Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರದ ಸೌಲಭ್ಯ ಪಡೆದು ಬದುಕು...

ಸರ್ಕಾರದ ಸೌಲಭ್ಯ ಪಡೆದು ಬದುಕು ಕಟ್ಟಿಕೊಳ್ಳಿ : ಸತ್ರ ನ್ಯಾಯಾಧೀಶ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಕರೆ

ವಾರ್ತಾಭಾರತಿವಾರ್ತಾಭಾರತಿ5 Dec 2017 7:43 PM IST
share
ಸರ್ಕಾರದ ಸೌಲಭ್ಯ ಪಡೆದು ಬದುಕು ಕಟ್ಟಿಕೊಳ್ಳಿ : ಸತ್ರ ನ್ಯಾಯಾಧೀಶ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಕರೆ

ಮಡಿಕೇರಿ ಡಿ. 5 :ವಿಕಲಚೇತನರು ಸರ್ಕಾರದ ಸೌಲಭ್ಯ ಪಡೆದು ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಅವರು ಹೇಳಿದರು.

ನಗರದ ಓಂಕಾರ ಸದನದಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 
ವಿಕಲಚೇತನರಿಗೆ ಮಾಸಶಾಸನ, ಉಚಿತ ಬಸ್‍ಪಾಸ್, ಸಾಲ ಸೌಲಭ್ಯ, ವಸತಿ ಯೋಜನೆ ಹಾಗೆಯೇ ಸಾರ್ವಜನಿಕ ಸೇವೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಉದ್ಯೋಗದಲ್ಲಿ ಶೇ.3 ರಷ್ಟು ಮಿಸಲಾತಿ ಹೊಂದಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಅವರು ತಿಳಿಸಿದರು.

ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಮಾತನಾಡಿ ವಿಕಲಚೇತನರಾದ ಮಕ್ಕಳನ್ನು ಸಂಘ ಸಂಸ್ಥೆಗಳು ಪೋಷಿಸುತ್ತಿರುವುದು ಹೆಮ್ಮೆಯ ವಿಷಯ. ಅಂಗವಿಕಲರ ನೋವಿಗೆ ವೈದ್ಯರು ಸ್ಪಂದಿಸಬೇಕು. ಪ್ರತಿಯೊಬ್ಬರೂ ಅಂಗವಿಕಲ ಮಕ್ಕಳಿಗೆ ಸಾಧನೆ ಮಾಡಲು ಪ್ರೇರಣೆ ನೀಡಬೇಕು ಎಂದು ಅವರು ಹೇಳಿದರು.

ವಿಕಲಚೇತನರು ಶಾರೀರಿಕವಾಗಿ ಹೊರತು ಮಾನಸಿಕವಾಗಿಯಲ.್ಲ ಕಣ್ಣಿರುವ ನಾವೇ ಕಷ್ಟಪಡುತ್ತೇವೆ. ಕಣ್ಣಿಲ್ಲದ ಎಷ್ಟೋ ಮಂದಿ ಸಾಧನೆ ಮಾಡಿದ್ದಾರೆ. ಆತ್ಮಸ್ಥೈರ್ಯವಿದ್ದರೆ ಏನು ಬೇಕಾದರೂ ಮಾಡಬಹುದು. ಗುರಿ ಇರಲಿ ಮಕ್ಕಳೇ ನಿಮ್ಮ ಬದುಕಲಿ ನ್ಯೂನ್ಯತೆ ಬದಿಗಿಟ್ಟು ಮಾನಸಿಕವಾಗಿ ಬದುಕಿ ಎಂದು ಅವರು ಸಲಹೆ ಮಾಡಿದರು.  

ಕರ್ನಾಟಕ ರೇಷ್ಮೆ ಮಾರಟ ಮಂಡಳಿ ಅಧ್ಯಕ್ಷರಾದ ಟಿ.ಪಿ ರಮೇಶ್ ಅವರು ಮಾತನಾಡಿ ವಿಕಲತೆ ಹೊಂದಿಯೂ ಸಹ ಹಲವರು ಅನೇಕ ಸಾಧನೆ ಮಾಡಿದ್ದಾರೆ. ವಿಕಲಚೇತನರಿಗೆ ಇದು ಮಾದರಿ ಎಂದು ಅವರು ತಿಳಿಸಿದರು. 
ವಿಕಲಚೇತನರು ಯಾತನೆಪಡುವ ಬದಲು ಅವರಿಗೆ ದಾರಿದೀಪವಾಗಿ ಉತ್ತಮ ಸಮಾಜ ನಿರ್ಮಾಣ ಮಾಡಿ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡಿ. ವಿಕಲಚೇತನರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಾರೆ. ಅವರಿಗೆ ನಾವುಗಳು ಜೊತೆಗೂಡಿ ಸಹಕಾರ ನೀಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ್ ಅವರು ಮಾತನಾಡಿ ದೇಹಕ್ಕೆ ಮಾತ್ರ ಚೇತನ ಮನಸ್ಸಿಗಲ್ಲ. ವಿಕಲಚೇತನರಿಗೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ವಾಹನ ನಿಲ್ದಾಣ ಮತ್ತು ಬಸ್ಸಿನಲ್ಲಿ ಕಾಯ್ದಿರಿಸಿದ ಸೀಟುಗಳು ಇವರಿಗೆ ಸಿಗಬೇಕು. ಅಂಗವಿಕಲತೆ ಶೇ.80 ರಷ್ಟು ಇದ್ದರೆ ಸರ್ಕಾರದ ಸೌಲಭ್ಯ ಪಡೆಯಬಹುದು ಎಂದು ಅವರು ತಿಳಿಸಿದರು.
ಕೈ ಕಾಲು ಇಲ್ಲದಿದ್ದರೂ ಪರವಾಗಿಲ್ಲ ಗುರಿ ಇರಬೇಕು, ಗುರಿ ಹಿಂದೆ ಯೋಜನೆ ಇರಬೇಕು. ನಾವು ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕು ಎಂದು ಹೇಳಿದರು.
ಸಮಾಜದಲ್ಲಿ ವಿಕಲಚೇತನರ ಪ್ರತಿಭೆ ಗುರುತಿಸಿ ಜಗತ್ತಿಗೆ ತೋರಿಸಬೇಕು. ಹೆಚ್ಚಿನ ಗೌರವಧನ ನೀಡುವಂತಾಗಬೇಕು ಎಂದು ಜಿ.ಪಂ.ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಕೆ.ವಿಜು ಸುಬ್ರಮಣಿ ತಿಳಿಸಿದರು.

ತಂದೆ ತಾಯಿಗಳು ವಿಕಲಚೇತನ ಮಕ್ಕಳ್ಳಿಗೆ ಸಹಾಯ ಮಾಡಬೇಕು. ಅವರು ಮನಸ್ಥೈರ್ಯ ಗುಂದದೆ ಯಶಸ್ವಿ ಕಾಣಬೇಕು. ಅವರಿಗೆ ಪ್ರೋತ್ಸಾಹ ನೀಡಿದರೆ ಉತ್ತಮ ಬೆಳಕಾಗಿ ಹೊರ ಬರುತ್ತಾರೆ. ನಾಲ್ಕು ಗೋಡೆ ಮಧ್ಯೆ ಇರದೇ ಹೊರ ಪ್ರಪಂಚಕ್ಕೆ ಪರಿಚಯಿಸಿ ಎಂದು ಅವರು ಹೇಳಿದರು.
ವಕೀಲರಾದ ವೈ.ಮನೋಜ್ ಬೋಪಯ್ಯ ಅವರು ಮಾತನಾಡಿ ಕಾನೂನು ಬಗ್ಗೆ ಅರಿವು ವಿಕಲಚೇತನರಿಗೆ ಸಮಾಜದ ಅವಿಭಾಜ್ಯ ಅಂಗವಾದ್ದರಿಂದ ತಿಳಿದುಕೊಳ್ಳಬೇಕು. ವಿಕಲಚೇತನ ಮಕ್ಕಳು ಹಕ್ಕಿಯಂತೆ ಹಾರುವ ಕನಸು ಕಾಣಬೇಕು ಎಂದು ತಿಳಿಸಿದರು.

 ಸರ್ಕಾರದ ಸೌಲಭ್ಯಗಳನ್ನು ವಿಕಲಚೇತನರು ಪಡೆದುಕೊಳ್ಳಬೇಕು. ಹಾಗೆಯೇ ಸರ್ಕಾರಿ ಕಚೇರಿಗಳಲ್ಲಿ ಪ್ರತ್ಯೇಕ ರಹದಾರಿ ಮಾಡಬೇಕು. ನಿಮಗೆ ಹಕ್ಕುಗಳು ಬಹಳ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುಮ್ತಾಜ್ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್‍ಕುಮಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಟಿ.ಪಿ.ದೇವರಾಜ್, ಚಿಗುರು ವಿಕಲ ಚೇತನರ ಸಂಘದ ಅಧ್ಯಕ್ಷರಾದ ಮಹೇಶ್ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X