Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10 ಸಾವಿರ ರೂ.ಗಳಲ್ಲಿ ಕ್ಯಾನ್ಸರ್ ಗೆ...

10 ಸಾವಿರ ರೂ.ಗಳಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ

ನ್ಯಾನೊ ತಂತ್ರಜ್ಞಾನ ಆವಿಷ್ಕಾರದ ಹಂತದಲ್ಲಿ

ವಾರ್ತಾಭಾರತಿವಾರ್ತಾಭಾರತಿ9 Dec 2017 10:47 PM IST
share
10 ಸಾವಿರ ರೂ.ಗಳಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ

ಬೆಂಗಳೂರು,ಡಿ.9: ಭಾರತದಲ್ಲಿ ಪ್ರತಿ ವರ್ಷ ಸುಮಾರು 10 ಲಕ್ಷ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ, ಆದರೆ ದುಬಾರಿ ವೆಚ್ಚದಿಂದಾಗಿ ಶೇ.10ಕ್ಕೂ ಕಡಿಮೆ ಜನರಿಗೆ ಮಾತ್ರ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗುತ್ತಿದೆ.

 ಐಐಟಿ ಮುಂಬೈನ ಡಾ.ರೋಹಿತ್ ಶ್ರೀವಾಸ್ತವ ಅವರು ಕ್ಯಾನ್ಸರ್‌ಗೆ ಕೇವಲ 10,000 ರೂ.ಗಳಲ್ಲಿ ಚಿಕಿತ್ಸೆಯನ್ನು ಒದಗಿಸಬಲ್ಲ ನ್ಯಾನೊ ತಂತ್ರಜ್ಞಾನವನ್ನು ರೂಪಿಸಲು ಶ್ರಮಿಸುತ್ತಿದ್ದಾರೆ. ತನ್ನ ಸಂಶೋಧನೆಯನ್ನು ಮುಂದುವರಿಸಲು ಕ್ರೌಡ್ ಫಂಡಿಂಗ್ ಮೂಲಕ ಹಣವನ್ನು ಸಂಗ್ರಹಿಸಲು ಮುಂದಾಗಿರುವ ಅವರು ಇದಕ್ಕಾಗಿ ಸಾಮಾಜಿಕ ಮಾಧ್ಯಮಗಳ ಮೊರೆ ಹೋಗಿದ್ದಾರೆ.

ಇಲ್ಲಿಯ ಇಂಡಿಯಾ ನ್ಯಾನೊ-2017 ಸಮ್ಮೇಳನದಲ್ಲಿ ‘ನ್ಯಾನೊ ಮೆಡಿಸಿನ್’ ಕುರಿತು ವಿಚಾರಗೋಷ್ಠಿಯಲ್ಲಿ ಮಾತನಾಡಿದ ಶ್ರೀವಾಸ್ತವ, ಪೂರ್ಣವಾಗಿ ಅಭಿವೃದ್ಧಿಗೊಂಡು ಪರೀಕ್ಷೆಗೊಳಪಟ್ಟ ನಂತರ ಈ ನೂತನ ತಂತ್ರಜ್ಞಾನವು ಶಸ್ತ್ರಚಿಕಿತ್ಸೆ ಅಥವಾ ಕಿಮೊಥೆರಪಿ ಇಲ್ಲದೆ ಕ್ಯಾನ್ಸರ್‌ನ್ನು ಗುಣಪಡಿಸುವಲ್ಲಿ ನೆರವಾಗಲಿದೆ ಎಂದು ತಿಳಿಸಿದರು.

ಇದು ಕ್ಯಾನ್ಸರ್ ಚಿಕಿತ್ಸೆಗೆ ಅಭಿವೃದ್ಧಿಗೊಳಿಸಲಾಗುತ್ತಿರುವ ನೂತನ ತಂತ್ರಜ್ಞಾನಗಳ ಲ್ಲೊಂದಾಗಿದ್ದು, ಚಿಕಿತ್ಸಾ ವೆಚ್ಚ ಮತ್ತು ರೋಗಿಯ ಆಸ್ಪತ್ರೆ ವಾಸದ ಅವಧಿಯನ್ನು ಗಣನೀಯವಾಗಿ ತಗ್ಗಿಸುವ ನಿರೀಕ್ಷೆಯಿದೆ ಎಂದ ಅವರು, ಹೆಚ್ಚಿನ ಕ್ಯಾನ್ಸರ್ ರೋಗಿಗಳು ಸೂಕ್ತ ರೋಗನಿಧಾನ ಮತ್ತು ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳನ್ನು ವ್ಯಯಿಸಬೇಕಾಗುತ್ತದೆ. ಸರಾಸರಿ ಈ ವೆಚ್ಚ 3ರಿಂದ 5 ಲ.ರೂ.ಗಳಾಗುತ್ತವೆ ಎಂದು ಹೇಳಿದರು.

ಕ್ಯಾನ್ಸರ್ ನಿರೋಧಕ ಔಷಧಿಗಳನ್ನು ತುಂಬಿದ, ಚಿನ್ನದ ನ್ಯಾನೊ ಕಣಗಳಿಂದ ಲೇಪಿತ ನ್ಯಾನೊ ಶೆಲ್‌ಗಳನ್ನು ಕ್ಯಾನ್ಸರ್ ಕೋಶಗಳಿಗೆ ಗುರಿಯಾಗಿಸಿಕೊಂಡು ‘ನಿಯರ್ ಇಂಟಿಗ್ರೇಟೆಡ್ ಲೈಟ್’ ಬಳಸಿ ಸುಮಾರು 50 ಡಿಗ್ರಿಗಳಷ್ಟು ಬಿಸಿ ಮಾಡಲಾಗುತ್ತದೆ. ಇದರಿಂದಾಗಿ ನ್ಯಾನೊ ಶೆಲ್‌ಗಳು ವಿಭಜನೆಗೊಂಡು ಕ್ಯಾನ್ಸರ್ ಪೀಡಿತ ಜಾಗಕ್ಕೆ ಔಷಧಿಯನ್ನು ಪೂರೈಸುತ್ತವೆ ಎಂದು ತಿಳಿಸಿದ ಶ್ರೀವಾಸ್ತವ, ಮೊದಲ ಹಂತದ ಪ್ರಯೋಗಗಳು ಪೂರ್ಣಗೊಂಡಿದ್ದು, ಎರಡನೇ ಹಂತದ ಪ್ರಯೋಗಗಳಿಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದರು.

 ಏಳು ಕೋಟಿ ರೂ.ಸಂಗ್ರಹದ ಗುರಿಯೊಂದಿಗೆ 45 ದಿನಗಳ ಹಿಂದೆ ಆರಂಭಿಸಿದ್ದ ಕ್ರೌಡ್ ಫಂಡಿಂಗ್ ಪೇಜ್‌ನ ಮೂಲಕ ಈವರೆಗೆ 63,000 ರೂ.ಗಳು ಬಂದಿವೆ ಎಂದೂ ಅವರು ತಿಳಿಸಿದರು.

ಕ್ಯಾನ್ಸರ್ ಕೋಶಗಳನ್ನು ಗುರಿಯಾಗಿಸಿಕೊಂಡು ನ್ಯಾನೊ ಔಷಧಿಗಳ ಪ್ರಯೋಗವು ಟ್ಯೂಮರ್‌ನ ಗಾತ್ರವನ್ನು ಕಡಿಮೆಯಾಗಿಸುತ್ತದೆ ಎನ್ನುವುದು ಸ್ಪಷ್ಟವಾಗಿದೆ. ಒಂದೇ ಕೋಶವನ್ನು ಬಳಸಿ ಬಹು ಔಷಧಿಗಳನ್ನು ಪೂರೈಸುವ ಸಾಧ್ಯತೆಯ ಕುರಿತು ಪ್ರಸಕ್ತ ಸಂಶೋಧನೆಗಳು ನಡೆಯುತ್ತಿವೆ ಎಂದು ಕೊಚ್ಚಿಯ ಸೆಂಟರ್ ಫಾರ್ ನ್ಯಾನೊ ಸೈನ್ಸಸ್‌ನ ಡೀನ್ ಪ್ರೊ.ಶಾಂತಿಕುಮಾರ ವಿ.ನಾಯರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X