Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪವಾಸ ಕೂತಿದ್ದ ಅಭಿಮಾನಿಯ ಆಸೆ ಈಡೇರಿಸಿದ...

ಉಪವಾಸ ಕೂತಿದ್ದ ಅಭಿಮಾನಿಯ ಆಸೆ ಈಡೇರಿಸಿದ ಎಚ್.ಡಿ.ಕುಮಾರಸ್ವಾಮಿ

ಗ್ರಾಮಕ್ಕೆ ತೆರಳಿ ನವ ದಂಪತಿಗೆ ಆಶೀರ್ವಾದ

ವಾರ್ತಾಭಾರತಿವಾರ್ತಾಭಾರತಿ5 Dec 2017 10:22 PM IST
share
ಉಪವಾಸ ಕೂತಿದ್ದ ಅಭಿಮಾನಿಯ ಆಸೆ ಈಡೇರಿಸಿದ ಎಚ್.ಡಿ.ಕುಮಾರಸ್ವಾಮಿ

ಮದ್ದೂರು, ಡಿ. 5: ಮದುವೆಗೆ ಬರಲೇಬೇಕೆಂದು ಉಪವಾಸ ದರಣಿ ನಡೆಸಿದ್ದ ಅಭಿಮಾನಿಯೊಬ್ಬರ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಆಗಮಿಸಿ ನವದಂಪತಿಗೆ ಆಶೀರ್ವದಿಸಿ ಅಭಿಮಾನಿ ಬಯಕೆ ಈಡೇರಿಸಿದ್ದಾರೆ.

 ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ರವಿ ಕಳೆದ ನ.29ರಂದು ತನ್ನ ಮದುವೆಗೆ ಕುಮಾರಸ್ವಾಮಿ ಆಗಮಿಸಬೇಕೆಂದು ತನ್ನ ಮನೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಕುಮಾರಸ್ವಾಮಿ ಬರುವ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಸತ್ಯಾಗ್ರಹ ಅಂತ್ಯಗೊಳಿಸಿದ್ದರು.

 ಡಿ.1ರಂದು ಮದುವೆಗೆ ಕಾರಣಂತರಗಳಿಂದ ಕುಮಾರಸ್ವಾಮಿ ಮದುವೆಗೆ ಆಗಮಿಸಲಿರಲಿಲ್ಲ. ಆನಂತರ ಬರುವುದಾಗಿ ದೂರವಾಣಿ ಮೂಲಕ ಭರವಸೆ ನೀಡಿದ್ದರು. ಅಂತೆಯೇ ಮಂಗಳವಾರ ನಡೆದ ಬೀಗರ ಔತಣ ಕೂಟದಲ್ಲಿ ಪಾಲ್ಗೊಂಡು ಅಭಿಮಾನಿ ಆಸೆ ಪೂರೈಸಿದರು.

 ಆನಂತರ ಮಾತನಾಡಿದ ಕುಮಾರಸ್ವಾಮಿ, ಈ ಹಿಂದೆ ಒಂದೇ ದಿನದಲ್ಲಿ ಮೈಸೂರಿನಿಂದ ಬೆಂಗಳೂರಿನ ತನಕ ದಿನಕ್ಕೆ 50ಕ್ಕಿಂತ ಹೆಚ್ಚು ಮದುವೆಗಳಿಗೆ ಹಾಜರಾಗುತ್ತಿದ್ದೆ. ಆದರೆ, ಈಗ ಆರೋಗ್ಯ ಸಮಸ್ಯೆ ಮತ್ತು ಪಕ್ಷದ ಕಾರ್ಯಕ್ರಮಗಳಿಂದಾಗಿ ಸಾಧ್ಯವಾಗುತ್ತಿಲ್ಲ ಎಂದರು.

 ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ತನ್ನ ಮೇಲೆ ಅಭಿಮಾನವಿಟ್ಟು ಮದುವೆಗೆ ಬರಲೇಬೇಕೆಂದು ಹಠಮಾಡುತ್ತಾರೆ. ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ, ತನಗೆ ಕೆಲಸದ ಒತ್ತಡವಿದ್ದು ಎಲ್ಲ ಮದುವೆಗಳಿಗೆ ಬರುವುದಕ್ಕಾಗುವುದಿಲ್ಲ. ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

 ರಾಜ್ಯದ ರೈತರ ಹಿತದೃಷ್ಠಿಯಿಂದ ಜನಪರ ಹೋರಾಟ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರು ಕೈಜೋಡಿಸಬೇಕು. ಮುಂದೆ ಯಾರು ಕೂಡ ಮದುವೆಗೆ ಬರಲೇಬೇಕೆಂಬ ಒತ್ತಡ ಹಾಕಬೇಡಿ. ಮದುವೆಗೆ ಬಾರದಿದ್ದರೂ ಈ ರೀತಿ ಸತ್ಯಾಗ್ರಹ ಧರಣಿಗಳನ್ನು ನಡೆಸಬೇಡಿ. ಮುಂದೆ ಯಾವಾಗಲಾದರೂ ಬಂದು ಆಶೀರ್ವಾದ ಮಾಡುತ್ತೇನೆ ಎಂದು ಅವರು ಕೋರಿದರು.

ಈ ಸಂದರ್ಭ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕ ಕೆ.ಸುರೇಶ್‌ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಪ್ರಧಾನ ಕಾರ್ಯದರ್ಶಿ ಸ್ವಾಮೀಗೌಡ, ಮುಖಂಡ ತೋಪ್ಪನಹಳ್ಳಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X