Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಗತ್ಯ ಮಾಹಿತಿ-ಪುರಾವೆಗಳನ್ನೆ ನೀಡಿಲ್ಲ:...

ಅಗತ್ಯ ಮಾಹಿತಿ-ಪುರಾವೆಗಳನ್ನೆ ನೀಡಿಲ್ಲ: ಉಗ್ರಪ್ಪ

ಕಾರ್ಯದರ್ಶಿ ಎಸ್.ಮೂರ್ತಿ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ5 Dec 2017 6:24 PM IST
share
ಅಗತ್ಯ ಮಾಹಿತಿ-ಪುರಾವೆಗಳನ್ನೆ ನೀಡಿಲ್ಲ: ಉಗ್ರಪ್ಪ

ಬೆಂಗಳೂರು, ಡಿ. 5: ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ವಿರುದ್ಧದ ಲೈಂಗಿಕ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ದೂರುದಾರರು ಅಗತ್ಯ ಮತ್ತು ಸಮರ್ಪಕ ಮಾಹಿತಿ, ಅಗತ್ಯ ಪುರಾವೆ ಹಾಗೂ ಸಾಂದರ್ಭಿಕ ಸಾಕ್ಷಗಳನ್ನೆ ಒದಗಿಸಿಲ್ಲ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಲ್ಕಂಡ ಪ್ರಕರಣ ಸಂಬಂಧ ಎರಡು ದೂರು ನೀಡಿದ್ದು, ವೈಯಕ್ತಿಕ ದೂರಿಗೆ ಸಂಬಂಧಿಸಿದಂತೆ ದಿನಾಂಕ, ಸಮಯ, ಸ್ಥಳ ಮತ್ತು ಸಾಂದರ್ಭಿಕ ಸಾಕ್ಷಗಳೇ ಇಲ್ಲ. ಈ ಬಗ್ಗೆ ಮಾಹಿತಿ ನೀಡಲು ಕೋರಿದರೂ ಅವರು ನೀಡಿಲ್ಲ ಎಂದರು.

ಈ ಸುದ್ದಿ ಮಾಧ್ಯಮಗಳಲ್ಲಿ ಸುದ್ದಿಯಾದ ಬಳಿಕ ತಾನೇ ಖುದ್ದು ಎಸ್.ಮೂರ್ತಿ ಅವರಿಗೆ ಕರೆ ಮಾಡಿ ವಿಚಾರಣೆ ನಡೆಸಿದ್ದೇನೆ. ಈ ವೇಳೆ ಅವರು ತಾನು ಯಾವುದೇ ಮಹಿಳೆಯರನ್ನು ವೈಯಕ್ತಿಕವಾಗಿ ಭೇಟಿ ಮಾಡುವುದಿಲ್ಲ. ಸಚಿವಾಲಯದಲ್ಲಿ ಶೇ60ರಷ್ಟು ಮಂದಿ ಮಹಿಳಾ ಸಿಬ್ಬಂದಿ ಇದ್ದಾರೆ.

ತಾನು ಪರಿಶಿಷ್ಟ ಜಾತಿಗೆ ಸೇರಿದ್ದು, ಉನ್ನತ ಹುದ್ದೆಯಲ್ಲಿದ್ದೇನೆಂಬ ಏಕೈಕ ಕಾರಣಕ್ಕೆ ತನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ತನಗೂ ತಾಯಿ, ಪತ್ನಿ, ಹೆಣ್ಣು ಮಕ್ಕಳಿದ್ದು, ಯಾವುದೇ ಹೆಣ್ಣು ಮಕ್ಕಳಿಗೂ ತಾನು ಕಿರುಕುಳ ನೀಡಿಲ್ಲ. ಈ ಸಂಬಂಧ ಯಾವುದೇ ವಿಚಾರಣೆಗೆ ಸಿದ್ಧ ಎಂದು ಹೇಳಿದ್ದಾರೆಂದು ವಿವರಿಸಿದರು.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರ ಗಮನಕ್ಕೂ ತಂದಿದ್ದೇನೆ. ಮೂರ್ತಿ ವಿರುದ್ಧ ಆರೋಪ ಮಾಡುತ್ತಿರುವ ಮಹಿಳೆ ಸಚಿವಾಲಯದ ಆಂತರಿಕ ಸಮಿತಿಗೂ ದೂರು ನೀಡಿಲ್ಲ. ಅವರು ಈ ಸಂಬಂಧ ಸೂಕ್ತ ಮಾಹಿತಿ ನೀಡಿದರೆ ಮಾತ್ರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X