Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ ಪಟ್ಟಣದಲ್ಲಿ ವಿವಿಧ ಕಾಮಗಾರಿ...

ಮೂಡಿಗೆರೆ ಪಟ್ಟಣದಲ್ಲಿ ವಿವಿಧ ಕಾಮಗಾರಿ ಪರಿಶೀಲನೆ

ಕ್ಷೇತ್ರದ ಅಭಿವೃದ್ದಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗಾಗಿ ಶ್ರಮಿಸಿದ್ದೇನೆ: ಬಿ.ಬಿ.ನಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ7 Dec 2017 5:16 PM IST
share
ಮೂಡಿಗೆರೆ ಪಟ್ಟಣದಲ್ಲಿ ವಿವಿಧ ಕಾಮಗಾರಿ ಪರಿಶೀಲನೆ

ಮೂಡಿಗೆರೆ, ಡಿ.7: (ಪೊಟೊ: ಕಾಮಗಾರಿ ವೀಕ್ಷಣೆ 1, 2) ಕ್ಷೇತ್ರದಾದ್ಯಂತ ವಿವಿಧ ಕಾಮಗಾರಿ ನಡೆಸಲು ತಾವು ಸರಕಾರದಿಂದ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿರುವುದಾಗಿ ಶಾಸಕ ಬಿ.ಬಿ.ನಿಂಗಯ್ಯ ತಿಳಿಸಿದರು.

ಅವರು ಗುರುವಾರ ಪಟ್ಟಣದ ವಿವಿಧ ರಸ್ತೆಗಳ ಕಾಂಕ್ರೀಟಿಕರಣ, ವಿದ್ಯುತ್ ಕಂಬ ಮತ್ತು ತಂತಿ ಬದಲಿಸುವ ಕಾಮಗಾರಿ ಸ್ಥಳಕ್ಕೆ ಪಪಂ ಅಧ್ಯಕ್ಷರು ಮತ್ತು ಅಧಿಕಾರಿಗಳ ಜತೆ ತೆರಳಿ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು. 

ನಗರೋತ್ತಾನ ಯೋಜನೆಯಡಿ ಪ್ರಾರಂಭಿಕವಾಗಿ 5 ಕೋಟಿ, ನಂತರ 2 ಕೋಟಿ ಅನುಧಾನ ಬಿಡುಗಡೆಗೊಂಡಿದೆ. ಇದರಲ್ಲಿ 3.50 ಕೋಟಿ ರೂಗಳನ್ನು ರಸ್ತೆ ಕಾಂಕ್ರೀಟ್ ಕಾಮಗಾರಿ ಗಳಿಗೆ, 1.50 ಕೋಟಿ ಬಾಕ್ಸ್ ಚರಂಡಿ ಮತ್ತು ಇಂಟರ್ ಲಾಕ್ ಅಳವಡಿಕೆಗೆ, ಕಿತ್ತಲೆಗಂಡಿ ಹೇಮಾವತಿ ನದಿಯಿಂದ ಪಟ್ಟಣಕ್ಕೆ ಕುಡಿಯುವ ನೀರು ಪೋರೈಕೆಯ ನೂತನ ಎಕ್ಷಪ್ರಸ್ ಲೈನ್ ಕಾಮಗಾರಿಗೆ 90 ಲಕ್ಷ, ಗ್ರಂಥಾಲಯ ಮತ್ತಿತರ ಅಭಿವೃದ್ಧಿಗಾಗಿ ಉಳಿದ ಹಣ ಬಳಸಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಆದರ್ಶ ಗ್ರಾಮವಿಕಾಸ ಯೋಜನೆಯಡಿ ಮಳಲೂರು ಗ್ರಾಮದ ಪರಿಶಿಷ್ಟರ ಅಭಿವೃದ್ದಿಗೆ 1 ಕೋಟಿ, ಸುಂಕಸಾಲೆ ಮತ್ತು ಕಳಸಕ್ಕೆ ತಲಾ 1 ಕೋಟಿ, ಬಿ.ಹೊಸಳ್ಳಿ, ಬೆಳಗೋಡು, ಹಳೇಹಳ್ಳಿಗೆ ತಲಾ 2 ಕೋಟಿ ಅನುದಾನ ಬಿಡುಗಡೆಗೊಂಡಿದೆ. ಎಂಜಿಎಂ ಸರ್ಕಾರಿ ಆಸ್ಪತ್ರೆಯ ನೂತನ ಡಯಾಲಿಸಸ್ ಘಟಕ, ವಿದ್ಯುತ್ ಕಾಮಗಾರಿ ಮತ್ತು ನೂತನ ವಸತಿಗೃಹ ಕಟ್ಟಡಗಳಿಗೆ 5 ಕೋಟಿ ರೂ.ಗಳು ಬಿಡುಗಡೆಯಾಗಿವೆ ಎಂದು ಮಾಹಿತಿ ನೀಡಿದರು.ಆಣೂರು ಕಲ್ಲುಗುಂಡೆ ದೇವಸ್ಥಾನದ ಅಭಿವೃದ್ಧಿಗೆ 1.10 ಕೋಟಿ, ಕೊಟ್ಟಿಗೆಹಾರದ ಮಲೆನಾಡು ಸಕ್ರ್ಯೂಟ್ ಯೋಜನೆಗೆ 1.81 ಕೋಟಿ, ಬಂಕೇನಹಳ್ಳಿ ಸೇತುವೆ ದುರಸ್ಥಿಗೆ 20 ಲಕ್ಷ ರೂ.ಗಳ ಬಿಡುಗಡೆಯಾಗಿವೆ ಎಂದು ವಿವರ ನೀಡಿದರು.

ಈ ವೇಳೆ ಪಪಂ ಅಧ್ಯಕ್ಷೆ ರಮೀಜಾಬಿ, ಜಿಪಂ ಸದಸ್ಯ ನಿಖಿಲ್ ಚಕ್ರವರ್ತಿ, ಜೆಡಿಎಸ್ ಮುಖಂಡರಾದ ಬಿ.ಎಂ.ಬೈರೇಗೌಡ, ಎಸ್.ಎ.ವಿಜೇಂದ್ರ, ನೂರುಲ್ಲಾ, ಶಬ್ಬಿರ್‍ಅಹ್ಮದ್‍ಬೇಗ್, ಬಿ.ಎಂ.ಲೋಹಿತ್, ವಾಜೀದ್ ಹುಸೇನ್, ಸಚ್ಚಿನ್, ರತನ್‍ಶೆಟ್ಟಿ, ನಾಸೀರ್, ನೌಷದ್‍ ಅಹ್ಮದ್, ಬೆಟ್ಟಗೆರೆಮಂಜುನಾಥ್, ರಮೇಶ್, ಭಾರತೀಬೈಲ್ ಮಂಜುನಾಥ್, ಹೆಚ್.ಆಶೀಪ್ ಬಾಪುನಗರ, ಎ.ನದೀಮ್, ಆಶೀಫ್ ಪಿ.ಬಿ.ರಸ್ತೆ, ಪ.ಪಂ. ಮುಖ್ಯಾಧಿಕಾರಿ ಕಲಾವತಿ, ಪಿಡಬ್ಲ್ಯೂಡಿ ಜೆಇ ಜಯಸಿಂಗ್ ನಾಯಕ್ ಮತ್ತಿತರರಿದ್ದರು.

‘ಕೇಂದ್ರದ ಐಪಿಡಿಸಿ ಯೋಜನೆಯಡಿ 2.63 ಕೋಟಿ ಅನುಧಾನ ಬಿಡುಗಡೆಯಾಗಿದ್ದು, ಪಟ್ಟಣದ ಹಳೆಯ ವಿದ್ಯುತ್ ಲೈನ್‍ನ ಹಳೆ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸಿ ಹೊಸದಾಗಿ ಅಳವಡಿಸಲಾಗುತ್ತಿದೆ. ರಾಜ್ಯ ಸರ್ಕಾರದ ದೀನದಯಾಳ್ ಯೋಜನೆಯಡಿ 1.3 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಬಿಪಿಎಲ್ ಪಡಿತರ ಚೀಟಿ ಹೊಂದಿರುವ 1413 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಕೆಪಿಟಿಸಿಎಲ್ ಕಾಮಗಾರಿಗೆ 5 ಕೋಟಿ, ಕಳಸಕ್ಕೆ ಹೊಸ ವಿದ್ಯುತ್ ಲೈನ್ ಅಳವಡಿಸಲು 6.9ಕೋಟಿ, ಬಣಕಲ್‍ನಲ್ಲಿ ಹೊಸ ವಿದ್ಯುತ್ ಉಪಕೇಂದ್ರ ತೆರೆಯಲು 6.22 ಕೋಟಿ ಬಿಡುಗಡೆಯಾಗಿದೆ.

ಟೆಂಡರ್ ಪ್ರಕ್ರಿಯೆ ನಡೆದಿದೆ. ಜನ್ನಾಪುರ ಉಪವಿಭಾಗಕ್ಕೆ 4.50 ಹಾಗೂ 3.50 ಕೋಟಿ ಬಿಡುಗಡೆಗೊಂಡಿದ್ದರು ಜಾಗದ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿದೆ. ಜನ್ನಾಪುರದಲ್ಲಿ ವಿದ್ಯಾಪೀಠಕ್ಕಾಗಿ 15 ಎಕ್ರೆ ಜಾಗ ಮೀಸಲಿರಿಸಿದ್ದು ಅದರಲ್ಲಿ ಆರು ಎಕ್ರೆ ಜಾಗವನ್ನು ಶಾಸಕರು ವಿದ್ಯುತ್ ಕೇಂದ್ರಕ್ಕೆ ನೀಡುವುದಾಗಿ ಭರವಸೆ ನೀಡಿದ್ದಾರೆ ಮತ್ತು ವಿದ್ಯುತ್ ಎಕ್ಸ್ ಪ್ರೆಸ್ ಲೈನ್‍ಗೆ 25 ಕೋಟಿ ರೂ. ಬಿಡುಗಡೆಗೊಂಡಿದ್ದು ಟೆಂಡರ್ ಪ್ರಕ್ರಿಯೆ ಮುಂದುವರೆದಿದೆ’
-ರಾಜಶೇಖರ್, ಎಇಇ, ಮೆಸ್ಕಾಂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X