Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇತಿಹಾಸ ತಿರುಚುವ ಸಂಚಿನ ವಿರುದ್ಧ ಹೋರಾಟ...

ಇತಿಹಾಸ ತಿರುಚುವ ಸಂಚಿನ ವಿರುದ್ಧ ಹೋರಾಟ ಅಗತ್ಯ:ಡಾ.ಮನ್ಝೂರ್‌ ಆಲಮ್

‘ಪ್ರವಾದಿ ಮುಹಮ್ಮದ್ (ಸ)ರವರ ಜೀವನ ಚರಿತ್ರೆ ಕುರಿತು ಕನ್ನಡದಲ್ಲಿ ರಚಿಸಲಾಗಿರುವ ಪ್ರಮುಖ ಗ್ರಂಥಗಳು’ ವಿಷಯವನ್ನಾಧರಿಸಿದ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Dec 2017 7:54 PM IST
share
ಇತಿಹಾಸ ತಿರುಚುವ ಸಂಚಿನ ವಿರುದ್ಧ ಹೋರಾಟ ಅಗತ್ಯ:ಡಾ.ಮನ್ಝೂರ್‌ ಆಲಮ್

ಬೆಂಗಳೂರು, ಡಿ.9: ದೇಶದ ಒಂದು ಸಾವಿರ ವರ್ಷಗಳ ಇತಿಹಾಸವನ್ನು ತಿರುಚುವ ಸಂಚು ನಡೆಯುತ್ತಿದ್ದು, ಮುಸ್ಲಿಮರು ತಮ್ಮ ಇತಿಹಾಸವನ್ನು ರಕ್ಷಿಸಲು ಅರೆಬಿಕ್, ಉರ್ದು ಜತೆಗೆ ಪ್ರಾದೇಶಿಕ ಭಾಷೆಗಳಲ್ಲೂ ಅದನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಹೊಸದಿಲ್ಲಿಯ ಇನ್‌ಸ್ಟಿಟ್ಯೂಟ್ ಆಫ್ ಆಬ್ಜೆಕ್ಟಿವ್ ಸ್ಟಡೀಸ್‌ನ ಅಧ್ಯಕ್ಷ ಡಾ.ಮನ್ಝೂರ್ ಆಲಮ್ ಕರೆ ನೀಡಿದರು.

ಶನಿವಾರ ನಗರದ ದಾರುಸ್ಸಲಾಮ್ ಕಟ್ಟಡದ ಬಿಫ್ಟ್ ಸಭಾಂಗಣದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಆಬ್ಜೆಕ್ಟಿವ್ ಸ್ಟಡೀಸ್ ಆಯೋಜಿಸಿದ್ದ ‘ಪ್ರವಾದಿ ಮುಹಮ್ಮದ್ (ಸ)ರವರ ಜೀವನ ಚರಿತ್ರೆ ಕುರಿತು ಕನ್ನಡದಲ್ಲಿ ರಚಿಸಲಾಗಿರುವ ಪ್ರಮುಖ ಗ್ರಂಥಗಳು’ ವಿಷಯವನ್ನಾಧರಿಸಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಸ್ಲಿಮ್ ಉಲಮಾಗಳು, ಬುದ್ಧಿಜೀವಿಗಳು, ಚಿಂತಕರು, ಲೇಖಕರು ಇಸ್ಲಾಮ್ ಧರ್ಮ ಹಾಗೂ ಪ್ರವಾದಿ ಮುಹಮ್ಮದ್(ಸ)ರವರ ಜೀವನ ಚರಿತ್ರೆಯ ಬಗ್ಗೆ ಸರಿಯಾದ ಮಾಹಿತಿಯನ್ನು ಜನಸಾಮಾನ್ಯರಿಗೆ ನೀಡಬೇಕಾದ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ರಾಜ್ಯದಲ್ಲಿ ಮೈಸೂರು ಹುಲಿ ಟಿಪ್ಪುಸುಲ್ತಾನ್‌ರ ತ್ಯಾಗ, ಬಲಿದಾನವನ್ನು ಕಡೆಗಣಿಸಿ ಅವರನ್ನು ದೇಶದ್ರೋಹಿ ಸೇರಿದಂತೆ ಇನ್ನಿತರ ರೀತಿಯಲ್ಲಿ ಬಿಂಬಿಸುವ ಪ್ರಯತ್ನಗಳು ನಡೆಯುತ್ತಿರುವುದು ನಮ್ಮ ಕಣ್ಣ ಮುಂದಿರುವ ತಾಜಾ ಉದಾಹರಣೆ. ಆದುದರಿಂದಲೆ, ನಮ್ಮ ಇತಿಹಾಸವನ್ನು ಬೇರೆ ಬೇರೆ ಭಾಷೆಗಳಲ್ಲಿಯೂ ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದರು.

ಪ್ರವಾದಿ ಮುಹಮ್ಮದ್(ಸ) ಜೀವನ ಚರಿತ್ರೆಯ ಮೇಲೆ ಇಡೀ ವಿಶ್ವದಲ್ಲಿ ನಡೆಯುತ್ತಿರುವ ದಾಳಿಗಳಿಗೆ ಸಮರ್ಥವಾದ ಉತ್ತರ ನೀಡಬೇಕಿದೆ. ಕನ್ನಡ ಭಾಷೆಯಲ್ಲಿ ಪ್ರವಾದಿಯ ಜೀವನ ಚರಿತ್ರೆಯ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಆಗಿಲ್ಲ. ಭಾಷೆಯ ಸಮರ್ಪಕ ಬಳಕೆಯಾದಾಗ ಮಾತ್ರ ಪ್ರತಿಯೊಬ್ಬರಿಗೂ ಮಾಹಿತಿಯನ್ನು ಒದಗಿಸಲು ಸಾಧ್ಯ ಎಂದು ಮನ್ಝೂರ್ ಆಲಮ್ ತಿಳಿಸಿದರು.

ಇಡೀ ವಿಶ್ವದಲ್ಲಿ ಆಂಗ್ಲ ಭಾಷೆಯ ಪಾರುಪತ್ಯ ನಡೆಯುತ್ತಿದೆ. ಆದರೆ, ನಮ್ಮ ದೇಶದಲ್ಲಿ ಪ್ರಾದೇಶಿಕ ಭಾಷೆಗಳು ಬೆಳವಣಿಗೆಯಾಗುತ್ತಿವೆ. ಇಲ್ಲಿನ ಪ್ರತಿಯೊಂದು ಭಾಷೆಯನ್ನು ಲಕ್ಷಾಂತರ ಜನ ಬಳಕೆ ಮಾಡುತ್ತಾರೆ. ಇದರಿಂದಾಗಿ, ಪ್ರಾದೇಶಿಕ ಭಾಷೆಗಳು ತಮ್ಮ ಅಸ್ತಿತ್ವ ಉಳಿಸಿಕೊಂಡಿವೆ ಎಂದು ಮನ್ಝೂರ್ ಆಲಮ್ ತಿಳಿಸಿದರು.

ಅಬ್ದುಸ್ಸಲಾಮ್ ಪುತ್ತಿಗೆ ಇಂದು ಮಂಡಿಸಿದ ವಿಷಯದಲ್ಲಿ ನಾವು ಕಂಡುಕೊಂಡ ಸತ್ಯವೇನೆಂದರೆ ‘ಒಬ್ಬ ಹುತಾತ್ಮನ ಖಡ್ಗದಲ್ಲಿರುವ ರಕ್ತಕ್ಕಿಂತ, ಲೇಖನಿಯಲ್ಲಿರುವ ಶಾಯಿಯ ಮಹತ್ವ ಹೆಚ್ಚು’. ಆದುದರಿಂದ, ಲೇಖನಿಯ ಸರಿಯಾದ ಬಳಕೆ ಅಗತ್ಯ. ಮಾನವೀಯತೆ ನಡುವೆ ಕಂದಕ ಮೂಡಿಸುವವರಿಗೆ ಲೇಖನಿ ಮೂಲಕ ಉತ್ತರ ನೀಡಬೇಕು ಎಂದು ಅವರು ಹೇಳಿದರು.

ಭಯೋತ್ಪಾದನೆ ಹಾಗೂ ಹಿಂಸೆಯ ತರಬೇತಿಯನ್ನು ಕುರ್‌ಆನ್ ಹಾಗೂ ಪ್ರವಾದಿಯ ಜೀವನ ಚರಿತ್ರೆಯನ್ನಾಧರಿಸಿ ನೀಡಲಾಗುತ್ತಿದೆ ಎಂಬ ಆರೋಪ ಇಡೀ ವಿಶ್ವದಲ್ಲಿ ಮಾಡಲಾಗುತ್ತಿದೆ. ಈ ಸವಾಲನ್ನು ಸ್ವೀಕರಿಸಿ ಆರೋಪ ಮಾಡುವವರಿಗೆ ಇಸ್ಲಾಮ್ ಧರ್ಮದ ಸಂದೇಶ ಹಾಗೂ ಪ್ರವಾದಿಯ ಜೀವನ ಚರಿತ್ರೆಯ ಪರಿಚಯ ಮಾಡಬೇಕಿದೆ ಎಂದು ಮನ್ಝೂರ್ ಆಲಮ್ ತಿಳಿಸಿದರು.

ಪ್ರವಾದಿಯ ಜೀವನ ಚರಿತ್ರೆಯ ಬಗ್ಗೆ ಇಡೀ ದೇಶಾದ್ಯಂತ ಅಭಿಯಾನ ನಡೆಯುತ್ತಿದೆ. ಚಿಕ್ಕ ಚಿಕ್ಕ ಪುಸ್ತಕಗಳನ್ನು ಹೊರತರಬೇಕು. ಅದಕ್ಕಾಗಿ ನಾವು ನೆರವು ನೀಡುತ್ತೇವೆ. ನಮ್ಮ ಸಂಸ್ಥೆ ವತಿಯಿಂದ ಈಗಾಗಲೆ 400ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಲಾಗಿದೆ. 50ಕ್ಕೂ ಹೆಚ್ಚು ಪುಸ್ತಕಗಳು ಅಂತಿಮ ರೂಪ ಪಡೆಯುತ್ತಿವೆ ಎಂದು ಅವರು ಹೇಳಿದರು.

ವಿಶ್ವದಲ್ಲಿ ಪ್ರಮುಖ ಮುಸ್ಲಿಮ್ ದೇಶಗಳ ಸಂಘಟನೆಗಳು ಒಡೆಯುತ್ತಿವೆ. ನಮ್ಮ ದೇಶದಲ್ಲೂ ಇಂತಹ ಪ್ರಯತ್ನಗಳು ನಡೆಯುತ್ತಿವೆ. ಫೆಲೆಸ್ತೀನ್ ಅನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡಬೇಕು ಎಂಬುದರ ಕುರಿತು ವಿಶ್ವಮಟ್ಟದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಬೇಕು ಎಂದು ಮನ್ಝೂರ್ ಆಲಮ್ ತಿಳಿಸಿದರು.

‘ಜೇರುಸಲೇಂ ಇಸ್ರೇಲ್ ರಾಜಧಾನಿ’ ಖಂಡನೆ: ಅಮೇರಿಕವು ಇಸ್ರೇಲ್ ದೇಶದ ರಾಜಧಾನಿಯಾಗಿ ಜೇರುಸಲೇಂ ಅನ್ನು ಮಾನ್ಯ ಮಾಡಿದ್ದರ ವಿರುದ್ಧ ಸಭೆಯಲ್ಲಿ ಶಿಕ್ಷಣ ತಜ್ಞ ಆಗಾ ಸುಲ್ತಾನ್ ಮಂಡಿಸಿದ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ ಲಭ್ಯವಾಯಿತು.

ಕಾರ್ಯಕ್ರಮದಲ್ಲಿ ಆಲ್ ಇಂಡಿಯಾ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ಸಂಸ್ಥಾಪಕ ಸದಸ್ಯ ಶಾ ಖಾದ್ರಿ ಸೈಯ್ಯದ್ ಮುಸ್ತಫಾ ರಿಫಾಯಿ ಜಿಲಾನಿ, ಇಂಡಿಯಾ ಫಿಖಾ ಅಕಾಡಮಿ ಪ್ರಧಾನ ಕಾರ್ಯದರ್ಶಿ ಮೌಲಾನ ಅಮೀನ್ ಉಸ್ಮಾನಿ, ವಾರ್ತಾ ಭಾರತಿಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಮೌಲಾನ ಮಖ್ಸೂದ್ ಇಮ್ರಾನ್ ರಶಾದಿ, ಮೌಲಾನ ಸೈಯ್ಯದ್ ಬಾಖರ್ ಅರ್ಶದ್ ಖಾಸ್ಮಿ, ಸುಲೇಮಾನ್‌ಖಾನ್, ಜಮೀಲ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X