Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರ ಆರೋಗ್ಯ, ಸುರಕ್ಷತೆಯ ಬಗ್ಗೆ ಹೆಚ್ಚಿನ...

ಜನರ ಆರೋಗ್ಯ, ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ -ಎಸ್. ಸಸಿಕಾಂತ್ ಸೆಂಥಿಲ್‌

ವಾರ್ತಾಭಾರತಿವಾರ್ತಾಭಾರತಿ7 Dec 2017 11:16 PM IST
share
ಜನರ ಆರೋಗ್ಯ, ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ -ಎಸ್. ಸಸಿಕಾಂತ್ ಸೆಂಥಿಲ್‌

ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಆರೋಗ್ಯ ಮತ್ತು ಸುರಕ್ಷತೆಯ ಪೂರಕವಾದ ವಿಷಯಗಳ ಬಗ್ಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ನಗರದ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳೂರು ನಗರವನ್ನು ಸ್ಮಾರ್ಟ್ ಸಿಟಿಯಾಗಿ ಪರಿವರ್ತನೆ ಮಾಡುವ ಸಂದರ್ಭದಲ್ಲಿ ಪ್ರಾಚೀನ ಕುರುಹುಗಳು ಹಾಗೂ ನೈಸರ್ಗಿಕ ಸೌಂದರ್ಯಕ್ಕೆ ಹಾನಿಯಾಗದಂತೆ ನಗರವನ್ನು ಅಭಿವೃದ್ಧಿ ಪಡಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು .ಈ ಯೋಜನೆಯನ್ನು ಕಾರ್ಯಗತಗೊಳಿಸುವ ಹಂತದಲ್ಲಿ ನಾಗರಿಕರ ಅಭಿಪ್ರಾಯವನ್ನು ಪಡೆಯಲು ಸಮಾಲೋಚನೆಗಳು ವಿವಿಧ ಹಂತಗಳಲ್ಲಿ ನಡೆಯಬೇಕಾಗುತ್ತದೆ, ನಗರಾಭಿವೃದ್ಧಿಯ ಬಗ್ಗೆ ನಾಗರಿಕರೊಂದಿಗಿನ ಸಮಾಲೋಚನೆ ಮುಖ್ಯ ಎಂದು ತಿಳಿಸಿದ್ದಾರೆ.

ತ್ಯಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಅಗತ್ಯ:-ನಗರದಲ್ಲಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಮುಂದಿನ ಹಂತದಲ್ಲಿ ಗಂಭೀರ ಸಮಸ್ಯೆಯಾಗಬಹುದು ಈ ಹಿನ್ನೆಲೆಯಲ್ಲಿ ಕಸ ವಿಂಗಡಣೆ, ಮರು ಬಳಕೆ, ಹಸಿ ಸಗಳನ್ನು ಸ್ಥಳೀಯವಾಗಿ ಸಂಸ್ಕರಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಈ ರೀತಿಯ ಜಾಗೃತಿ ಬೆಳೆಸಿದಾಗ ಕಸ ಸಂಗ್ರಹದ ಪ್ರಮಾಣ ಕಡಿಮೆಯಾಗ ತೊಡಗುತ್ತದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಸೂಕ್ತಕ್ರಮಗಳು ಮತ್ತು ಸಾರ್ವಜನಿಕ ವಲಯದಲ್ಲಿ ಜಾಗೃತಿ ಮುಡಿಸಬೇಕಾಗಿದೆ.ತುಂಬೆಯಲ್ಲಿ ನೀರು ಸಂಗ್ರಹದ ಪ್ರಮಾಣವನ್ನು ಹೆಚ್ಚಿಸಲಾಗಿದೆ.ಜೊತೆಗೆ ಜಿಲ್ಲೆಯಲ್ಲಿ ನೀರಿನ ಮೂಲಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸೆಂಥಿಲ್ ತಿಳಿಸಿದ್ದಾರೆ.

ನಗರ ಯೋಜನೆಯಲ್ಲಿನ ನ್ಯೂನತೆಯ ಫಲವಾಗಿ ಟ್ರಾಫಿಕ್ ಸಮಸ್ಯೆ:-ಮಂಗಳೂರು ನಗರದಲ್ಲಿ ಅಥವಾ ಇನ್ನಾವುದೇ ನಗರದಲ್ಲಾಗಲಿ ವಾಹನದಟ್ಟಣೆಯ ಸಮಸ್ಯೆ ಉಂಟಾಗಲು ಮುಖ್ಯ ಕಾರಣ ನಗರ ಯೋಜನೆಯಲ್ಲಿನ ನ್ಯೂನತೆಯಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರು ನಿರ್ವಹಣೆ,ಟ್ರಾಫಿಕ್ ಸಮಸ್ಯೆ,ಪ್ರವಾಸೋದ್ಯಮ ಅಭಿವೃದ್ಧಿ,ನಗರದ ಮೂಲ ಭೂತ ಸೌಕರ್ಯ ಅಭಿವೃದ್ಧಿ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಕುರಿತು ಕೆಸಿಸಿಐ ಅಧ್ಯಕ್ಷೆ ವಾತಿಕ ಪೈ ತಿಳಿಸಿದರು.ಜಿಲ್ಲೆಯ ಜನರು ನೆನಪಿಟ್ಟುಕೊಳ್ಳುವ ಕೆಲಸ ಮಾಡಿದ ಜಿಲ್ಲಾಧಿಕಾರಿಗಳಲ್ಲಿ ಎಸ್.ಕೆ.ದಾಸ್,ಭರತ್ ಲಾಲ್ ಮೀನಾ,ಪೊನ್ನುರಾಜ್,ಇಬ್ರಾಹೀಂ ಪ್ರಮುಖರು ಇವರ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಉತ್ತಮ ಕೆಲಸ ನಡೆದಿದೆ ಎಂದು ಕೆಸಿಸಿಐನ ಮಾಜಿ ಅಧ್ಯಕ್ಷ ಸುಬ್ಬಯ್ಯ ಶೆಟ್ಟಿ ತಿಳಿಸಿದ್ದಾರೆ.

ರಸ್ತೆ ಅಗಲ ಗೊಳಿಸುವ ಬದಲು ಈಗ ಇರುವ ರಸ್ತೆಯನ್ನು ಸಮರ್ಪಕವಾಗಿ ಬಳಸಲು ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ.ಜನರ ಭೂಮಿಯನ್ನು ಸರಕಾರ ಸ್ವಾಧೀನ ಪಡಿಸುವ ಸಂದರ್ಭದಲ್ಲಿ ಸೂಕ್ತ ಪರಿಹಾರ ನೀಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ಪ್ರತಿನಿಧಿಯೊಬ್ಬರು ಆಗ್ರಹಿಸಿದರು.

ಸಭೆಯಲ್ಲಿ ಕೆಸಿಸಿಐನ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸ್ವಾಗತಿಸಿದರು. ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X