Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಮುಖಂಡರ ಪ್ರತ್ಯೇಕ...

ಕಾಂಗ್ರೆಸ್ ಮುಖಂಡರ ಪ್ರತ್ಯೇಕ ಪ್ರವಾಸಕ್ಕೆ ಎಚ್‌ಡಿಕೆ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ7 Dec 2017 6:58 PM IST
share
ಕಾಂಗ್ರೆಸ್ ಮುಖಂಡರ ಪ್ರತ್ಯೇಕ ಪ್ರವಾಸಕ್ಕೆ ಎಚ್‌ಡಿಕೆ ವ್ಯಂಗ್ಯ

ಬೆಂಗಳೂರು, ಡಿ.7: ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ, ಕಾಂಗ್ರೆಸ್ ಶಾಸಕರು ಇರದೆ ಇರೊ ಕ್ಷೇತ್ರಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಪ್ರವಾಸ, ಬಂಡಾಯದ ಬಿಸಿ ಇರುವ ಕ್ಷೇತ್ರಗಳಲ್ಲಿ ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಗುರುವಾರ ನಗರದ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಸೇರುವಂತೆ ಬಿಜೆಪಿ-ಕಾಂಗ್ರೆಸ್‌ನ ಯಾವ ಮುಖಂಡರಿಗೂ ನಾನು ಆಹ್ವಾನ ನೀಡಿಲ್ಲ. ನಾಡಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವವರು ಯಾರೇ ಆದರೂ ಕೈ ಜೋಡಿಸುತ್ತೇನೆ. ಆದರೆ, ನಾನಾಗಿ ಯಾರನ್ನೂ ಹುಡುಕಿಕೊಂಡು ಹೋಗಲ್ಲ ಎಂದರು.

ಅಧಿಕಾರಕ್ಕೆ ಬಂದ ನಾಲ್ಕೂವರೆ ವರ್ಷಗಳ ಬಳಿಕ ಮುಖ್ಯಮಂತ್ರಿ ಉತ್ತರ ಕರ್ನಾಟಕದ ಪ್ರವಾಸ ಪ್ರಾರಂಭಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಅವರಿಗೆ ಉತ್ತರ ಕರ್ನಾಟಕ ನೆನಪಾಗಿದೆ. ಭಟ್ಕಳದಲ್ಲಿ 1,500 ಕೋಟಿ ರೂ.ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಅಲ್ಲದೆ, ಇಂತಹ ಚುನಾವಣಾ ಪ್ರಚಾರಕ್ಕೆ ಜಿಲ್ಲಾಡಳಿತದಿಂದಲೆ ಕಾರ್ಯಕ್ರಮ ಆಯೋಜನೆಗೆ ನೂರಾರು ಕೋಟಿ ರೂ.ಟೆಂಡರ್ ಕರೆದಿದ್ದಾರೆ. ಇಡೀ ದೇಶದಲ್ಲಿ ಇಂತಹ ಘಟನೆ ನಡೆದಿಲ್ಲ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕುಡುಕರ ಜೇಬಿಗೆ ಪಿಕ್ ಪಾಕೆಟ್ ಮಾಡುತ್ತಿರುವ ಸರಕಾರವಿದ್ದು, 10 ರೂ.ಗಳ ಮದ್ಯದ ಮೇಲೆ ಮನ ಬಂದಂತೆ ತೆರಿಗೆ ಹಾಕಿ 70 ರೂ.ಗೆ ಮಾರಾಟ ಮಾಡುತ್ತಿದೆ. ಈ ಹಣದಲ್ಲಿ ಹಾಲು, ಅನ್ನ ಯೋಜನೆ ಜಾರಿಗೆ ತಂದಿದೆ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯ ಸರಕಾರ 1.28 ಲಕ್ಷ ಕೋಟಿ ರೂ.ಸಾಲ ಮಾಡಿದೆ ಎಂದು ಕುಮಾರಸ್ವಾಮಿ ದೂರಿದರು.

ಪಕ್ಷ ಬಿಟ್ಟು ಹೋಗುವವರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷದಿಂದ ಅಲ್ಪಸ್ವಲ್ಪ ಅನುಕೂಲ ಪಡೆದವರು ಪಕ್ಷಕ್ಕೆ ನಿಯತ್ತಾಗಿರಬೇಕು. ಪಕ್ಷಕ್ಕೆ ಹಾನಿ ಮಾಡಿ ಹೋಗುವವರು ಬೇಕಾಗಿಲ್ಲ. ‘ಡಬಲ್ ಗೇಮ್’ ರಾಜಕಾರಣ ಮಾಡುವುದನ್ನು ನಾನು ಸಹಿಸುವುದಿಲ್ಲ ಎಂದು ಅವರು ಹೇಳಿದರು.

ತಮ್ಮ ಅಧಿಕಾರಾವಧಿಯಲ್ಲಿ ಸೀರೆ, ಸೈಕಲ್ ಕೊಟ್ಟಿದ್ದನ್ನು ಯಡಿಯೂರಪ್ಪ ಹೇಳಿಕೊಂಡು ಓಡಾಡುತ್ತಿರುವುದನ್ನು, ಸಿದ್ದರಾಮಯ್ಯ ತಮಾಷೆಯಾಗಿ ತೋರಿಸುತ್ತಾರೆ. ಆದರೆ, ಈಗ ಅವರು ಮಾಡುತ್ತಿರುವುದು ಇದನ್ನೆ. ಅನ್ನ-ಹಾಲು ಎಂದು ಪದೇ ಪದೇ ಹೇಳಿಕೊಂಡು ಕುಣಿದಾಡುತ್ತಿಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಶಾಸಕರೆ ಇಲ್ಲದ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮುಖ್ಯಮಂತ್ರಿ ಘೋಷಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯ ಕಾರ್ಯಕ್ರಮಕ್ಕೆ ಸರಕಾರದ ವತಿಯಿಂದ ಟೆಂಡರ್ ಕರೆದಿರೋ ಸಂಪ್ರದಾಯ ಇದೇ ಮೊದಲು. ರಾಜ್ಯದ ಜನತೆಯ ತೆರಿಗೆ ಹಣವನ್ನು ಕಾರ್ಯಕ್ರಮದ ಹೆಸರಿನಲ್ಲಿ ಪೋಲು ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ವರ್ಷಕ್ಕೆ ಐನೂರು ಕೋಟಿ ರೂ.ಜಾಹೀರಾತುಗಳಿಗೆ ಖರ್ಚು ಮಾಡಲಾಗುತ್ತಿದೆ. ಈ ರೀತಿ ಜಾಹೀರಾತಿಗೆ ಹಣ ಖರ್ಚು ಮಾಡುವ ಅವಶ್ಯಕತೆ ಇದೆಯಾ? ಜಾಹೀರಾತುಗಳನ್ನು ನೀಡಿ ಪತ್ರಿಕೆಗಳನ್ನು ಉಳಿಸುವ ಕೆಲಸವನ್ನು ಮಾಡುತ್ತಿದ್ದಾರಾ? ಇವತ್ತಿನ ದಿನ ಪತ್ರಿಕೆಗಳನ್ನು ನಡೆಸಲು ಕಷ್ಟವಿದೆ. ಆದುದರಿಂದ, ಅವರನ್ನು ಉಳಿಸುತ್ತಿರಬಹುದು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X