Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ದಿನವೇ ಮುಂಬೈಗೆ ಮೂಗುದಾರ

ಮೊದಲ ದಿನವೇ ಮುಂಬೈಗೆ ಮೂಗುದಾರ

ರಣಜಿ ಕ್ವಾರ್ಟರ್ ಫೈನಲ್:ವಿನಯ್ ಅಮೋಘ ಬೌಲಿಂಗ್

ವಾರ್ತಾಭಾರತಿವಾರ್ತಾಭಾರತಿ7 Dec 2017 11:28 PM IST
share
ಮೊದಲ ದಿನವೇ ಮುಂಬೈಗೆ ಮೂಗುದಾರ

ನಾಗ್ಪುರ, ಡಿ.7: ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿನಯ್‌ಕುಮಾರ್ ಅಮೋಘ ಬೌಲಿಂಗ್(6-34)ದಾಳಿಗೆ ತತ್ತರಿಸಿದ 41 ಬಾರಿಯ ರಣಜಿ ಚಾಂಪಿಯನ್ ಮುಂಬೈ ತಂಡ ಮೊದಲ ಇನಿಂಗ್ಸ್ ನಲ್ಲಿ ಕೇವಲ 36 ಓವರ್‌ಗಳಲ್ಲಿ 173 ರನ್ ಗಳಿಸುವಷ್ಟರಲ್ಲಿ ಆಲೌಟಾಗಿದೆ.

 ಗುರುವಾರ ಮೊದಲ ದಿನದಾಟದ ಅಂತ್ಯದಲ್ಲಿ ಕರ್ನಾಟಕ ಪ್ರಥಮ ಇನಿಂಗ್ಸ್‌ನಲ್ಲಿ 1 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದೆ. ಮಾಯಾಂಕ್ ಅಗರವಾಲ್(ಅಜೇಯ 62) ಹಾಗೂ ಕೆ.ಅಬ್ಬಾಸ್(ಅಜೇಯ 12) ಕ್ರೀಸ್ ಕಾಯ್ದುಕೊಂಡಿದ್ದಾರೆ. 40 ರನ್ ಗಳಿಸಿ ಔಟಾಗಿರುವ ಆರ್.ಸಮರ್ಥ್ ಅವರು ಅಗರವಾಲ್‌ರೊಂದಿಗೆ ಮೊದಲ ವಿಕೆಟ್‌ಗೆ 83 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭ ನೀಡಿದ್ದಾರೆ.

ಮುಂಬೈ 173: ಇದಕ್ಕೆ ಮೊದಲು ವಿದರ್ಭ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ ಟಾಸ್ ಜಯಿಸಿದ ಕರ್ನಾಟಕ ನಾಯಕ ವಿನಯ್‌ಕುಮಾರ್ ಮೊದಲು ಬೌಲಿಂಗ್ ಆಯ್ದುಕೊಂಡರು.

ವಿನಯ್ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಮುಂಬೈನ ಕಿರಿಯ ಆರಂಭಿಕ ಆಟಗಾರ ಪೃಥ್ವಿ ಶಾಗೆ(2)ಪೆವಿಲಿಯನ್ ಹಾದಿ ತೋರಿಸಿದರು. ಮೂರನೇ ಓವರ್‌ನ ಮೊದಲ ಎಸೆತದಲ್ಲಿ ಜೈ ಬಿಶ್ತ್(1) ಹಾಗೂ ಅದೇ ಓವರ್‌ನ 2ನೇ ಎಸೆತದಲ್ಲಿ ಅಗ್ರ ಕ್ರಮಾಂಕದಲ್ಲಿ ಭಡ್ತಿ ಪಡೆದು ಆಡಿದ ಬೌಲರ್ ಆಕಾಶ್ ಪಾರ್ಕರ್ ವಿಕೆಟ್ ಉರುಳಿಸಿದ ವಿನಯ್ ವೃತ್ತಿಜೀವನದಲ್ಲಿ 2ನೇ ಬಾರಿ ಹ್ಯಾಟ್ರಿಕ್ ಪೂರೈಸಿದರು. ವಿನಯ್ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಮುಂಬೈನ ಕಿರಿಯ ಆರಂಭಿಕ ಆಟಗಾರ ಪೃಥ್ವಿ ಶಾಗೆ(2)ಪೆವಿಲಿಯನ್ ಹಾದಿ ತೋರಿಸಿದರು. ಮೂರನೇ ಓವರ್‌ನ ಮೊದಲ ಎಸೆತದಲ್ಲಿ ಜೈ ಬಿಶ್ತ್(1) ಹಾಗೂ ಅದೇ ಓವರ್‌ನ 2ನೇ ಎಸೆತದಲ್ಲಿ ಅಗ್ರ ಕ್ರಮಾಂಕದಲ್ಲಿ ಭಡ್ತಿ ಪಡೆದು ಆಡಿದ ಬೌಲರ್ ಆಕಾಶ್ ಪಾರ್ಕರ್ ವಿಕೆಟ್ ಉರುಳಿಸಿದ ವಿನಯ್ ವೃತ್ತಿಜೀವನದಲ್ಲಿ 2ನೇ ಬಾರಿ ಹ್ಯಾಟ್ರಿಕ್ ಪೂರೈಸಿದರು.

 ವಿನಯ್ ರಣಜಿ ಟ್ರೋಫಿಯ ಕ್ವಾರ್ಟರ್‌ಫೈನಲ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಆರನೇ ಬೌಲರ್ ಹಾಗೂ ಮೊದಲ ನಾಯಕನೆಂಬ ಕೀರ್ತಿಗೆ ಭಾಜನರಾಗಿದ್ದಾರೆ. 1993-94ರ ಋತುವಿನಲ್ಲಿ ದಿಲ್ಲಿ ವಿರುದ್ಧ ಬಂಗಾಳದ ಎಸ್.ಸೇನ್ ಕೊನೆಯ ಬಾರಿ ಈ ಸಾಧನೆ ಮಾಡಿದ್ದರು.

ವಿನಯ್ ಮುಂಬೈ ವಿರುದ್ಧ ಹ್ಯಾಟ್ರಿಕ್ ಸಾಧಿಸಿರುವ ಮೂರನೇ ಬೌಲರ್ ಆಗಿದ್ದಾರೆ. 1972-73ರಲ್ಲಿ ರಣಜಿ ಫೈನಲ್‌ನಲ್ಲಿ ತಮಿಳುನಾಡಿನ ಕಲ್ಯಾಣಸುಂದರಮ್ ಹಾಗೂ 1981-82ರಲ್ಲಿ ಕರ್ನಾಟಕದ ರಘುರಾಮ್ ಭಟ್ ಈ ಸಾಧನೆ ಮಾಡಿದ್ದರು.

ಹ್ಯಾಟ್ರಿಕ್ ಪೂರೈಸಿದ ಬಳಿಕವೂ ತನ್ನ ಪ್ರಹಾರ ಮುಂದುವರಿಸಿದ ವಿನಯ್ ಅವರು ಸಿದ್ದೇಶ್ ಲಾಡ್(8), ಉಪ ನಾಯಕ ಸೂರ್ಯ ಕುಮಾರ್ ಯಾದವ್(14) ಹಾಗೂ ನಾಯಕ ಆದಿತ್ಯ ತಾರೆ(4) ಅವರನ್ನು ಅಲ್ಪ ಮೊತ್ತಕ್ಕೆ ಔಟ್ ಮಾಡಿ ಮುಂಬೈ ಸಂಕಷ್ಟ ಹೆಚ್ಚಿಸಿದರು.

49 ರನ್‌ಗೆ 6 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಮುಂಬೈ 103 ರನ್‌ಗೆ 9 ವಿಕೆಟ್ ಕಳೆದುಕೊಂಡಿತು. ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದ ವೇಗದ ಬೌಲರ್ ಧವಳ್ ಕುಲಕರ್ಣಿ(75 ರನ್, 132 ಎಸೆತ,9 ಬೌಂಡರಿ, 2 ಸಿಕ್ಸರ್) ಶಿವಂ ಮಲ್ಹೋತ್ರಾ(7)ಅವರೊಂದಿಗೆ ಕೊನೆಯ ವಿಕೆಟ್‌ನಲ್ಲಿ 70 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು 173 ರನ್‌ಗೆ ತಲುಪಿಸಿದರು. 41 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿದ ಮಲ್ಹೋತ್ರಾಗೆ ಅರವಿಂದ್ ಪೆವಿಲಿಯನ್ ಹಾದಿ ತೋರಿಸಿದರು. ಕುಲಕರ್ಣಿ ವಿಕೆಟ್ ಕಬಳಿಸಿದ ಅರವಿಂದ್ ಮುಂಬೈ ಮೊದಲ ಇನಿಂಗ್ಸ್ ಗೆ ತೆರೆ ಎಳೆದರು.

   ಮುಂಬೈ ಪರ ಅಖಿಲ್ ಹೆರ್ವಾಡ್ಕರ್(32) ಅಗ್ರ ಕ್ರಮಾಂಕದಲ್ಲಿ ಎರಡಂಕೆ ದಾಖಲಿಸಿದರು. ಕರ್ನಾಟಕ ಬೌಲರ್‌ಗಳು 22 ಎಕ್ಸ್‌ಟ್ರಾ ರನ್ ನೀಡಿ ಮುಂಬೈ ಸ್ಕೋರ್ ಹೆಚ್ಚಲು ಕಾರಣರಾದರು. ಶ್ರೀನಾಥ್ ಅರವಿಂದ್(2-45), ಅಭಿಮನ್ಯು ಮಿಥುನ್(1-31) ಹಾಗೂ ಕೆ.ಗೌತಮ್(1-31) ವಿನಯ್‌ಗೆ ಸಮರ್ಥ ಸಾಥ್ ನೀಡಿದರು.

ಸಂಕ್ಷಿಪ್ತ ಸ್ಕೋರ್

►ಮುಂಬೈ ಮೊದಲ ಇನಿಂಗ್ಸ್: 173/10

(ಧವಳ್ ಕುಲಕರ್ಣಿ 75, ಅಖಿಲ್ ಹೆರ್ವಾಡ್ಕರ್ 32, ಸೂರ್ಯಕುಮಾರ್ ಯಾದವ್ 14, ವಿನಯ್‌ಕುಮಾರ್ 6-34, ಎಸ್.ಅರವಿಂದ್ 2-45)

►ಕರ್ನಾಟಕ ಮೊದಲ ಇನಿಂಗ್ಸ್: 115/1

(ಮಾಯಾಂಕ್ ಅಗರವಾಲ್ ಅಜೇಯ 62, ಆರ್.ಸಮರ್ಥ್ 40, ಕೆ.ಅಬ್ಬಾಸ್ ಅಜೇಯ 12, ಶಿವಂ ದುಬೆ 1-11)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X