Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.97 ಅತ್ಯಾಚಾರ ಪ್ರಕರಣಗಳಲ್ಲಿ...

ಶೇ.97 ಅತ್ಯಾಚಾರ ಪ್ರಕರಣಗಳಲ್ಲಿ ಪರಿಚಿತರು, ಸಂಬಂಧಿಕರೇ ಆರೋಪಿಗಳು: ಎನ್‌ಸಿಬಿ ವರದಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ4 Dec 2017 11:18 PM IST
share
ಶೇ.97 ಅತ್ಯಾಚಾರ ಪ್ರಕರಣಗಳಲ್ಲಿ ಪರಿಚಿತರು, ಸಂಬಂಧಿಕರೇ ಆರೋಪಿಗಳು: ಎನ್‌ಸಿಬಿ ವರದಿ ಬಹಿರಂಗ

  ಇಂದೋರ್,ಡಿ.4: ಬಹುತೇಕ ಲೈಂಗಿಕ ಅಪರಾಧ ಪ್ರಕರಣಗಳಲ್ಲಿ ಬಾಲಕಿಯರು ಹಾಗೂ ಮಹಿಳೆಯರು ತಮ್ಮದೇ ಬಂಧುಗಳು ಹಾಗೂ ಪರಿಚಯಸ್ಥರಿಂದಲೇ ಲೈಂಗಿಕ ಶೋಷಣೆಗೊಳಗಾಗಿದ್ದಾರೆಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ.

2016ರಲ್ಲಿ ದಾಖಲಾದ ಶೇ.94.6ರಷ್ಟು ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆ ಅಥವಾ ಬಾಲಕಿಯ ಸಹೋದರ, ತಂದೆ, ತಾತ,ಪುತ್ರ ಅಥವಾ ಪರಿಚಯಯಸ್ಥರೇ ಆರೋಪಿಗಳಾಗಿದ್ದಾರೆಂದು ಎನ್‌ಸಿಬಿ ವರದಿಯ ದತ್ತಾಂಶಗಳು ಬಹಿರಂಗಪಡಿಸಿವೆ.

    2016ರಲಿ ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ಕಾಯ್ದೆ (ಪೊಕ್ಸೊ) ಹಾಗೂ ಸೆಕ್ಷನ್ 376 ಸೇರಿದಂತೆ ಭಾರತೀಯ ಅಪರಾಧ ದಂಡಸಂಹಿತೆಯ ಇತರ ಸೆಕ್ಷನ್‌ಗಳಡಿ ದೇಶದಲ್ಲಿ ಒಟ್ಟು 38,947 ಪ್ರಕರಣಗಳು ದಾಖಲಾಗಿವೆ. ಈ 38,947 ಪ್ರಕರಣಗಳ ಪೈಕಿ 36,859ರಲ್ಲಿ ಆರೋಪಿಗಳು ಅತ್ಯಾಚಾರ ಸಂತ್ರಸ್ತೆಯರಿಗೆ ಸಂಬಂಧಿಕರು ಎಂದು ವರದಿ ಹೇಳಿದೆ.

630 ಪ್ರಕರಣಗಳಲ್ಲಿ ಸಂತ್ರಸ್ತೆಯರು, ತಮ್ಮ ತಾತ,ತಂದೆ, ಸಹೋದರ ಹಾಗೂ ಪುತ್ರರಿಂದ ಅತ್ಯಾಚಾರಕ್ಕೊಳಗಾಗಿದ್ದರೆ, 1087 ಪ್ರಕರಣಗಳಲ್ಲಿ ಆರೋಪಿಗಳು ಪರಿಚಯಸ್ಥರು ಅಥವಾ ಬಂಧುಗಳಾಗಿದ್ದಾರೆ.

 2174 ಪ್ರಕರಣಗಳಲ್ಲಿ ಆರೋಪಿಗಳು ಸಂತ್ರಸ್ತೆಯರ ಬಂಧುಗಳಾಗಿದ್ದರೆ, 10,520 ಪ್ರಕರಣಗಳಲ್ಲಿ ನೆರೆಹೊರೆಯವರು ಅತ್ಯಾಚಾರದ ಆರೋಪ ಎದುರಿಸುತ್ತಿದ್ದಾರೆ. ಉಳಿದಂತೆ 600 ಪ್ರಕರಣಗಳಲ್ಲಿ ಸಂತ್ರಸ್ತೆಯ ಉದ್ಯೋಗದಾತರು ಹಾಗೂ ಸಹ ಉದ್ಯೋಗಿಗಳು ಅತ್ಯಾಚಾರ ಆರೋಪಿಗಳಾಗಿದ್ದಾರೆ.

  2016ರಲ್ಲಿ 557 ಪ್ರಕರಣಗಳಲ್ಲಿ ಆರೋಪಿಗಳು, ಸಂತ್ರಸ್ತೆಯ ಸಹಜೀವನ ಸಂಗಾತಿಗಳು (ಲಿವ್‌ಇನ್‌ಪಾರ್ಟನರ್), ಪತಿ ಅಥವಾ ಮಾಜಿ ಪತಿಯಾಗಿದ್ದಾರೆ. ಅದೇ ರೀತಿ 10,068 ಪ್ರಕರಣಗಳಲ್ಲಿ ಆರೋಪಿಯು ಮದುವೆಯ ಭರವಸೆ ನೀಡಿ, ಅತ್ಯಾಚಾರವೆಸಗಿದ್ದಾನೆಂದು ದತ್ತಾಂಶಗಳು ತಿಳಿಸಿವೆ. ಉಳಿದ 11,223 ಪ್ರಕರಣಗಳಲ್ಲಿ ಆರೋಪಿಗಳು ಸಂತ್ರಸ್ತೆಯ ಪರಿಚಿತರೆಂದು ಅದು ಹೇಳಿದೆ.

ವರದಿಯ ಅಂಕಿಅಂಶಗಳ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ. ಬಾಲ್ಯದಿಂದಲೇ ಗಂಡುಮಕ್ಕಳಿಗೆ ಸ್ತ್ರೀಯರ ಜೊತೆ ಹೇಗೆ ನಡೆದುಕೊಳ್ಳಬೇಕೆಂಬ ಬಗ್ಗೆ ಶಿಕ್ಷಣ ನೀಡುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

ಅಂತರ್ಜಾಲದಲ್ಲಿ ಸುಲಭವಾಗಿ ದೊರೆಯುವ ಅಶ್ಲೀಲ ದೃಶ್ಯಗಳು, ಸಾಹಿತ್ಯಗಳು ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಅವರ ಮೊಬೈಲ್‌ಪೋನ್ ಹಾಗೂ ಕಂಪ್ಯೂಟರ್‌ಗಳ ಮೇಲೆ ನಿಗಾವಿರಿಸಬೇಕೆಂದು ರೇಖಾ ಶರ್ಮಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X