Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಬೇರೆ ಯಾವ ದೇಶದಲ್ಲಿ ಕಲಾವಿದರಿಗೆ...

"ಬೇರೆ ಯಾವ ದೇಶದಲ್ಲಿ ಕಲಾವಿದರಿಗೆ ಬಹಿರಂಗ ಬೆದರಿಕೆಯೊಡ್ಡಲಾಗುತ್ತಿದೆ ?"

ಪದ್ಮಾವತಿ ವಿವಾದದ ಬಗ್ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ8 Dec 2017 12:07 PM IST
share
ಬೇರೆ ಯಾವ ದೇಶದಲ್ಲಿ ಕಲಾವಿದರಿಗೆ ಬಹಿರಂಗ ಬೆದರಿಕೆಯೊಡ್ಡಲಾಗುತ್ತಿದೆ ?

ಮುಂಬೈ,ಡಿ.8 : 'ಪದ್ಮಾವತಿ' ಚಿತ್ರ ಬಿಡುಗಡೆಗೊಳ್ಳಬಾರದೆಂಬ ಉದ್ದೇಶದಿಂದ ಅದರ ನಿರ್ದೇಶಕರಿಗೆ ಹಾಗೂ ನಟರಿಗೆ ಒಡ್ಡಲಾಗುತ್ತಿರುವ ಬಹಿರಂಗ ಬೆದರಿಕೆಗಳ ಬಗ್ಗೆ ತನ್ನ ತೀವ್ರ ಅಸಮಾಧಾನ ವ್ಯಕ್ತಪಡಿಸಿದರುವ ಬಾಂಬೆ ಹೈಕೋರ್ಟ್ "ಬೇರೆ ಯಾವ ದೇಶದಲ್ಲಿ ಕಲಾವಿದರಿಗೆ ಈ ರೀತಿಯ ಬೆದರಿಕೆಗಳನ್ನೊಡ್ಡಲಾಗುತ್ತಿರುವುದನ್ನುನೀವು ನೋಡಿದ್ದೀರಿ? ಸಿನೆಮಾವೊಂದನ್ನು ತಯಾರಿಸಲು ಅವಿರತ ಶ್ರಮ ಪಟ್ಟ ನಂತರ ಅದನ್ನು ಬಿಡುಗಡೆಗೊಳಿಸಲು ಈ ದೇಶದಲ್ಲಿ ಏಕೆ ಸಾಧ್ಯವಾಗುತ್ತಿಲ್ಲ? ನಮ್ಮ ದೇಶ ಯಾವ ಹಂತಕ್ಕೆ ಬಂದು ಮುಟ್ಟಿದೆ ?'' ಎಂದು ಜಸ್ಟಿಸ್ ಎಸ್ ಸಿ ಧರ್ಮಾಧಿಕಾರಿ ಹಾಗೂ ಭಾರತಿ ದಂಗ್ರೆಯವರನ್ನೊಳಗೊಂಡ ಪೀಠ ಪ್ರಶ್ನಿಸಿದೆ.

ಈ ಬಹಿರಂಗ ಬೆದರಿಕೆಗಳ ಬಗ್ಗೆ ಟಿವಿಯಲ್ಲಿ ಕೂಡ ಹೇಳಲಾಗುತ್ತಿದೆ ಹಾಗೂ ಕಲಾವಿದರನ್ನು ಕೊಲ್ಲಲು  ನಗದು ಬಹುಮಾನ ಘೋಷಿಸುವಲ್ಲಿ ಕೆಲವರು ಹೆಮ್ಮೆ ಪಡುತ್ತಿದ್ದಾರೆ. ಕೆಲವು ಮುಖ್ಯಮಂತ್ರಿಗಳೂ ತಮ್ಮ ರಾಜ್ಯದಲ್ಲಿ ಈ ಚಿತ್ರವನ್ನು ಬಿಡುಗಡೆಗೊಳಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದು ಇನ್ನೊಂದು ವಿಧದ ಸೆನ್ಸಾರ್. ಆರ್ಥಿಕವಾಗಿ ಸಬಲರಾಗಿರುವ ಜನರಿಗೇ ಈ ರೀತಿಯ ಸಮಸ್ಯೆ ಎದುರಾದರೆ ಬಡವರ ಗತಿಯೇನು ?,'' ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ವಿಚಾರವಾದಿಗಳಾದ ನರೇಂದ್ರ ಧಾಬೋಲ್ಕರ್ ಹಾಗೂ ಗೋವಿಂದ ಪನ್ಸಾರೆ ಅವರ ಹತ್ಯೆ ನಡೆದು ಹಲವು ವರ್ಷಗಳಾದರೂ ಕೊಲೆಗಾರರನ್ನು ಪತ್ತೆ ಹಚ್ಚಲು ವಿಫಲವಾಗಿರುವ ಸಿಬಿಐ ಹಾಗೂ ಸಿಐಡಿಯನ್ನು ತರಾಟೆಗೆ ತೆಗೆದುಕೊಳ್ಳುವ ಸಂದರ್ಭ ನ್ಯಾಯಾಲಯ ಪದ್ಮಾವತಿ ವಿವಾದದ ಬಗ್ಗೆ ಮೇಲಿನಂತೆ ಪ್ರತಿಕ್ರಿಯಿಸಿದೆ. "ಈ ಎರಡು ಕೊಲೆಗಳು ಕ್ರಮವಾಗಿ 2013 ಹಾಗೂ 2015ರಲ್ಲಿ ನಡೆದಿದೆ. ಆದರೆ ನೀವು ಇನ್ನೂ ಕೊಲೆಗಾರರನ್ನು ಶೋಧಿಸುತ್ತಿದ್ದೀರಿ,'' ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಪರಿವೀಕ್ಷಣೆಯಲ್ಲಿ ತನಿಖೆ ನಡೆಸಬೇಕೆಂದು ದಾಭೋಲ್ಕರ್ ಹಾಗೂ ಪನ್ಸಾರೆ ಕುಟುಂಬಗಳು ಮಾಡಿರುವ ಮನವಿಗಳ ಹಿನ್ನೆಲೆಯಲ್ಲಿ ನ್ಯಾಯಾಲಯ ಮೇಲಿನಂತೆ ಪ್ರತಿಕ್ರಿಯಿಸಿದೆ.

ಪ್ರಕರಣಗಳನ್ನು ಬೇಧಿಸಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಿಬಿಐ ಪರ ವಾದಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಹಾಗೂ ಸಿಐಡಿ ಪರ ವಕೀಲ ಅಶೋಕ್ ಮುಂಡರ್ಗಿ ಹೇಳಿದರು. ಈ ನಿಟ್ಟಿನಲ್ಲಿ ಗೃಹ ಕಾರ್ಯದರ್ಶಿ, ಡಿಜಿಪಿ ಹಾಗೂ ಸಿಬಿಐ ಜಂಟಿ ನಿರ್ದೇಶಕರ  ಜತೆ ಸಭೆ ನಡೆಸಲಾಗುವುದೆಂದು ಇಬ್ಬರೂ ಹೇಳಿದ ನಂತರ ಮುಂದಿನ ವಿಚಾರಣೆಯನ್ನು ಡಿಸೆಂಬರ್ 21ಕ್ಕೆ ನಿಗದಿ ಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X