Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ರಾಜಧಾನಿಯಾಗಿ ಜೆರುಸಲೇಂಗೆ...

ಇಸ್ರೇಲ್ ರಾಜಧಾನಿಯಾಗಿ ಜೆರುಸಲೇಂಗೆ ಮಾನ್ಯತೆ ಬೇಡ: ಅಮೆರಿಕಕ್ಕೆ ಫೆಲೆಸ್ತೀನ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ4 Dec 2017 10:27 PM IST
share
ಇಸ್ರೇಲ್ ರಾಜಧಾನಿಯಾಗಿ ಜೆರುಸಲೇಂಗೆ ಮಾನ್ಯತೆ ಬೇಡ: ಅಮೆರಿಕಕ್ಕೆ ಫೆಲೆಸ್ತೀನ್ ಎಚ್ಚರಿಕೆ

ರಮಲ್ಲಾ (ಫೆಲೆಸ್ತೀನ್), ಡಿ. 4: ಇಸ್ರೇಲ್‌ನ ರಾಜಧಾನಿಯಾಗಿ ಜೆರುಸಲೇಂಗೆ ಅಮೆರಿಕ ಮಾನ್ಯತೆ ನೀಡಿದರೆ, ಅದು ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿ ಆರಂಭಿಸಿರುವ ಶಾಂತಿ ಪ್ರಯತ್ನಗಳನ್ನು ಹಾಳುಗೆಡವುತ್ತದೆ ಎಂದು ಫೆಲೆಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ಎಚ್ಚರಿಸಿದ್ದಾರೆ.

‘‘ಇಸ್ರೇಲ್‌ನ ರಾಜಧಾನಿಯಾಗಿ ಜೆರುಸಲೇಂಗೆ ಮಾನ್ಯತೆ ನೀಡುವುದಕ್ಕೆ ಸಂಬಂಧಿಸಿದ ಅಮೆರಿಕದ ಯಾವುದೇ ಕ್ರಮ ಅಥವಾ ಜೆರುಸಲೇಂಗೆ ಅಮೆರಿಕ ರಾಯಭಾರ ಕಚೇರಿಯ ಸ್ಥಳಾಂತರವು ಶಾಂತಿ ಪ್ರಕ್ರಿಯೆಯ ಭವಿಷ್ಯದ ಮೇಲೆ ಬೆದರಿಕೆಯಾಗಿದೆ ಹಾಗೂ ಅದು ಫೆಲೆಸ್ತೀನೀಯರಿಗೆ, ಅರಬ್ಬರಿಗೆ ಮತ್ತು ಅಂತಾರಾಷ್ಟ್ರೀಯ ಸಮುದಾಯಕ್ಕೆ ಸ್ವೀಕಾರಾರ್ಹವಲ್ಲ’’ ಎಂದು ಅಬ್ಬಾಸ್ ನುಡಿದರು.

ತನ್ನನ್ನು ಭೇಟಿಯಾದ ಇಸ್ರೇಲ್‌ನ ಅರಬ್ ಸಂಸದರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು ಎಂದು ಅಧಿಕೃತ ವಫ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಮೆರಿಕ ರಾಯಭಾರ ಕಚೇರಿಯನ್ನು ಜೆರುಸಲೇಂಗೆ ಸ್ಥಳಾಂತರಿಸುವುದಾಗಿ ಚುನಾವಣಾ ಪ್ರಚಾರದ ವೇಳೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭರವಸೆ ನೀಡಿರುವುದನ್ನು ಸ್ಮರಿಸಬಹುದಾಗಿದೆ. ಈ ಭರವಸೆಯ ಜಾರಿಯನ್ನು ಮುಂದೂಡಲು ಟ್ರಂಪ್ ನಿರ್ಧರಿಸಿದ್ದು, ಅದಕ್ಕೆ ಪರಿಹಾರವಾಗಿ ಟ್ರಂಪ್ ಈ ವಾರ ಜೆರುಸಲೇಂನ್ನು ಇಸ್ರೇಲ್ ರಾಜಧಾನಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂಬುದಾಗಿ ಅಧಿಕಾರಿಗಳು ಹೇಳಿದ್ದಾರೆ.

ರಾಜಧಾನಿಯ ಬಗ್ಗೆ ವಿವಾದ

ಜೆರುಸಲೇಂ ತನ್ನ ರಾಜಧಾನಿಯೆಂದು ಇಸ್ರೇಲ್ ಪರಿಗಣಿಸಿದೆ. ಪ್ರಧಾನಿ ಕಚೇರಿ, ಸುಪ್ರೀಂ ಕೋರ್ಟ್ ಮತ್ತು ಸಂಸತ್ತು ಸೇರಿದಂತೆ ಇಸ್ರೇಲ್‌ನ ಹೆಚ್ಚಿನ ಸರಕಾರಿ ಸಂಸ್ಥೆಗಳು ಅಲ್ಲಿಂದಲೇ ಕಾರ್ಯಾಚರಿಸುತ್ತಿವೆ.

ಆದರೆ, ಈ ನಗರದ ಸ್ಥಿತಿಯನ್ನು ಶಾಂತಿ ಮಾತುಕತೆಗಳ ಮೂಲಕ ನಿರ್ಧರಿಸಬೇಕು ಎಂಬುದಾಗಿ ಅಂತಾರಾಷ್ಟ್ರೀಯ ಸಮುದಾಯ ಹೇಳುತ್ತದೆ.

ಅರಬ್ ಲೀಗ್ ಎಚ್ಚರಿಕೆ

 ಇಸ್ರೇಲ್ ರಾಜಧಾನಿಯಾಗಿ ಜೆರುಸಲೇಂನ್ನು ಮಾನ್ಯ ಮಾಡುವ ಟ್ರಂಪ್ ನಿರ್ಧಾರವು ಕುರುಡು ದುರಭಿಮಾನ ಮತ್ತು ಹಿಂಸಾಚಾರವನ್ನು ವೃದ್ಧಿಸುತ್ತದೆ ಹಾಗೂ ಅದು ಇಸ್ರೇಲ್-ಫೆಲೆಸ್ತೀನ್ ಶಾಂತಿ ಪ್ರಕ್ರಿಯೆಗೆ ಯಾವುದೇ ದೇಣಿಗೆ ನೀಡುವುದಿಲ್ಲ ಎಂದು ಅರಬ್ ಲೀಗ್ ಮುಖ್ಯಸ್ಥ ಅಹ್ಮದ್ ಅಬುಲ್ ಗೈತ್ ಹೇಳಿದ್ದಾರೆ.

‘‘ಈ ನಿರ್ಧಾರವು ಮಧ್ಯ ಪ್ರಾಚ್ಯ ಮತ್ತು ಇಡೀ ಜಗತ್ತಿನ ಸ್ಥಿರತೆಗೆ ಅಪಾಯಕಾರಿಯಾಗಿದೆ’’ ಎಂದು ಅವರು ಬಣ್ಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X