Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಹುಮತ ಬರದಿದ್ದರೆ ವಿಪಕ್ಷ ಹೊಣೆ...

ಬಹುಮತ ಬರದಿದ್ದರೆ ವಿಪಕ್ಷ ಹೊಣೆ ನಿರ್ವಹಣೆ ಹೊರತು ಹೊಂದಾಣಿಕೆ ಇಲ್ಲ: ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ8 Dec 2017 9:44 PM IST
share
ಬಹುಮತ ಬರದಿದ್ದರೆ ವಿಪಕ್ಷ ಹೊಣೆ ನಿರ್ವಹಣೆ ಹೊರತು ಹೊಂದಾಣಿಕೆ ಇಲ್ಲ: ದೇವೇಗೌಡ

ಚಿಕ್ಕಮಗಳೂರು, ಡಿ.8: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ಬಹುಮತ ಬಂದರೆ ಸರ್ಕಾರ ರಚಿಸಲಾಗುವುದು. ಇಲ್ಲದಿದ್ದರೆ ವಿಪಕ್ಷ ಹೊಣೆ ನಿರ್ವಹಣೆ ಮಾಡಲಾಗುವುದೇ ಹೊರತು ಹೊಂದಾಣಿಕೆಯ ಪ್ರಶ್ನೆಯೇ ಇಲ್ಲವೆಂದು ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದರು.

  ಈ ಹಿಂದೆ ಕಾಂಗ್ರೆಸ್ ಪಕ್ಷದ ಧರಂಸಿಂಗ್ ಮುಖ್ಯಮಂತ್ರಿಯಾಗಲು ಬೆಂಬಲ ನೀಡಲಾಗಿತ್ತು. ತಮ್ಮ ಮಗ ಬಿಜೆಪಿಗೂ ಸಹಕಾರ ನೀಡಿದ್ದರು. ಅವರಿಬ್ಬರಿಗೆ ಸಹಕಾರ ನೀಡಿರುವುದು ಸಾಕಾಗಿದೆ ಎಂದರು. ಜೆಡಿಎಸ್‍ಗೆ ಬಹುಮತ ದೊರೆತರೆ ದಲಿತರಿಗೆ ಉಪಮುಖ್ಯ ಮಂತ್ರಿಸ್ಥಾನ ನೀಡುವ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಗೌಡರು ಬಹುಮತ ಬಂದ ನಂತರ ಯಾರಿಗೆ ಯಾವ ಸ್ಥಾನ ಎಂಬುದರ ಬಗ್ಗೆ ನಿರ್ಧಾರವಾಗುತ್ತದೆ ಎಂದರು.

ತಾವು ಅನೇಕ ಮಂದಿ ಹಿಂದುಳಿದ, ದಲಿತ ಮುಖಂಡರಿಗೆ ಅಧಿಕಾರ ನೀಡಿರುವುದಾಗಿ ತಿಳಿಸಿದ ಅವರು ಸಿದ್ದರಾಮಯ್ಯ, ಪಿಜಿಆರ್ ಸಿಂಧ್ಯಾ, ತಿಪ್ಪೇಸ್ವಾಮಿ ಮುಂತಾದ ಹಿಂದುಳಿದವರೊಂದಿಗೆ ಲಿಂಗಾಯತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ಎಂಟು ಮಂದಿಗೆ ತಮ್ಮ ಸಂಪುಟ ದಲ್ಲಿ ಅವಕಾಶ ಕಲ್ಪಿಸಿದ್ದು, ಓರ್ವ ಒಕ್ಕಲಿಗರಿಗೆ ಮಾತ್ರ ಸಚಿವ ಹುದ್ದೆ ನೀಡಲಾಗಿತ್ತು ಎಂದರು.

ಎರಡು ರಾಷ್ಟ್ರೀಯ ಪಕ್ಷಗಳು ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾವೇರಿ, ಮಹಾಧಾಯಿ ಸಮಸ್ಯೆಗೆ ಯಾವ ಪರಿಹಾರ ದೊರೆಯಿತು. ಪಾರ್ಲಿಮೆಂಟ್‍ನಲ್ಲಿ ಯುಪಿಎ ಸರ್ಕಾರವಿದ್ದಾಗ ತಾವು ನೀರಿಗಾಗಿ ಕಣ್ಣೀರು ಹಾಕಿದಾಗ ಕಾಂಗ್ರೆಸ್, ಬಿಜೆಪಿ ನೆರವಿಗೆ ಬರಲಿಲ್ಲ. ಬಿಜೆಪಿಗೆ ಮನವಿ ಮಾಡಿದಾಗ ಮುಂದೆ ಜಯಲಲಿತಾ ಅವರಿಂದ ರಾಜಕೀಯ ಲಾಭವಾಗಬಹುದು ಎಂದು ತಮ್ಮ ರಾಜ್ಯದ ಪರ ಬರಲಿಲ್ಲ. ಹೀಗಾಗಿ ಪ್ರಾದೇಶಿಕ ಪಕ್ಷದ ಅಗತ್ಯದ ಬಗ್ಗೆ ರಾಜ್ಯದ ಜನತೆ ತೀರ್ಮಾನಿಸಬೇಕಾಗಿದೆ ಎಂದರು.

ತೆಂಗು ಅಡಿಕೆ ಬೆಳೆಗಾರರು ಅನೇಕ ಕಾರಣಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಸೆಳೆಯಲು ದಿಲ್ಲಿಗೆ ರೈತರನ್ನು ಕರೆದುಕೊಂಡು ಹೋಗುವ ಬಗ್ಗೆ ಚಿಂತನೆ ನಡೆಸಲಾಗಿದೆ. ಕಾಂಗ್ರೆಸ್ ಸದಸ್ಯರೋರ್ವರು ಕೂಡ ಬೆಂಬಲ ನೀಡಿದ್ದಾರೆ. ತಮ್ಮ ಪಕ್ಷದ ಶಾಸಕರು ಆಸಕ್ತರಾಗಿ ದ್ದಾರೆ. ಈ ನಡುವೆ ದತ್ತ ರೈತರ ಪರವಾಗಿ ಮನವಿ ಸಲ್ಲಿಸುವ ಕಾರ್ಯ ಕ್ರಮ ಆಯೋಜಿಸಿದ್ದಾರೆ. ಈ ಹಿಂದಿನ ಯುಪಿಎ ಸರ್ಕಾರವೂ ತೆಂಗು ಮತ್ತು ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಸಲಿಲ್ಲ. ಈಗಿನ ಎನ್‍ಡಿಎ ಸರಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಶಾಸಕ ಬಿ.ಬಿ. ನಿಂಗಯ್ಯ, ಜೆಡಿಎಸ್ ರಾಜ್ಯ ಉಪಾ ಧ್ಯಕ್ಷ ಎಚ್.ಎಚ್.ದೇವರಾಜ್, ಜಿಲ್ಲಾಧ್ಯಕ್ಷ ರಂಜನ್ ಅಜಿತ್‍ಕುಮಾರ್ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X