Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಜ್‌ಮಹಲ್ ನಮ್ಮೆಲ್ಲರದ್ದು :...

ತಾಜ್‌ಮಹಲ್ ನಮ್ಮೆಲ್ಲರದ್ದು : ಸುಪ್ರೀಂಕೋರ್ಟ್

“ಅದನ್ನು ಮುಂದಿನ ತಲೆಮಾರಿಗೆ ಸಂರಕ್ಷಿಸಿ”

ವಾರ್ತಾಭಾರತಿವಾರ್ತಾಭಾರತಿ8 Dec 2017 10:50 PM IST
share
ತಾಜ್‌ಮಹಲ್ ನಮ್ಮೆಲ್ಲರದ್ದು : ಸುಪ್ರೀಂಕೋರ್ಟ್

ಹೊಸದಿಲ್ಲಿ, ಡಿ.8: ತಾಜ್‌ಮಹಲ್ ನಮ್ಮೆಲ್ಲರಿಗೂ ಸೇರಿದ್ದು. ಅದನ್ನು ಮುಂದಿನ ತಲೆಮಾರಿಗೆ ಸಂರಕ್ಷಿಸಿ ಸುರಕ್ಷಿತವಾಗಿಡಬೇಕು ಎಂದು ತಿಳಿಸಿರುವ ಸುಪ್ರೀಂಕೋರ್ಟ್, ತಾಜ್‌ಮಹಲ್‌ನ ಸುರಕ್ಷತೆ ಬಗ್ಗೆ ಉತ್ತರ ಪ್ರದೇಶ ಸರಕಾರ ಸುದೀರ್ಘಾವಧಿಯ ಕಾರ್ಯಯೋಜನೆಯೊಂದನ್ನು ರೂಪಿಸಬೇಕು ಎಂದು ಸೂಚಿಸಿದೆ.

   ನಾಗರಿಕರನ್ನು ಮತ್ತು ಸಾಂಸ್ಕೃತಿಕ ಪರಂಪರಾ ತಜ್ಞರನ್ನು ಸೇರಿಸಿಕೊಂಡು ತಾಜ್‌ಮಹಲ್ ಮತ್ತದರ ಸುತ್ತಮುತ್ತಲಿನ ಪ್ರದೇಶವನ್ನು ಸುರಕ್ಷಿತವಾಗಿ ಉಳಿಸಿಕೊಳ್ಳುವ ಕುರಿತು ವ್ಯಾಪಕ ದೃಷ್ಟಿಕೋನದ ಕಾರ್ಯನೀತಿಯನ್ನು ರೂಪಿಸುವಂತೆ ಉತ್ತರಪ್ರದೇಶ ಸರಕಾರಕ್ಕೆ ನ್ಯಾಯಮೂರ್ತಿಗಳಾದ ಮದನ್ ಬಿ.ಲೋಕುರ್ ಮತ್ತು ದೀಪಕ್ ಗುಪ್ತ ಅವರನ್ನೊಳಗೊಂಡಿರುವ ನ್ಯಾಯಪೀಠ ಸೂಚಿಸಿತು.

ತಾಜ್‌ಮಹಲ್ ಶತಮಾನದ ಅವಧಿಗೂ ಶಾಶ್ವತವಾಗಿ ಇರುವಂತೆ ನೀವು ಕ್ರಮ ಕೈಗೊಳ್ಳಬೇಕಿದೆ. ಎಲ್ಲರನ್ನೂ ಸೇರಿಸಿಕೊಂಡು ಕಾರ್ಯನೀತಿಯೊಂದನ್ನು ರೂಪಿಸಬೇಕು. ಮುಂದಿನ 25ರಿಂದ 50 ವರ್ಷಗಳ ಅವಧಿಗಲ್ಲ, 400- 500 ವರ್ಷಾವಧಿಗೂ ಈ ಸ್ಮಾರಕ ಉಳಿಯಬೇಕು ಎಂದು ನ್ಯಾಯಪೀಠ ತಿಳಿಸಿತು.

ರಾಜ್ಯ ಸರಕಾರವು ತಾಜ್‌ಮಹಲ್ ಸುರಕ್ಷತೆಗೆ ಬದ್ಧವಾಗಿದೆ. ತಾಜ್‌ಮಹಲ್ ಬಳಿ ವಾಯುಮಾಲಿನ್ಯ ನಿಯಂತ್ರಿಸಲು ವಿವಿಧ ಪ್ರಾಧಿಕಾರಗಳು ಕಾರ್ಯೋನ್ಮುಖವಾಗಿವೆ. ತಾಜ್‌ಮಹಲ್ ಸುತ್ತಮುತ್ತ ಪರಿಸರದ ಸಮತೋಲನ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತ ಹಾಗೂ ಉತ್ತರಪ್ರದೇಶದ ಎಡಿಷನಲ್ ಅಡ್ವೊಕೇಟ್ ಜನರಲ್ ಐಶ್ವರ್ಯ ಭಾರತಿ ನ್ಯಾಯಪೀಠಕ್ಕೆ ತಿಳಿಸಿದರು.

ಆದರೆ ಇವೆಲ್ಲಾ ಅಗತ್ಯ ಬಂದಾಗ ತೆಗೆದುಕೊಂಡ ತಾತ್ಕಾಲಿಕ ಕ್ರಮಗಳಾಗಿವೆ. ಯಾವುದೇ ದೀರ್ಘಾವಧಿಯ ಯೋಜನೆಯನ್ನು ರೂಪಿಸಿಲ್ಲ ಎಂದು ಸರಕಾರದ ಬಗ್ಗೆ ಅಸಮಾಧಾನ ಸೂಚಿಸಿದ ನ್ಯಾಯಪೀಠ, ತಾಜ್‌ಮಹಲ್ ಸುರಕ್ಷತೆ ಮತ್ತು ಸಂರಕ್ಷಣೆಗೆ ಒಂದು ಸಮಗ್ರ ಕಾರ್ಯಯೋಜನೆ ರೂಪಿಸುವಂತೆ ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X