Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಶಿಕಲಾ-ದಿನಕರನ್ ಟೋಪಿ ಚಿಹ್ನೆ ವಿವಾದ:...

ಶಶಿಕಲಾ-ದಿನಕರನ್ ಟೋಪಿ ಚಿಹ್ನೆ ವಿವಾದ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ4 Dec 2017 9:14 PM IST
share
ಶಶಿಕಲಾ-ದಿನಕರನ್ ಟೋಪಿ ಚಿಹ್ನೆ ವಿವಾದ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಹೊಸದಿಲ್ಲಿ, ಡಿ.4: ಮುಂಬರುವ ಆರ್‌ಕೆ ನಗರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟೋಪಿ ಚಿಹ್ನೆಯನ್ನು ಬಳಸಲು ಅನುಮತಿ ನೀಡುವಂತೆ ಕೋರಿ ಶಶಿಕಲಾ-ದಿನಕರನ್ ಬಣ ದಿಲ್ಲಿ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.

ಶಶಿಕಲಾ-ದಿನಕರನ್ ಬಣ, ಚುನಾವಣಾ ಆಯೋಗ ಮತ್ತು ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಒ ಪನ್ನೀರ್ ಸೆಲ್ವಂ ಬಣದ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಇಂದರ್‌ಮೀತ್ ಕೌರ್ ಈ ಬಗ್ಗೆ ತೀರ್ಪನ್ನು ಸೋಮವಾರ 4 ಗಂಟೆಯಗೆ ನೀಡುವುದಾಗಿ ತಿಳಿಸಿದರು.

ಎರಡೆಲೆ ಚಿಹ್ನೆಯನ್ನು ಪಳನಿಸ್ವಾಮಿ-ಪನ್ನೀರ್‌ಸೆಲ್ವಂ ಬಣಕ್ಕೆ ನೀಡಲು ಆದೇಶಿಸಿದ್ದ ಚುನಾವಣಾ ಆಯೋಗದ ನವೆಂಬರ್ 23ರ ಆದೇಶವನ್ನು ಪ್ರಶ್ನಿಸಿ ಶಶಿಕಲಾ-ದಿನಕರನ್ ಬಣ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯನ್ನು ಕೋರಿ ನ್ಯಾಯಾಲಯವು ಚುನಾವಣಾ ಆಯೋಗ ಮತ್ತು ಪಳನಿಸ್ವಾಮಿ-ಪನ್ನೀರ್‌ಸೆಲ್ವಂ ಬಣಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಕುರಿತ ಮುಖ್ಯ ಅರ್ಜಿಯ ವಿಚಾರಣೆ ಫೆಬ್ರವರಿ 12ರಂದು ನಡೆಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆಯ ವೇಳೆ ಶಶಿಕಲಾ-ದಿನಕರನ್ ಬಣಕ್ಕೆ ಟೋಪಿ ಚಿಹ್ನೆಯನ್ನು ನೀಡಿರುವ ನ್ಯಾಯಾಲಯದ ಕ್ರಮವನ್ನು ಚುನಾವಣಾ ಆಯೋಗ, ಪಳನಿಸ್ವಾಮಿ-ಪನ್ನೀರ್‌ಸೆಲ್ವಂ ಬಣ ವಿರೋಧಿಸಿತ್ತು. ಹೀಗೆ ಚಿಹ್ನೆಯನ್ನು ನೀಡಲು ಕೇವಲ ರಿಟರ್ನಿಂಗ್ ಅಧಿಕಾರಿಗೆ ಮಾತ್ರ ಅಧಿಕಾರವಿದೆ ಎಂದು ಚುನಾವಣಾ ಆಯೋಗ ವಾದಿಸಿತ್ತು. ಶಶಿಕಲಾ-ದಿನಕರನ್ ಬಣಕ್ಕೆ ಟೋಪಿ ಚಿಹ್ನೆ ಸಿಗದಿದ್ದರೆ ರಿಟರ್ನಿಂಗ್ ಅಧಿಕಾರಿ ಅವರಿಗೆ ಬೇರೆ ಯಾವುದೇ ಉಚಿತ ಚಿಹ್ನೆಯನ್ನು ನೀಡಬಹುದಿತ್ತು ಎಂದು ಪಳನಿಸ್ವಾಮಿ-ಪನ್ನೀರ್ ಸೆಲ್ವಂ ಪರ ವಕೀಲರು ವಾದಿಸಿದ್ದರು.

ಆದರೆ ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ ರಿಟರ್ನಿಂಗ್ ಅಧಿಕಾರಿ ಕೂಡಾ ಚುನಾವಣಾ ಆಯೋಗದ ಭಾಗವೇ ಆಗಿರುವ ಕಾರಣ ಆಯೋಗದ ನವೆಂಬರ್ 23ರ ಆದೇಶದ ವಿರುದ್ಧ ಹೋಗಲು ಸಾಧ್ಯವಿರುತ್ತಿರಲಿಲ್ಲ ಎಂದು ತಿಳಿಸಿತು.

ಟೋಪಿಯು ಒಂದು ಸ್ವತಂತ್ರ ಚಿಹ್ನೆಯಾಗಿದ್ದು ಅದನ್ನು ಯಾವುದೇ ವ್ಯಕ್ತಿಗೆ ಅಥವಾ ಸ್ವತಂತ್ರ ಅಭ್ಯರ್ಥಿಗೆ ಕಾಯ್ದಿರಿಸುವಂತಿಲ್ಲ ಎಂದು ಪಳನಿಸ್ವಾಮಿ-ಪನ್ನೀರ್‌ಸೆಲ್ವಂ ಬಣ ಮತ್ತು ಚುನಾವಣಾ ಆಯೋಗ ವಾದಿಸಿತ್ತು. ನವೆಂಬರ್ 23ರ ಆದೇಶದಂತೆ ಶಶಿಕಲಾ ಮತ್ತು ದಿನಕರನ್ ಅವರು ಯಾವುದೇ ಬಣದ ಭಾಗವಾಗಿಲ್ಲ ಬದಲಿಗೆ ಸ್ವತಂತ್ರ ಅಭ್ಯರ್ಥಿಗಳಾಗಿದ್ದಾರೆ ಎಂದು ಚುನಾವಣಾ ಆಯೋಗ ವಾದಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X