Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂವಿಧಾನದ ಮೇಲೆ ಸವಾರಿ ನಡೆದರೆ ಪರಿಣಾಮ...

ಸಂವಿಧಾನದ ಮೇಲೆ ಸವಾರಿ ನಡೆದರೆ ಪರಿಣಾಮ ನೆಟ್ಟಗಿರಲ್ಲ: ಝಾಕಿರ್ ಹುಸೈನ್

►ಡಾ.ಅಂಬೇಡ್ಕರ್ 62ನೇ ಪರಿನಿರ್ವಾಣ ►ಬಾಬರಿ ಮಸೀದಿ ಧ್ವಂಸ-ಕರಾಳ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Dec 2017 11:11 PM IST
share
ಸಂವಿಧಾನದ ಮೇಲೆ ಸವಾರಿ ನಡೆದರೆ ಪರಿಣಾಮ ನೆಟ್ಟಗಿರಲ್ಲ: ಝಾಕಿರ್ ಹುಸೈನ್

ಮೂಡಿಗೆರೆ, ಡಿ.6: ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ಕೋಮುವಾದಿ ರಾಜಕೀಯ ವ್ಯವಸ್ಥೆ ದೇಶದ ಆಡಳಿತ ಚುಕ್ಕಾಣಿ ಹಿಡಿದು ಅಂಬೇಡ್ಕರ್ ಅವರ ಸಂವಿಧಾನವನ್ನೇ ಗಾಳಿಗೆ ತೂರುವ ಹುನ್ನಾರ ನಡೆಸಿದೆ. ಹಾಗೊಂದು ವೇಳೆ ಸಂವಿಧಾನದ ಮೇಲೆ ಸವಾರಿ ನಡೆದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಝಾಕೀರ್ ಹುಸೈನ್ ಹೇಳಿದ್ದಾರೆ.

ಇಲ್ಲಿನ ಬಿಎಸ್ಪಿ ಕಚೇರಿಯಲ್ಲಿ ಬುಧವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ಹಾಗೂ ಬಾಬರಿ ಮಸೀದಿ ಧ್ವಂಸ-ಕರಾಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಆದರ್ಶಗಳನ್ನು ಒಪ್ಪಿಕೊಳ್ಳಲು ಕೋಮುವಾದಿ ರಾಜಕೀಯ ವ್ಯವಸ್ಥೆ ತಯಾರಿಲ್ಲ. ಅವದು ಕೋಮುವಾದಿ ನಿಲುವಿನಿಂದ ಭಾರತೀಯ ಸಮವಿಧಾನದ ಆಶಯಗಳನ್ನು ಗಾಳಿಗೆ ತೂರಿ ಷಡ್ಯಂತ್ರದ ಮೂಲಕ ಮಸಲತ್ತು ನಡೆಸಿ ಅಧಿಕಾರದ ಗದ್ದೆಗೆ ಏರಲು ಹವಣಿಸುತ್ತಿದ್ದಾರೆ ಎಂದು ದೂರಿದರು.

ಕೋಮುವಾದಿಗಳು ಮತ್ತು ಜಾತಿ ದೌರ್ಜನ್ಯ ಎಸಗುವ, ಧರ್ಮದ ಅಫೀಮು ಏರಿಸಿಕೊಂಡವರನ್ನು ಈ ದೇಶವನ್ನು ಆಳಲು ಅವಕಾಶ ನೀಡಬಾರದು. ಧರ್ಮದ ಅಮಲು ದೇಶವನ್ನು ಅಂಧಕಾರದಲ್ಲಿ ಮುಳುಗಿಸುವ ಭೀತಿ ಇದೆ. ಸಾಮಾನ್ಯ ಬಡಜನರು ಬದುಕಬೇಕೆಂದರೆ ದೇಶದಲ್ಲಿ ಅಂಬೇಡ್ಕರ್ ಆಶಯದಂತೆ ಸಂವಿಧಾನಬದ್ಧ ಅಧಿಕಾರ ನಡೆಸುವ ಜನರು ಅಧಿಕಾರಕ್ಕೆ ಬರಬೇಕು. ಅದಕ್ಕೆ ಸಾಮಾನ್ಯ ಜನರು ದುರಂಹಕಾರಿ ಕೋಮುವಾದಿಗಳನ್ನು ದೂರ ಇಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕವಳ್ಳಿ ರಮೇಶ್ ಮಾತನಾಡಿ, ಬಾಬರಿ ಮಸೀದಿಯನ್ನು ಕೆಡವಿ ಅಧಿಕಾರಕ್ಕೇರಿದ ಕೋಮುವಾದಿಗಳು ರಾಮಮಂದಿರವನ್ನು ನಿರ್ಮಿಸುವುದಾಗಿ ದೇಶದ ಜನರಿಗೆ ಸುಳ್ಳು ಹೇಳಿ ಕಾಲಹರಣ ಮಾಡುತ್ತಿವೆ. ಇಂತಹ ಸಾವಿರ ಕೋಮುವಾದಿಗಳ ಸರಕಾರ ಅಧಿಕಾರಕ್ಕೆ ಬಂದರೂ ರಾಮಮಂದಿರ ನಿರ್ಮಾಣ ಸಾಧ್ಯವಿಲ್ಲ. ರಾಮಮಂದಿರದ ಹೆಸರಿನಲ್ಲಿ ರಾಜಕಾರಣವಷ್ಟೆ ಅವರಿಗೆ ಬೇಕಾಗಿರುವುದು ಎಂದು ದೂರಿದರು.

ಹಿರಿಯ ಮುಖಂಡ ಯು.ಬಿ. ಮಂಜಯ್ಯ ಮಾತನಾಡಿ, ಅಂಬೇಡ್ಕರ್ ತತ್ವ, ಸಿದ್ಧಾಂತದಡಿಯಲಿ ಬಿಎಸ್ಪಿ ಮುಂದೊಂದು ದಿನ ಅಧಿಕಾರಕ್ಕೆ ಬರಲಿದೆ. ಬಿಎಸ್ಪಿ ಆಡಳಿತಕ್ಕೆ ಬಂದಾಗ ಸಂವಿಧಾನ ಸಮರ್ಪಕವಾಗಿ ಜಾರಿಗೆ ಬರಲಿದೆ. ಎಲ್ಲ ವರ್ಗದ ಜನರನ್ನು ಒಂದುಗೂಡಿಸಿ ಆಡಳಿತ ನಡೆಸಲು ಬಿಎಸ್ಪಿಯಿಂದ ಮಾತ್ರ ಸಾಧ್ಯ ಎಂದರು. ಈ ಸಮಯದಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷ ಪಿ.ಕೆ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಬಾಬರಿ ಮಸೀದಿ ಧ್ವಂಸಗೊಳಿಸಿ ಇಂದಿಗೆ 25 ವರ್ಷಗಳಾದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಲಾಯಿತು.

ವೇದಿಕೆಯಲ್ಲಿ ಮುಖಂಡರಾದ ಕೆ.ರಾಮು, ಕಳಸ ಸೋಮಯ್ಯ, ಬಣಕಲ್ ಪರಮೆಶ್, ಸುರೇಶ್, ನಾಗೇಶ್, ಶಬ್ಬೀರ್ ಹುಸೈನ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X