Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ಕಾವಲು ಪಡೆಯಿಂದ 13 ಮಂದಿ...

ಕರಾವಳಿ ಕಾವಲು ಪಡೆಯಿಂದ 13 ಮಂದಿ ಮೀನುಗಾರರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ6 Dec 2017 8:11 PM IST
share
ಕರಾವಳಿ ಕಾವಲು ಪಡೆಯಿಂದ 13 ಮಂದಿ ಮೀನುಗಾರರ ರಕ್ಷಣೆ

ಮಂಗಳೂರು, ಡಿ. 6: ಉಡುಪಿ ಸಮೀಪದ ಮಲ್ಪೆ ಆಳ ಸಮುದ್ರದಲ್ಲಿ ಓಖಿ ಚಂಡಮಾರುತಕ್ಕೆ ಸಿಲುಕಿ ಅಪಾಯದ ಸ್ಥಿತಿಯಲ್ಲಿದ್ದ ಕೇರಳ ಮೀನುಗಾರಿಕಾ ಬೋಟ್‌ನಲ್ಲಿದ್ದ 13 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬುಧವಾರ ಬೆಳಗ್ಗೆ ರಕ್ಷಿಸಿದ್ದಾರೆ.

ಈ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ಕರಾವಳಿ ಕಾವಲು ಪಡೆಯ ಕಮಾಂಡರ್ ಎಸ್.ಎಸ್. ದಸಿಲಾ ಅವರು, ತಮಿಳುನಾಡಿನ ಕನ್ಯಾಕುಮಾರಿಯ 9 ಮಂದಿ, ಅಸ್ಸಾಂನ ಒಬ್ಬ ಹಾಗೂ ಕೇರಳದ ಮೂವರು ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದರು.

ಮಲ್ಪೆಯಿಂದ 10 ನಾಟಿಕಲ್ ಮೈಲು ದೂರದ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ನಲ್ಲಿದ್ದ 13 ಮಂದಿ ಮೀನುಗಾರರು ಅಪಾಯದಲ್ಲಿದ್ದಾರ ಎಂಬ ಬಗ್ಗೆ ಕಾವಲು ಪಡೆಗೆ ಮಾಹಿತಿ ಸಿಕ್ಕಿದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಿಸಿರುವುದಾಗಿ ಹೇಳಿದರು.

ಕೇರಳದ ಕೊಚ್ಚಿಯಿಂದ ನವೆಂಬರ್ 7ರಂದು ಬಾರಾಕುಡ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆಂದು ಸಮುದ್ರಕ್ಕಿಳಿದಿತ್ತು. ಮೀನುಗಾರಿಕೆ ಮಾಡುತ್ತಾ ಕರ್ನಾಟಕದ ಸೀಮೆ ದಾಟಿ ಬರುವಾಗ ಓಖಿ ಚಂಡಮಾರುತದ ಪ್ರಭಾವ ಜೋರಾಯಿತು. ನ.27ರಂದು ಕಡಲಲೆಗಳ ಅಬ್ಬರ ಜೋರಾಗಿ, ಬಿರುಗಾಳಿಗೆ ಬೋಟ್ ಸಿಲುಕಿತ್ತು. ಡಿ.2ರಂದು ಬೋಟ್ ಒಳಗೆ ನೀರು ನುಗ್ಗಲಾರಂಭಿಸಿತು. ಅಪಾಯ ಅರಿತ ಕಾರ್ಮಿಕರು ಮುನ್ನೆಚ್ಚರಿಕೆಯಾಗಿ ತಮ್ಮಲ್ಲಿದ್ದ ಪರಿಕರಗಳಿಂದ ಬೋಟಿನಲ್ಲಿ ಸೇರುತ್ತಿದ್ದ ನೀರನ್ನು ಹೊರ ಹಾಕಲು ಪ್ರಾಂಭಿಸಲಾಗಿದೆ. ಬೋಟ್‌ನ ಎಂಜಿನ್‌ನ ಕಾರ್ಯ ಸ್ಥಗಿತಗೊಂಡಿಕು. ವೈರ್‌ಲೆಸ್ ಸಂಪರ್ಕವೂ ಕಡಿತದು ಹೋಯಿತು. ಇದಾಗಿ ನಾಲ್ಕು ದಿನಗಳ ಬಳಿಕ ಅಚಾನಕ್ಕಾಗಿ ಸಿಕ್ಕಿದ ಮೊಬೈಲ್ ಸಿಗ್ನಲ್‌ನಿಂದಾಗಿ ಕೇರಳದಲ್ಲಿದ್ದ ತಮ್ಮ ಮೀನುಗಾರ ಸ್ನೇಹಿತರನ್ನು ಸಂಪರ್ಕಿಸಿದರು. ಕೂಡಲೆ ಅವರು ಕೇರಳದ ಕೋಸ್ಟ್‌ಗಾರ್ಡ್ ಸಿಬ್ಬಂದಿಗೆ ವಿಷಯ ತಿಳಿಸಿ, ಅಲ್ಲಿಂದ ಕರ್ನಾಟಕ ಕೋಸ್ಟ್ ಗಾರ್ಡ್‌ಗೆ ಕರೆ ಬಂತು ಎಂದು ಕಮಾಂಡರ್ ಎಸ್.ಎಸ್. ದಸಿಲಾ ವಿವರಿಸಿದರು.

ಬುಧವಾರ ಬೆಳಗ್ಗೆ 7.15ರ ವೇಳೆಗೆ ನಮಗೆ ಮಾಹಿತಿ ಸಿಕ್ಕಿತು. ತಕ್ಷಣ ಕಾರ್ಯ ಪ್ರವೃತ್ತರಾಗಿ ಅಮರ್ತ್ಯ ರಕ್ಷಣಾ ಹಡಗನ್ನು ಸ್ಥಳಕ್ಕೆ ಕಳುಹಿಸಲಾಯಿತು. 2 ಗಂಟೆಗಳಲ್ಲಿ 10 ನಾಟಿಕಲ್ ಮೈಲು ದೂರದಲ್ಲಿದ್ದ ಬೋಟ್ ಇದ್ದ ಸ್ಥಳ ತಲುಪಿ ಎಲ್ಲ 13 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. ಬಳಿಕ ಕಾರ್ಮಿಕರನ್ನು ರಕ್ಷಿಸಿದ ಬಳಿಕ ಮೀನುಗಾರಿಕಾ ಬೋಟ್‌ನ್ನು ಮಲ್ಪೆ ಖಾಸಗಿ ಬೋಟ್‌ನ ನೆರವಿನಿಂದ ಮಲ್ಪೆ ತೀರಕ್ಕೆ ತರಲಾಯಿತು ಎಂದವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಮಾರ್ತ್ಯ ರಕ್ಷಣಾ ಹಡಗಿನ ಕ್ಯಾಪ್ಟನ್ ಕಮಾಂಡೆಂಟ್ ಅನಿಕೇತ್ ಸಿಂಗ್, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಕೋಸ್ಟ್ ಗಾರ್ಡ್ ಸಿಬ್ಬಂದಿ ಉಪಸ್ಥಿತರಿದ್ದರು.

''ಬದುಕುಳಿಯುವ ಭರವಸೆ ಕಳೆದುಕೊಂಡೆವು''
ಸುದ್ದಿಗಾರರೊಂದಿಗೆ ಮಾತನಾಡಿದ ಅಪಾಯಕ್ಕೆ ಸಿಲುಕಿದ್ದ ಬೋಟ್‌ನ ಸಹ ಮಾಲಕ ಸ್ಟಾಲಿನ್, ನ.27ರಂದು ಬೋಟ್ ಬಿರುಗಾಳಿಗೆ ಸಿಲುಕಿತ್ತು. ನಮಗೆ ಯಾವುದೇ ಸಂಪರ್ಕ ಸಾಧ್ಯವಾಗಲಿಲ್ಲ. ಮೂರ್ನಾಲ್ಕು ದಿನ ಕಳೆದಾಗ ನೀರು ಬೋಟ್‌ನೊಳಗೆ ನುಗ್ಗಲು ಪ್ರಾರಂಭಿಸಿತು. ನಾವು ಬದುಕುಳಿಯುವ ಭರವಸೆ ಕ್ಷೀಣಿಸತೊಡಗಿತು. ಕೆಲವು ದಿನಗಳ ಕಾಲ ನಿರಂತರ ಬೋಟ್‌ನಿಂದ ನೀರು ಹೊರ ಚೆಲ್ಲುತ್ತಲೇ ಇದ್ದವು ಎಂದರು.

ಆಹಾರ ಖಾಲಿಯಾಗಿತ್ತು

ಚಂಡಮಾರುತಕ್ಕೆ ಬೋಟ್ ಸಿಲುಕಿದ ಬಳಿಕ ನಮ್ಮಲ್ಲಿದ್ದ ಆಹಾರ ಖಾಲಿಯಾಗಿತ್ತು. ಆಹಾರ ಸಿಗದೆ ಕಂಗಾಲಾದೆವು. ಈ ನಡುವೆ ಹಸಿದ ಹೊಟ್ಟೆಯಲ್ಲೇ ಬೋಟ್‌ನೊಳಗೆ ಸೇರುತ್ತಿದ್ದ ನೀರನ್ನು ಹೊರಹಾಕುವುದೇ ನಮಗೆ ತ್ರಾಸದಾಯಕವಾಗಿತ್ತು ಎಂದು ಸ್ಟಾಲಿನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X