Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೈಕಲ್ ಸೇವೆ ನೀಡಲು ಮುಂದಾದ ಮೊಬಿಸಿ ಎಂಬ...

ಸೈಕಲ್ ಸೇವೆ ನೀಡಲು ಮುಂದಾದ ಮೊಬಿಸಿ ಎಂಬ ಖಾಸಗಿ ಕಂಪೆನಿ

ವಾರ್ತಾಭಾರತಿವಾರ್ತಾಭಾರತಿ7 Dec 2017 9:49 PM IST
share

ಬೆಂಗಳೂರು, ಡಿ.7: ಮಾಲಿನ್ಯ ತಡೆಗೆ ಬೆಂಗಳೂರಿನಲ್ಲಿ ಸೈಕಲ್‌ಗಳನ್ನು ಪರಿಚಯಿಸಲು ರಾಜ್ಯ ಸರಕಾರ ಮುಂದಾಗಿದೆ. ಆದರೆ, ಖಾಸಗಿ ಕಂಪೆನಿಯೊಂದು ಇದಕ್ಕೂ ಮೊದಲೇ ನಗರದ ರಸ್ತೆಗಳಿಗೆ ಸೈಕಲ್ ಇಳಿಸಲು ಮುಂದಾಗಿದೆ.

ರಸ್ತೆಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪರಿಸರದಲ್ಲಿನ ಕಲ್ಮಶವನ್ನು ತಪ್ಪಿಸಲು ಆಕಾಶ್ ಗುಪ್ತಾ ಮತ್ತು ರಾಶಿ ಅಗರ್ವಾಲ್ ಎಂಬುವವರು ಮೊಬಿಸಿ ಎಂಬ ಕಂಪೆನಿ ಆರಂಭ ಮಾಡಿದ್ದು, ದೇಶದ ಮೊಟ್ಟ ಮೊದಲ ಡಾಕ್ಲೆಸ್ ಬೈಸಿಕಲ್ ಹಂಚಿಕೆ ಮೂಲಕ ಸೈಕಲ್ ಸೇವೆ ನೀಡಲಿದೆ.

ಈ ಕಂಪನಿಯು ಗುರಗಾಂವ್ ಮೂಲದ ಗ್ರೀನ್ ಟೆಕ್ ಕಂಪೆನಿಯಾಗಿದ್ದು, ಭಾರತದಲ್ಲಿ ವಿಶಿಷ್ಟವಾದ ಮತ್ತು ಇ-ಮಾದರಿಯ ಮೊದಲ ‘ಉಬರ್ ಫಾರ್ ಸೈಕಲ್ಸ್’ ಮಾದರಿಯನ್ನು ಬಳಕೆದಾರರಿಗೆ ಪ್ರಸ್ತುತಪಡಿಸುತ್ತದೆ. ಡಾಕ್ಲೆಸ್ ಬೈಸಿಕಲ್ ಹಂಚಿಕೆ ಅಪ್ಲಿಕೇಶನ್, ಮೊಬಿಸಿ ಈಗ ಆಂಡ್ರಾಯ್ಡಾ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದ್ದು, ಇದರ ಪ್ರಾಯೋಗಿಕ ಬಳಕೆ ಆರಂಭವಾಗಿದೆ. ಈ ಅಪ್ಲಿಕೇಶನ್ ಮುಂದಿನ ಎರಡು ದಿನಗಳೊಳಗೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಾಗುತ್ತದೆ.

ಫುಲ್ ಹೈಟೆಕ್ ಮೊಬಿಸಿ ಸ್ಮಾರ್ಟ್ ಬೈಕ್‌ಗಳನ್ನು ಐಒಟಿ ಬೀಗಗಳ ಮತ್ತು ಜಿಪಿಎಸ್ ಅಳವಡಿಕೆ ಮೂಲಕ ಜಾರಿ ಮಾಡುತ್ತಿದ್ದು, ನಿಲುಗಡೆ ಅಥವಾ ನಿಲ್ದಾಣಗಳಿಲ್ಲದೆ ಇವುಗಳನ್ನು ಬಳಕೆ ಮಾಡಬಹುದಾಗಿದೆ. ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ, ಸಮೀಪದ ಸೈಕಲ್ ಇರುವ ಸ್ಥಳ ಹುಡುಕಿ ಅದಕ್ಕೆ ನೀಡುವ ಕ್ಯೂಆರ್ ಕೋಡ್ ಬಳಸಿಬೀಗ ತೆಗೆದು ಉಪಯೋಗಿಸಬಹುದಾಗಿದೆ.

5 ಸಾವಿರ ಸೈಕಲ್: ನಗರದಲ್ಲಿ 5 ಸಾವಿರ ಬೈಸಿಕಲ್‌ಗಳೊಂದಿಗೆ ಪ್ರಾರಂಭ ಮಾಡಲಾಗುತ್ತಿದ್ದು, ಮುಂದಿನ 6 ತಿಂಗಳಲ್ಲಿ 50 ಸಾವಿರಕ್ಕೆ ಏರಿಕೆ ಮಾಡುವ ನಿರೀಕ್ಷೆಯಿದೆ ಎಂದು ಗ್ರೀನ್ ಟೆಕ್ ಕಂಪೆನಿ ಸಹ ಸಂಸ್ಥಾಪಕ ಆಕಾಶ ಗುಪ್ತಾ ಮಾಹಿತಿ ನೀಡಿದ್ದಾರೆ.

ಮಾಸಿಕ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ತಿಂಗಳಿಗೆ 99 ರೂ.ಗಳು ಪಾವತಿಸುವುದರ ಮೂಲಕ ಪ್ರತಿ ದಿನ 2 ಗಂಟೆಗಳ ಕಾಲ ಸೈಕಲ್ ಬಳಸಬಹುದು. ಹೆಚ್ಚುವರಿಯಾಗಿ ಆಧಾರ್ ಕಾರ್ಡ್, ಗುರುತು ನೀಡಬೇಕಾಗಿರುವುದಲ್ಲದೆ, ಭದ್ರತಾ ಠೇವಣಿಯಾಗಿ 999 ರೂ.ಗಳು ಇಡಬೇಕು. ವಿದ್ಯಾರ್ಥಿಗಳು ಕಾಲೇಜಿನ ಗುರುತು ಪತ್ರ ನೀಡಿ 499 ರೂ.ಗಳು ಭದ್ರತಾ ಠೇವಣಿ ಇಡಬಹುದಾಗಿರುತ್ತದೆ ಎಂದು ಆಕಾಶ ಗುಪ್ತಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X