Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಟ್‌ಆಫ್ ಲಿವಿಂಗ್ ಕಾರ್ಯಕ್ರಮದಿಂದ...

ಆರ್ಟ್‌ಆಫ್ ಲಿವಿಂಗ್ ಕಾರ್ಯಕ್ರಮದಿಂದ ಯಮುನೆಯ ದಡಕ್ಕೆ ಹಾನಿ

ವಾರ್ತಾಭಾರತಿವಾರ್ತಾಭಾರತಿ7 Dec 2017 11:02 PM IST
share
ಆರ್ಟ್‌ಆಫ್ ಲಿವಿಂಗ್ ಕಾರ್ಯಕ್ರಮದಿಂದ ಯಮುನೆಯ ದಡಕ್ಕೆ ಹಾನಿ

ಹೊಸದಿಲ್ಲಿ, ಡಿ.7: ಕಳೆದ ವರ್ಷ ಶ್ರೀ ರವಿಶಂಕರ್ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಆಯೋಜಿಸಿದ ವಿಶ್ವ ಸಾಂಸ್ಕೃತಿಕ ಉತ್ಸವದಿಂದಾಗಿ ಯಮುನಾ ನದಿಯ ತಪ್ಪಲಿನಲ್ಲಿರುವ ಪ್ರವಾಹಪ್ರದೇಶಕ್ಕೆ ಅಪಾರ ಹಾನಿಯಾಗಿದೆಯೆಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‌ಜಿಟಿ) ಗುರುವಾರ ತಿಳಿಸಿದೆ.

 ಆರ್ಟ್ ಆಫ್ ಲಿವಿಂಗ್‌ಗೆ ಈ ಮೊದಲು ವಿಧಿಸಲಾಗಿದ್ದ 5ಕೋಟಿ ರೂ. ದಂಡದ ಮೊತ್ತವನ್ನು ಅದು ಪಾವತಿಸಿದ ಬಳಿಕ ದಿಲ್ಲಿ ಅಭಿವೃದ್ದಿ ಪ್ರಾಧಿಕಾರವು, ಯುಮನೆಯ ಪ್ರವಾಹಪ್ರದೇಶದ ಪುನರುಜ್ಜೀವನ ಕಾಮಗಾರಿಯನ್ನು ನಡೆಸಬೇಕೆಂದು ನ್ಯಾಯಾಧೀಕರಣವು ತಿಳಿಸಿದೆ.

  ಯಮುನೆಯ ತಪ್ಪಲಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಪರಿಸರಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಹಸಿರು ನ್ಯಾಯಾಧೀಕರಣವು, ಆರ್ಟ್ ಆಫ್‌ಲಿವಿಂಗ್‌ಗೆ 5 ಕೋಟಿ ರೂ. ದಂಡವನ್ನು ವಿಧಿಸಿತ್ತು. ಆದಾಗ್ಯೂ,ಈ ದಂಡದ ಮೊತ್ತವು ಇನ್ನೂ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಪಾವತಿಸಲಾಗಿಲ್ಲವೆಂದು ತಿಳಿದುಬಂದಿದೆ.

ಪರಿಸರವನ್ನು ಕಾಪಾಡುವ ತನ್ನ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸಲು ಡಿಡಿಎ ವಿಫಲವಾಗಿದೆ. ಯುಮುನಾ ಪ್ರವಾಹಪ್ರದೇಶಕ್ಕೆ ಉಂಟಾಗಿರುವ ಹಾನಿಯನ್ನು ಅದು ಅಂದಾಜಿಸಿ,ಪ್ರದೇಶದ ಪುನರುಜ್ಜೀವನ ಕಾಮಗಾರಿಯನ್ನು ಕೈಗೊಳ್ಳುವಂತೆ ಅದು ತಿಳಿಸಿದೆ.

 ಯಮುನೆಯ ಪ್ರವಾಹಪ್ರದೇಶದ ಪುನರುಜ್ಜೀವನಕ್ಕೆ 10 ವರ್ಷಗಳೇ ಬೇಕಾಗಲಿದ್ದು, 13.29 ಕೋಟಿ ರೂ. ವೆಚ್ಚವಾಗಲಿದೆಯೆಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಶಶಿ ಶೇಖರ್ ನೇತೃತ್ವದ ತಜ್ಞರ ಸಮಿತಿ ಕಳೆದ ಎಪ್ರಿಲ್ ನಲ್ಲಿ ಸಲ್ಲಿಸಿದ ವರದಿಯಲ್ಲಿ ತಿಳಿಸಿತ್ತು.

 ಮೂರು ದಿನಗಳ ಕಾಲ ನಡೆದ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಿಂದಾಗಿ ಯಮುನಾ ಪ್ರವಾಹಪ್ರದೇಶವು ಮೃಗ, ಪಕ್ಷಿ ಹಾಗೂ ಕೀಟಗಳು ಮತ್ತು ಮಣ್ಣಿನಲ್ಲಿ ವಾಸಿಸುವ ಜೀವರಾಶಿಗೆ ಆಶ್ರಯದಾಣವಾದ ಮರಗಳು, ಪೊದೆಗಳು,ಎತ್ತರದ ಹುಲ್ಲುಗಳು, ಜಲಸಸ್ಯಗಳಂತಹ ಪ್ರಾಕೃತಿಕ ಸಸ್ಯಸಂಕುಲವನ್ನು ಕಳೆದುಕೊಂಡಿದೆಯೆಂದು  ಸಮಿತಿಯ 47 ಪುಟಗಳ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X