Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾವೇರಿ ತಾಲೂಕು ರಚನೆಗೆ ಒತ್ತಾಯಿಸಿ...

ಕಾವೇರಿ ತಾಲೂಕು ರಚನೆಗೆ ಒತ್ತಾಯಿಸಿ ಕುಶಾಲನಗರ ಬಂದ್

ಅಂಗಡಿ ಮುಂಗ್ಗಟ್ಟುಗಳು ಮುಚ್ಚಿ ಬಂದ್‌ಗೆ ಸಂಪೂರ್ಣ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ9 Dec 2017 10:53 PM IST
share
ಕಾವೇರಿ ತಾಲೂಕು ರಚನೆಗೆ ಒತ್ತಾಯಿಸಿ ಕುಶಾಲನಗರ ಬಂದ್

ಕುಶಾಲನಗರ, ಡಿ. 9: ಕಾವೇರಿ ತಾಲೂಕು ರಚನೆಗೆ ಹಕ್ಕೊತ್ತಾಯ ಮಂಡಿಸಿ ಪ್ರಸ್ತಾವಿತ ಕಾವೇರಿ ತಾಲೂಕು ರಚನಾ ಹೋರಾಟ ಸಮಿತಿ ಕರೆಕೊಟ್ಟಿದ್ದ ಕುಶಾಲನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ.

ಮೆಡಿಕಲ್‌ಗಳನ್ನು ಹೊರತು ಪಡಿಸಿ ಅಂಗಡಿ ಮಳಿಗೆಗಗಳು, ಹೋಟೇಲ್‌ಗಳು, ಸಿನಿಮಾ ಮಂದಿರಗಳು ಮುಚ್ಚುವ ಮುಲಕ ಬಂದಿಗೆ ಬೆಂಬಲ ಸೂಚಿಸಿದ್ದವು.
ಬೆಳಗ್ಗೆ ಆಟೋರಿಕ್ಷಾಗಳ ಹೋರಾಟ, ಖಾಸಗಿ ಬಸ್ಸುಗಳು, ಮಾಕ್ಸಿಕ್ಯಾಬ್, ಟಾಕ್ಸಿ ಸಂಚಾರ ಸ್ತಬ್ಧವಾಗಿದ್ದವು. ಸರಕಾರಿ ಬಸ್‌ಗಳು ಎಂದಿನಂತೆ ಸಂಚರಿಸುತ್ತಿದ್ದವು. ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿತ್ತು.

ಮೈಸೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275ನ್ನು ತಡೆದು, ಗಂಟೆಗೊಮ್ಮೆ ವಾಹನಗಳನ್ನು ಬಿಡಲು ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದರು. ಸಮಿತಿಯ ತೀರ್ಮಾನಕ್ಕೆ ಪೋಲಿಸರು ಅವಕಾಶ ನೀಡದೇ, ಪ್ರತಿಭಟನಾಕಾರರು ಹಾಗೂ ಪೋಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ಪಟ್ಟಣದ ಟಾಟಾ ಪೆಟ್ರೋಲ್ ಬಂಕ್‌ನ ಬಳಿ ಸುಮಾರು ಒಂದು ತಾಸಿನ ವರೆಗೆ ರಸ್ತೆ ತಡೆಹಿಡಿದು ಪ್ರತಿಭಟನೆ ನಡೆಸಲಾಯಿತು. ಹೆದ್ದಾರಿಯಲ್ಲಿಯೇ ಕುಳಿತ ಪ್ರತಿಭಟನಾಕಾರರು, ತಾಲೂಕು ರಚನೆಯ ಘೋಷಣೆಗಳನ್ನು ಕೂಗಿ ರಚನೆಯ ಅಗತ್ಯತೆಗಳನ್ನು ರಾಗಬದ್ಧವಾಗಿ ಹಾಡಿ ಗಮನ ಸೆಳೆದರು.

ನಂತರ ಮಧ್ಯಾಹ್ನದ ವೇಳೆ ಪಟ್ಟಣದ ಕಾರ್ಯಪ್ಪವೃತ್ತದ ಬಳಿ ಜಮಾಯಿಸಿದ ಪ್ರತಿಭಟ ನಾಕಾರರು, ಒಂದು ಗಂಟೆಗೂ ಹೆಚ್ಚುಕಾಲ ರಸ್ತೆ ತಡೆಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಾನವ ಸರಪಳಿ ನಿರ್ಮಿಸಿ ಕಾವೇರಿ ತಾಲೂಕು ಪರ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ಕಾವೇರಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕಾವೇರಿ ತಾಲೂಕಿಗಾಗಿ ಆಗ್ರಹಿಸಿ ಮೊದಲನೇ ಹಂತದ ಹೋರಾಟ ಮುಗಿದು, ಎರಡನೇ ಹಂತದ ಹೋರಾಟದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಪ್ರತಿಭಟನಾಕಾರರು ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಬಂದನ್ನು ಯಶಸ್ವಿಗೊಳಿಸಿದ್ದಾರೆ ಎಂದರು.

ಗುಡ್ಡೇಹೊಸುರು, 7ನೇ ಹೊಸಕೋಟೆ, ನಂಜರಾಯಪಟ್ಟಣ, ಕಂಬಿಬಾಣೆ, ಕೂಡಿಗೆ, ಹೆಬ್ಬಾಲೆ, ಶರಂಗಾಲ ಹಾಗೂ ಮುಂತಾದ ಕಡೆ ಬಂದ್‌ಗೆ ಬೆಂಬಲವನ್ನು ಸೂಚಿಸಿ ಪ್ರತಿಭಟನೆ ನಡೆಸಲಾಯಿತು. ವಾಹನ ಸಂಚಾರ ವಿರಳವಾಗಿತ್ತು. ಅಂಗಡಿ ಮುಂಡಟ್ಟುಗಳನ್ನು ಮುಚ್ಚಿ ಬೆಂಬಲ ಸೂಚಿಸಿದರು. ಹಲವೆಡೆ ರಸ್ತೆ ತಡೆ, ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು. ಹೋಟೆಲ್‌ಗಳನ್ನು ಮುಚ್ಚಿದ್ದರಿಂದ ಕುಶಾಲನಗರಕ್ಕೆ ಆಗಿಮಿಸಿದ್ದ ಪ್ರವಾಸಿಗರು ಊಟ, ತಿಂಡಿಯಿಲ್ಲದೇ ಹೈರಾಣಾದ ಘಟನೆ ನಡೆಯಿತು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ.ಚಂದ್ರಕಲಾ, ಮಂಜುಳಾ, ತಾಲೂಕು ಹೋರಾಟ ಸಮಿತಿಯ ಆರ್.ಕೆ.ನಾಗೇಂದ್ರಬಾಬು, ಅಬ್ದುಲ್ ಖಾದರ್, ಶರವಣಕುಮಾರ್, ಜಿ.ಎಲ್.ನಾಗರಾಜ್, ಮೋಹನ್‌ಕುಮಾರ್, ನಾರಾಯಣ, ಕೃಷ್ಣ, ನಾಗೇಶ್, ಮಹೇಶ್, ಚಂದನ್, ಮುಸ್ತಫಾ, ಝಕರಿಯಾ, ಅಕ್ಬರ್, ಕೆ.ಬಿ.ರಾಜು, ಕೀರ್ತಿರಾಜು, ದೀಪಕ್, ಶಿವಕುಮಾರ್ ಮತ್ತಿತರರು ಇದ್ದರು.

ಸೋಮವಾರಪೇಟೆ ಡಿವೈಎಸ್ಪಿ ಕೆ.ಮುರಳೀಧರ್ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ವೃತ್ತನಿರೀಕ್ಷ ಖ್ಯಾತೇಗೌಡ, ನಗರ ಠಾಣಾಧಿಕಾರಿ ಪಿ.ಜಗದೀಶ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ ಹಾಗೂ ಸಿಬ್ಬಂದಿ ಪ್ರತಿಭಟನೆಯ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X