Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೆರುಸಲೇಂ ಇಸ್ರೇಲ್ ರಾಜಧಾನಿಯಾದರೆ...

ಜೆರುಸಲೇಂ ಇಸ್ರೇಲ್ ರಾಜಧಾನಿಯಾದರೆ ಇಸ್ಲಾಮಿಕ್ ಶೃಂಗ ಸಮ್ಮೇಳನ

ಇಸ್ಲಾಮಿಕ್ ಸಹಕಾರ ಸಂಘಟನೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ5 Dec 2017 10:04 PM IST
share
ಜೆರುಸಲೇಂ ಇಸ್ರೇಲ್ ರಾಜಧಾನಿಯಾದರೆ ಇಸ್ಲಾಮಿಕ್ ಶೃಂಗ ಸಮ್ಮೇಳನ

ರಿಯಾದ್ (ಸೌದಿ ಅರೇಬಿಯ), ಡಿ. 5: ಜೆರುಸಲೇಂನ್ನು ಇಸ್ರೇಲ್‌ನ ರಾಜಧಾನಿ ಎಂಬುದಾಗಿ ಮಾನ್ಯ ಮಾಡುವ ವಿವಾದಾಸ್ಪದ ತೀರ್ಮಾನವನ್ನು ಅಮೆರಿಕ ತೆಗೆದುಕೊಂಡರೆ, ಮುಸ್ಲಿಮ್ ದೇಶಗಳ ಶೃಂಗಸಭೆಯನ್ನು ಕರೆಯುವುದಾಗಿ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಸೋಮವಾರ ತಿಳಿಸಿದೆ.

ಜೆರುಸಲೇಂನ ಸ್ಥಾನಮಾನಕ್ಕೆ ಸಂಬಂಧಿಸಿ ಹಲವು ವರ್ಷಗಳ ಅಮೆರಿಕ ನೀತಿಯನ್ನು ಬದಲಾಯಿಸುವ ಮಹತ್ವದ ತೀರ್ಮಾನವೊಂದನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಆದರೆ, ಟ್ರಂಪ್‌ರ ಈ ಸಂಭಾವ್ಯ ನಿರ್ಧಾರಕ್ಕೆ ಫೆಲೆಸ್ತೀನ್ ಮತ್ತು ಅರಬ್ ಜಗತ್ತಿನಿಂದ ಉಗ್ರ ಪ್ರತಿಭಟನೆ ವ್ಯಕ್ತವಾಗುವ ಸೂಚನೆಗಳು ಈಗಾಗಲೇ ಲಭಿಸಿವೆ.

ಸೌದಿಯ ಜಿದ್ದಾ ನಗರದಲ್ಲಿ ಸೋಮವಾರ ನಡೆದ ತುರ್ತು ಸಭೆಯೊಂದರಲ್ಲಿ 57 ಸದಸ್ಯರ ಒಐಸಿ, ಅಮೆರಿಕದ ಸಂಭಾವ್ಯ ನಿರ್ಧಾರದ ಬಗ್ಗೆ ಕಳವಳ ವ್ಯಕ್ತಪಡಿಸಿತು.

‘‘ಜೆರುಸಲೇಂನ್ನು ಇಸ್ರೇಲ್‌ನ ರಾಜಧಾನಿ ಎಂಬುದಾಗಿ ಮಾನ್ಯ ಮಾಡುವ ನಿರ್ಧಾರವನ್ನು ಅಮೆರಿಕ ತೆಗೆದುಕೊಂಡರೆ, ನಾವು ಮೊದಲು ವಿದೇಶ ಸಚಿವರ ಮಟ್ಟದ ಸಭೆಯೊಂದನ್ನು ಏರ್ಪಡಿಸುತ್ತೇವೆ ಹಾಗೂ ಬಳಿಕ ಅತಿ ಶೀಘ್ರದಲ್ಲಿ ಇಸ್ಲಾಮಿಕ್ ಶೃಂಗ ಸಮ್ಮೇಳನವೊಂದನ್ನು ನಡೆಸುತ್ತೇವೆ’’ ಎಂದು ಹೇಳಿಕೆಯೊಂದರಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆ ತಿಳಿಸಿದೆ.

‘‘ಜೆರುಸಲೇಂನ್ನು ಇಸ್ರೇಲ್ ರಾಜಧಾನಿಯಾಗಿ ಮಾನ್ಯ ಮಾಡುವುದು ಅಥವಾ ವಿವಾದಾಸ್ಪದ ನಗರದಲ್ಲಿ ರಾಜತಾಂತ್ರಿಕ ಕಚೇರಿಯನ್ನು ಸ್ಥಾಪಿಸುವುದನ್ನು ‘ಅರಬ್ ಮತ್ತು ಇಸ್ಲಾಮಿಕ್ ದೇಶಗಳ ಮೇಲೆ ನಡೆದ ಸ್ಪಷ್ಟ ದಾಳಿ ಎಂಬುದಾಗಿ ಪರಿಗಣಿಸಲಾಗುವುದು’’ ಎಂದು ಸಂಘಟನೆ ಎಚ್ಚರಿಸಿದೆ.

ನಿರ್ಧಾರ ಮುಂದೂಡಿದ ಟ್ರಂಪ್

ಜೆರುಸಲೇಂನ್ನು ಇಸ್ರೇಲ್ ರಾಜಧಾನಿಯಾಗಿ ಮಾನ್ಯ ಮಾಡುವ ಸಂಭಾವ್ಯ ನಿರ್ಧಾರಕ್ಕೆ ವ್ಯಾಪಕ ಜಾಗತಿಕ ಪ್ರತಿಭಟನೆ ವ್ಯಕ್ತವಾಗುತ್ತಿರುವಂತೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿದ್ದಾರೆ.

 48 ಗಂಟೆಗಳ ಅವಧಿಯಲ್ಲಿ ಮಿತ್ರ ದೇಶಗಳಿಂದ ಬಂದ ಸಾರ್ವಜನಿಕ ಎಚ್ಚರಿಕೆಗಳು ಹಾಗೂ ವಿಶ್ವ ನಾಯಕರ ನಡುವಿನ ಖಾಸಗಿ ಫೋನ್ ಕರೆಗಳ ಹಿನ್ನೆಲೆಯಲ್ಲಿ, ಅಮೆರಿಕದ ರಾಜತಾಂತ್ರಿಕ ಕಚೇರಿಯನ್ನು ಟೆಲ್ ಅವೀವ್‌ನಿಂದ ಜೆರುಸಲೇಂಗೆ ಸ್ಥಳಾಂತರಿಸಲು ತೆಗೆದುಕೊಳ್ಳುವ ನಿರ್ಧಾರವನ್ನು ಟ್ರಂಪ್ ಮುಂದೂಡಲು ಬಯಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X