Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ: 8 ತಿಂಗಳಲ್ಲಿ ಬಿಜೆಪಿ ಮತಗಳಿಕೆ...

ಉ.ಪ್ರ: 8 ತಿಂಗಳಲ್ಲಿ ಬಿಜೆಪಿ ಮತಗಳಿಕೆ ಶೇ.12ರಷ್ಟು ಕುಸಿತ

ವಾರ್ತಾಭಾರತಿವಾರ್ತಾಭಾರತಿ4 Dec 2017 10:07 PM IST
share
ಉ.ಪ್ರ: 8 ತಿಂಗಳಲ್ಲಿ ಬಿಜೆಪಿ ಮತಗಳಿಕೆ ಶೇ.12ರಷ್ಟು ಕುಸಿತ

  ಲಕ್ನೋ,ಡಿ.3: ಕಳೆದ ವಾರ ನಡೆದ ಉತ್ತರಪ್ರದೇಶದ ಪೌರಾಡಳಿತ ಸಂಸ್ಥೆಗಳ ಅಧ್ಯಕ್ಷರ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು 16 ನಗರಪಾಲಿಕೆಗಳ ಪೈಕಿ 14ರಲ್ಲಿ ಗೆಲುವುಸಾಧಿಸಿದ್ದರೂ, ನಗರಪಂಚಾಯತ್ ಹಾಗೂ ಮುನ್ಸಿಪಲ್ ಮಂಡಳಿಗಳಲ್ಲಿ ಅದರ ಸಾಧನೆ ತೀರಾ ಕಳಪೆಯಾಗಿದೆ.

  ಮಹಾನಗರಪಾಲಿಕೆ, ನಗರಪಂಚಾಯತ್ ಮತ್ತು ್ಖನಗರಪಾಲಿಕೆ ಪರಿಷತ್ ( ಮುನ್ಸಿಪಲ್ ಮಂಡಳಿ)ಗಳ ಮುಖ್ಯಸ್ಥರ ಹುದ್ದೆಗಳಿಗಾಗಿ ಚುನಾವಣೆ ನಡೆದ ಒಟ್ಟು 652 ಸ್ಥಾನಗಳ ಪೈಕಿ ಬಿಜೆಪಿಗೆ ಕೇವಲ ಶೇ.30ರಷ್ಟು ಸ್ಥಾನಗಳನ್ನು ಮಾತ್ರವೇ ಸಾಧ್ಯವಾಗಿದೆ. ಕೇವಲ 8 ತಿಂಗಳುಗಳ ಹಿಂದೆ ನಡೆದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ 325 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಸ್ಥಳೀಯಾಡಳಿತ ಸಂಸ್ಥೆಯ ನಗರಪಂಚಾಯತ್ ಹಾಗೂ ಮುನ್ಸಿಪಲ್ ಮಂಡಳಿಗಳ ಅಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದೆ. ಈ ಚುನಾವಣೆಯಲ್ಲಿ ಅದರ ಮತಗಳಿಕೆ ಪ್ರಮಾಣವು ಶೇ.12ರಷ್ಟು ಕುಸಿದಿದೆ.

ಒಟ್ಟು 652 ಸ್ಥಾನಗಳ ಪೈಕಿ 225 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷೇತರರು ಅತಿದೊಡ್ಡ ಗುಂಪಾಗಿ ಹೊರಹೊಮ್ಮಿದ್ದಾರೆ. 184 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿ ಎರಡನೆ ಸ್ಥಾನದಲ್ಲಿದೆ. ಸಮಾಜವಾದಿ ಪಕ್ಷವು 128 ಸ್ಥಾನಗಳಲ್ಲಿ ವಿಜಯಗಳಿಸಿದ್ದು ಮೂರನೆ ಸ್ಥಾನದಲ್ಲಿದೆ. 76 ಸ್ಥಾನಗಳನ್ನು ಪಡೆದಿರುವ ಬಿಎಸ್ಪಿ ನಾಲ್ಕನೆ ಸ್ಥಾನದಲ್ಲಿದೆ.

 ಆದರೆ ಮೇಯರ್ ಚುನಾವಣೆಯಲ್ಲಿ ಬಿಎಸ್ಪಿ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೊದಲು ಬಿಜೆಪಿ ಕಸಿದುಕೊಂಡಿದ್ದ ನಗರಪ್ರದೇಶದ ದಲಿತಮತದಾರರನ್ನು ಮತ್ತೆ ತನ್ನೆಡೆಗೆ ಸೆಳೆಯುವಲ್ಲಿ ಬಿಎಸ್ಪಿ ಯಶಸ್ವಿಯಾಗಿದೆ.

ಉತ್ತರಪ್ರದೇಶದ 22 ಕೋಟಿ ಮತದಾರರ ಪೈಕಿ 8 ಕೋಟಿ ಮಂದಿ ಮೂರು ಸ್ತರದ ನಗರ-ಪಟ್ಟಣ ಆಡಳಿತಸಂಸ್ಥೆಗಳ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿದ್ದರು.ಈ ಚುನಾವಣೆಯಲ್ಲಿ ಒಟ್ಟು 4 ಕೋಟಿ ಮಂದಿ ಅಂದರೆ ಶೇ.52.4 ಮಂದಿ ಮತದಾನದಲ್ಲಿ ಪಾಲ್ಗೊಂಡಿದ್ದರು. 438 ನಗರ ಪಂಚಾಯತ್‌ಗಳಿಗೆ 2.65 ಕೋಟಿ ಮಂದಿ, 16 ಮಹಾನಗರಪಾಲಿಕೆಗಳಿಗೆ 35 ಲಕ್ಷ ಮಂದಿ ಹಾಗೂ 1 ಕೋಟಿ ಮಂದಿ ಹಾಗೂ 198 ಪುರಸಭೆಗಳಿಗೆ 198 ಮಂದಿ ಮತದಾನ ಮಾಡಿದ್ದರು.

ಮೇಯರ್ ಚುನಾವಣೆಗಳಲ್ಲಿ ಬಿಜೆಪಿಗೆ 87 ಶೇ. ಮತಗಳು ದೊರೆತರೆ, 12.5 ಶೇಕಡ ಮತಗಳೊಂದಿಗೆ ಬಿಎಸ್ಪಿ ದ್ವಿತೀಯ ಸ್ಥಾನದಲ್ಲಿದೆ.

 ನಗರಪಾಲಿಕಾ ಪರಿಷತ್ ( ಮುನ್ಸಿಪಲ್ ಮಂಡಳಿ) ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ 35.5 ಶೇಕಡ ಮತಗಳನ್ನು ಪಡೆದು 70 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಸ್ಪಿಗೆ 22.4 ಶೇಕಡ, ಬಿಎಸ್ಪಿ 14.65 ಶೇ. ಹಾಗೂ ಕಾಂಗ್ರೆಸ್ 4.5 ಶೇ. ಮತ್ತು ಪಕ್ಷೇತರರು 21.72 ಶೇ. ಮತಗಳನ್ನು ಪಡೆದಿದ್ದಾರೆ.

  ನಗರಪಂಚಾಯತ್ ಚುನಾವಣೆಗಳಲ್ಲಿ 2.65 ಕೋಟಿ ಮತಗಳು ಚಲಾವಣೆಯಾಗಿದ್ದು, ಒಟ್ಟು 438 ಸ್ಥಾನಗಳ ಪೈಕಿ ಬಿಜೆಪಿ 100 ಸ್ಥಾನಗಳಲ್ಲಿ ಗೆಲುವು ಕಂಡಿದ್ದು, ಕೇವಲ ಶೇ.22ರಷ್ಟು ಮತಗಳನ್ನು ಗಳಿಸಿದೆ. ಪಕ್ಷೇತರರು 41.55 ಶೇಕಡ ಮತ ಗಳಿಸಿದ್ದಾರೆ. ಎಸ್ಪಿ ಶೇ.18.95 ಮತಗಳನ್ನು ಬಾಚಿಕೊಂಡಿದ್ದರೆ, ಬಿಎಸ್ಪಿಗೆ 20.7 ಶೇಕಡ ಮತಗಳು ಲಭಿಸಿವೆ. ಕಾಂಗ್ರೆಸ್ ಮತಗಳಿಕೆಯ ಪ್ರಮಾಣ ಕೇವಲ ಶೇ.3.88 ಆಗಿದೆ.

ಹೀಗೆ ಚಲಾವಣೆಯಾದ ಒಟ್ಟು 1.23 ಕೋಟಿ ಮತಗಳ ಪೈಕಿ ಬಿಜೆಪಿಗೆ ಕೇವಲ ಶೇ.30ರಷ್ಟು ಮತಗಳು ಮಾತ್ರವೇ ದೊರೆತಿವೆ. 2017ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶೇ. 42ರಷ್ಟು ಮತಗಳು ದೊರೆತಿದ್ದವು. ಆದರೆ ಈಗ ಅದರ ಮತಗಳಿಕೆ ಪ್ರಮಾಣವು ಶೇ.30ಕ್ಕೆ ಕುಸಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X