Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಸಮೀಪಿಸಿದ ‘ಒಖಿ’ ಚಂಡಮಾರುತ,...

ಗುಜರಾತ್ ಸಮೀಪಿಸಿದ ‘ಒಖಿ’ ಚಂಡಮಾರುತ, ಭಾರೀ ಮಳೆ

ಮಹಾರಾಷ್ಟ್ರದಲ್ಲಿ ಆಲಿಕಲ್ಲು ಮಳೆಯಿಂದ ರೈಲು ಸಂಚಾರಕ್ಕೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ5 Dec 2017 9:08 PM IST
share
ಗುಜರಾತ್ ಸಮೀಪಿಸಿದ ‘ಒಖಿ’ ಚಂಡಮಾರುತ, ಭಾರೀ ಮಳೆ

ಮುಂಬೈ, ಡಿ.5: ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪಕ್ಕೆ ಪ್ರಳಯಾಂತಕನಂತೆ ಎರಗಿ ಭಾರೀ ನಾಶ ಉಂಟು ಮಾಡಿದ್ದ ಒಖಿ ಚಂಡಮಾರುತ ಗುಜರಾತ್ ಸಮೀಪಿಸುತ್ತಿದ್ದು, ಮಂಗಳವಾರ ರಾತ್ರಿಯಿಂದ ಗುಜರಾತ್ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ.

   ಭಾರೀ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಬೈ ಸಿಂಧುದುರ್ಗ, ಥಾಣೆ, ರಾಯ್‌ಗಢ ಮತ್ತು ಪಲ್‌ಘಾರ್ ಜಿಲ್ಲೆಯಲ್ಲಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಹಾರಾಷ್ಟ್ರದ ಸಚಿವ ವಿನೋದ್ ಟಾವ್ಡೆ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

 ಮುಂಬೈ-ಪುಣೆ ಎಕ್ಸ್‌ಪ್ರೆಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಭಾರೀ ಆಲಿಕಲ್ಲು ಮಳೆಯಾದ ಕಾರಣ ಕೆಲವು ರೈಲುಗಳು ವಿಳಂಬವಾಗಿ ಸಂಚರಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಕೆಲವೆಡೆ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವುದಾಗಿ ಪಶ್ಚಿಮ ರೈಲ್ವೇ ತಿಳಿಸಿದೆ.

 ದಕ್ಷಿಣ ಗುಜರಾತ್‌ನಲ್ಲಿ ಬುಧವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಂಡಮಾರುತ ಪೀಡಿತ ಪ್ರದೇಶದ ಜನರು ಮತ್ತು ಸಂತ್ರಸ್ತರಾದವರು ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸಲು ಬೇಕಾದ ಸರ್ವ ಸಿದ್ಧತೆ ನಡೆಸುವಂತೆ ಗುಜರಾತ್ ಚುನಾವಣಾಧಿಕಾರಿಗೆ ಮುಖ್ಯ ಚುನಾವಣಾಧಿಕಾರಿ ಸೂಚಿಸಿದ್ದಾರೆ. ಸೋಮವಾರ ಕಡಲಿಗೆ ಇಳಿದಿದ್ದ 13,000 ಮೀನುಗಾರಿಕಾ ದೋಣಿಗಳನ್ನು ಮರಳಿ ದಡ ಸೇರುವಂತೆ ಸೂಚಿಸಲಾಗಿದೆ . ಚಂಡಮಾರುತದ ಕಾರಣ ಗೋವಾದಲ್ಲಿ ಸಮುದ್ರದ ನೀರಿನ ಮಟ್ಟ ಏಕಾಏಕಿ ಏರಿದ ಕಾರಣ 12 ಬೀಚ್‌ಗಳಿಗೆ ಹಾನಿಯಾಗಿದೆ.

ಪ್ರತಿಕೂಲ ಪರಿಸ್ಥಿತಿಯ ಕಾರಣ ಗುಜರಾತ್ ಸಮುದ್ರ ತೀರ ತಲುಪುವ ಮೊದಲೇ ಚಂಡಮಾರುತ ಕ್ಷೀಣಗೊಳ್ಳುವ ಸಾಧ್ಯತೆ ಇದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆಯೊಂದು ತಿಳಿಸಿದೆ. ಈ ಮಧ್ಯೆ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಪ್ರಧಾನಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ 5 ಕೋಟಿ ರೂ. ಕೊಡುಗೆ ನೀಡಿದ್ದಾರೆ.

ತಮಿಳುನಾಡು ಸರಕಾರಕ್ಕೆ ಹೈಕೋರ್ಟ್ ಸೂಚನೆ

ಕನ್ಯಾಕುಮಾರಿಯಲ್ಲಿ ‘ಒಖಿ’ ಚಂಡಮಾರುತದ ಹಾವಳಿಯಿಂದ ಸಂತ್ರಸ್ತರಾದವರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ತಮಿಳುನಾಡು ಸರಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.

 ನೆರೆ ಪರಿಹಾರ ಶಿಬಿರದಲ್ಲಿ ನೆಲೆಸಿರುವ ಸಂತ್ರಸ್ತರಿಗೆ ಸಾಕಷ್ಟು ಔಷಧಿ, ವಿದ್ಯುಚ್ಚಕ್ತಿ ಸೌಲಭ್ಯ, ನೀರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಹೈಕೋರ್ಟ್‌ನ ನ್ಯಾಯಪೀಠವು ರಾಜ್ಯ ಸರಕಾರದ ಅಧಿಕಾರಿಗಳಿಗೆ ಸೂಚಿಸಿದೆ.

ಚಂಡಮಾರುತದಿಂದ ತಮಿಳುನಾಡು ಮತ್ತು ಕೇರಳದಲ್ಲಿ 39 ಜನ ಮೃತಪಟ್ಟಿದ್ದು 167 ಮೀನುಗಾರರು ನಾಪತ್ತೆಯಾಗಿದ್ದಾರೆ. ಇದರಲ್ಲಿ ತಮಿಳುನಾಡಿನಲ್ಲಿ 10 ಮತ್ತು ಕೇರಳದಲ್ಲಿ 29 ಮಂದಿ ಮೃತಪಟ್ಟಿದ್ದಾರೆ. ನಾಪತ್ತೆಯಾದವರ ನಿಖರ ಸಂಖ್ಯೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಆದರೆ ಖಾಸಗಿ ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 74 ಮತ್ತು ಕೇರಳದಲ್ಲಿ 93 ಮೀನುಗಾರರು ನಾಪತ್ತೆಯಾಗಿದ್ದಾರೆ . ಒಟ್ಟು 556 ಮಂದಿಯನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜೀವ್ ಕುಮಾರ್ ಜಿಂದಾಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X