಷ ಇದಕ್ಕೊಂದು ಹೊಸ ನಿಬಂಧನೆಯನ್ನು ಸೇರಿಸಿ, ಹಿರಿಯ ನಾಗರಿಕರು ಶೇಕಡಾ 50 ರಿಯಾಯಿತಿಯನ್ನು ಕೈಬಿಡುವ ಅವಕಾಶವನ್ನು ನೀಡಲಾಯಿತು.

ರೈಲ್ವೇ ಇಲಾಖೆಯ ಮೇಲೆ ಹಿರಿಯ ನಾಗರಿಕರ ವಿಭಾಗದಡಿಯಿರುವ ರೂ. 1300 ಕೋಟಿ ಸಬ್ಸಿಡಿಯ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

 ಜುಲೈ 22ರಿಂದ ಅಕ್ಟೋಬರ್ 22ರ ವೇಳೆಗೆ 2.16 ಲಕ್ಷ ಪುರುಷರು ಮತ್ತು 2.67 ಲಕ್ಷ ಮಹಿಳೆಯರು ತಮ್ಮ ಸಂಪೂರ್ಣ ಸಬ್ಸಿಡಿಯನ್ನು ಕೈಬಿಟ್ಟಿದ್ದಾರೆ. 2.51 ಲಕ್ಷ ಪುರುಷರು ಮತ್ತು 2.05 ಲಕ್ಷ ಮಹಿಳೆಯರು ಶೇಕಡಾ 50 ಸಬ್ಸಿಡಿಯನ್ನು ತ್ಯಜಿಸಿದ್ದಾರೆ. ಹಾಗಾಗಿ ಮೂರು ತಿಂಗಳಲ್ಲಿ ಸಬ್ಸಿಡಿಯನ್ನು ತೊರೆದಿರುವ 60ಕ್ಕೂ ಮೇಲ್ಪಟ್ಟ ವಯಸ್ಸಿನ ಪ್ರಯಾಣಿಕರ ಸಂಖ್ಯೆ 9.39 ಲಕ್ಷಕ್ಕೆ ತಲುಪಿದೆ.

ಕಳೆದ ವರ್ಷ ಇದೇ ವೇಳೆಗೆ ಕೇವಲ 4.68 ಲಕ್ಷ ಹಿರಿಯ ನಾಗರಿಕರು ಸಬ್ಸಿಡಿಯನ್ನು ಕೈಬಿಟ್ಟಿದ್ದರು. ಈ ಪೈಕಿ 2.35 ಲಕ್ಷ ಪುರುಷರು ಮತ್ತು 2.33 ಲಕ್ಷ ಮಹಿಳೆಯರಾಗಿದ್ದರು. ಅಂಕಿಂಶಗಳ ಪ್ರಕಾರ ಕಳೆದ ಒಂದು ವರ್ಷದಲ್ಲಿ ಸಬ್ಸಿಡಿಯನ್ನು ಕೈಬಿಡುವ ಹಿರಿಯ ನಾಗರಿಕರ ಸಂಖ್ಯೆ ದುಪ್ಪಟ್ಟಾಗಿದೆ. ಸಬ್ಸಿಡಿಯಿಂದ ಉಂಟಾಗುತ್ತಿರುವ ನಷ್ಟವನ್ನು ಭರಿಸಲು ಪ್ರಯತ್ನಿಸುತ್ತಿರುವ ರೈಲ್ವೇ ಇಲಾಖೆಗೆ ಇದು ಸಂತಸದ ವಿಷಯವಾಗಿದೆ ಎಂದು ರೈಲ್ವೇ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ಪ್ರಸ್ತುತ ರೈಲ್ವೇಯು ಟಿಕೆಟ್‌ದರದ ಶೇಕಡಾ 43ನ್ನು ಭರಿಸುತ್ತಿದ್ದು ಇದರಿಂದ ವಾರ್ಷಿಕ ರೂ. 30,000 ಕೋಟಿ ನಷ್ಟವನ್ನು ಅನುಭವಿಸುತ್ತಿದೆ. ಇದರಲ್ಲಿ ದರ ರಿಯಾಯಿತಿಯಿಂದ ಉಂಟಾಗುತ್ತಿರುವ ನಷ್ಟವೇ ರೂ. 1,600 ಕೋಟಿಯಾಗಿದೆ. ಪ್ರಯಾಣಿಕರ ಸಾಗಾಟಕ್ಕೆ ತಗುಲುವ ವೆಚ್ಚದ ಕೇವಲ ಶೇಕಡಾ 57ನ್ನು ಮಾತ್ರ ರೈಲ್ವೇ ಇಲಾಖೆಯು ಟಿಕೆಟ್ ಮಾರಾಟದ ಮೂಲಕ ಪಡೆದುಕೊಳ್ಳುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X