Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದೇ ವರ್ಷದಲ್ಲಿ 4 ಪಟ್ಟು ಹೆಚ್ಚಿದ...

ಒಂದೇ ವರ್ಷದಲ್ಲಿ 4 ಪಟ್ಟು ಹೆಚ್ಚಿದ ಆಂಧ್ರಪ್ರದೇಶ ಸಿಎಂ ಆಸ್ತಿ ಮೌಲ್ಯ

ವಾರ್ತಾಭಾರತಿವಾರ್ತಾಭಾರತಿ9 Dec 2017 10:41 PM IST
share
ಒಂದೇ ವರ್ಷದಲ್ಲಿ 4 ಪಟ್ಟು ಹೆಚ್ಚಿದ ಆಂಧ್ರಪ್ರದೇಶ ಸಿಎಂ ಆಸ್ತಿ ಮೌಲ್ಯ

ಹೈದರಾಬಾದ್,ಡಿ.9: ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಾರ್ಟಿಯ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರ ಆಸ್ತಿಯ ನಿವ್ವಳ ಮೌಲ್ಯವು ಒಂದು ವರ್ಷದಲ್ಲಿ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ.

ನಾಯ್ಡು ಅವರ ಪುತ್ರ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಅವರು ಶುಕ್ರವಾರ ಕುಟುಂಬದ ಆಸ್ತಿ ವಿವರಗಳನ್ನು ಘೋಷಿಸಿದ್ದು, 2016 ಮಾ.31ರಂದು 67.04 ಲ.ರೂ.ಗಳಷ್ಟಿದ್ದ ಮುಖ್ಯಮಂತ್ರಿಗಳ ಆಸ್ತಿಯ ಮೌಲ್ಯವು ಈ ವರ್ಷದ ಮಾ.31ಕ್ಕೆ 2.53 ಕೋ.ರೂ.ಗೇರಿದೆ.

ಘೋಷಣೆಯಂತೆ ನಾಯ್ಡು ಅವರು ಹೈದರಾಬಾದ್‌ನ ಜ್ಯುಬಿಲಿ ಹಿಲ್‌ನಲ್ಲಿ ನಿರ್ಮಿಸಿರುವ ನೂತನ ನಿವಾಸದ ಮೌಲ್ಯವು 7.76 ಕೋ.ರೂ.ಆಗಿದೆ. ಕಳೆದ ವರ್ಷ ಕಟ್ಟಡವು ನಿರ್ಮಾಣ ಹಂತದಲ್ಲಿದ್ದರಿಂದ ಮೌಲ್ಯವನ್ನು 3.68 ಕೋ.ರೂ.ಎಂದು ತೋರಿಸಲಾಗಿತ್ತು. ಕಳೆದ ವರ್ಷ ಅವರು 3.59 ಲ.ರೂ ಹೊಂದಿದ್ದರೆ ಈ ವರ್ಷ ಅದು 40.03 ಲ.ರೂ.ಗೇರಿದೆ. ಕುಟುಂಬದ ಉದ್ಯಮವಾಗಿರುವ ಹೆರಿಟೇಜ್ ಫುಡ್ಸ್ ಎಲ್ಲ ಸದಸ್ಯರ ಪ್ರಮುಖ ಆದಾಯ ಮೂಲವಾಗಿದೆ ಎಂದು ಲೋಕೇಶ್ ತಿಳಿಸಿದ್ದಾರೆ.

ಹೆರಿಟೇಜ್‌ನ ಎಂಡಿಯಾಗಿರುವ, ನಾಯ್ಡು ಅವರ ಪತ್ನಿ ಭುವನೇಶ್ವರಿ ಆಸ್ತಿ ಮೌಲ್ಯ ಕಳೆದ ವರ್ಷ 33.66 ಕೋ.ರೂ.ಇದ್ದರೆ ಈ ವರ್ಷ ಅದು 46.32 ಕೋ.ರೂ.ಗೇರಿದೆ.

ಸ್ವತಃ ಲೋಕೇಶ್ ಅವರ ಆಸ್ತಿ ಮೌಲ್ಯವೂ ಏರಿಕೆಯಾಗಿದೆ. ಕಳೆದ ವರ್ಷ 8.15 ಕೋ.ರೂ.ಇದ್ದ ಅದು ಈ ವರ್ಷ 15.21 ಕೋ.ರೂ.ಗೇರಿದ್ದರೆ, ಅವರ ಪತ್ನಿ ನಾರಾ ಬ್ರಹ್ಮಣಿ ಅವರ ಆಸ್ತಿ ಮೌಲ್ಯ 12.33 ಕೋ.ರೂ.ಗಳಿಂದ 15.01 ಕೋ.ರೂ.ಗೇರಿದೆ.

ನಾಯ್ಡು ಕುಟುಂಬವು ಲೋಕೇಶ್‌ರ ಎರಡರ ಹರೆಯದ ಪುತ್ರ ನಾರಾ ದೇವಾಂಶನ ಆಸ್ತಿಯನ್ನೂ ಘೋಷಿಸಿದೆ. ಈ ಪುಟಾಣಿಯ ಹೆಸರಿನಲ್ಲಿರುವ ಆಸ್ತಿಯ ಮೌಲ್ಯ 11.32 ಕೋ.ರೂ.ಗಳಿಂದ 11.54 ಕೋ.ರೂ.ಗೇರಿದೆ.

ಪ್ರತಿ ವರ್ಷ ತನ್ನ ಆಸ್ತಿಗಳನ್ನು ಘೋಷಿಸಿಕೊಳ್ಳುವುದು ನಾಯ್ಡು ಕುಟುಂಬದ ನೀತಿಯಾಗಿದೆ. ನಮ್ಮ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯ ದ್ಯೋತಕವಾಗಿ ನಾವು ಕಳೆದ ಏಳು ವರ್ಷಗಳಿಂದಲೂ ಈ ನೀತಿಯನ್ನು ಪಾಲಿಸುತ್ತಿದ್ದೇವೆ ಎಂದು ಲೋಕೇಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X