Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಸರಿಯಾಗಿ ವರ್ತಿಸಿಲ್ಲ: ಡ್ರೋನ್...

ಭಾರತದ ಸರಿಯಾಗಿ ವರ್ತಿಸಿಲ್ಲ: ಡ್ರೋನ್ ‘ಅತಿಕ್ರಮಣ’ ಘಟನೆ ಬಗ್ಗೆ ಚೀನಾ ಮಾಧ್ಯಮ

ವಾರ್ತಾಭಾರತಿವಾರ್ತಾಭಾರತಿ9 Dec 2017 11:04 PM IST
share
ಭಾರತದ ಸರಿಯಾಗಿ ವರ್ತಿಸಿಲ್ಲ: ಡ್ರೋನ್ ‘ಅತಿಕ್ರಮಣ’ ಘಟನೆ ಬಗ್ಗೆ ಚೀನಾ ಮಾಧ್ಯಮ

ಬೀಜಿಂಗ್, ಡಿ. 9: ಚೀನಾ ಭೂಪ್ರದೇಶದೊಳಗೆ ‘ಅತಿಕ್ರಮಣ’ ನಡೆಸಿರುವ ಭಾರತೀಯ ಡ್ರೋನ್ ಸಿಕ್ಕಿಂ ಗಡಿಯ ಸಮೀಪದ ಡೋಕಾ ಲಾ ವಲಯದಲ್ಲಿ ಪತನಗೊಂಡಿದೆ ಹಾಗೂ ಇದೇ ಸ್ಥಳದಲ್ಲಿ ಈ ವರ್ಷ ಉಭಯ ದೇಶಗಳ ನಡುವೆ ಸೇನಾ ಬಿಕ್ಕಟ್ಟು ತಲೆದೋರಿತ್ತು ಎಂದು ಚೀನಾದ ಸರಕಾರಿ ಮಾಧ್ಯಮ ಶನಿವಾರ ಹೇಳಿದೆ.

 ಡ್ರೋನ್ ಅತಿಕ್ರಮಣಕ್ಕಾಗಿ ಭಾರತ ಕ್ಷಮೆಯಾಚಿಸಬೇಕು ಎಂದು ‘ಗ್ಲೋಬಲ್ ಟೈಮ್ಸ್’ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಬರೆದಿದೆ. ಭಾರತದ ಮೇಲೆ ಇದರ ಪರಿಣಾಮಗಳು ಒಂದು ಡ್ರೋನನ್ನು ಕಳೆದುಕೊಂಡಿರುವುದಕ್ಕಿಂತಲೂ ಹೆಚ್ಚಾಗಬಹುದು ಎಂದು ಅದು ಎಚ್ಚರಿಸಿದೆ.

 ‘‘ಭಾರತ ಮತ್ತು ಚೀನಾ ಸೇನೆಗಳ ನಡುವೆ ಇತ್ತೀಚೆಗೆ ಏರ್ಪಟ್ಟ ಬಿಕ್ಕಟ್ಟಿನ ಸ್ಥಳದಲ್ಲೇ ಅತಿಕ್ರಮಣ ಸಂಭವಿಸಿದೆ. ಮುಂದೆ ಘರ್ಷಣೆಗಳು ಸಂಭವಿಸದಂತೆ ನೋಡಿಕೊಳ್ಳಲು, ಇಂಥ ಸೂಕ್ಷ್ಮ ಸಮಯ ಹಾಗೂ ಸ್ಥಳದಲ್ಲಿ ಇನ್ನೊಂದು ಪಕ್ಷವು ಪ್ರಚೋದನಕಾರಿ ಎಂಬುದಾಗಿ ಭಾವಿಸಬಹುದಾದ ಯಾವುದೇ ಕೃತ್ಯವನ್ನು ನಡೆಸುವುದರಿಂದ ಎರಡೂ ಪಕ್ಷಗಳು ದೂರವಿರಬೇಕಾಗಿತ್ತು’’ ಎಂದು ಸಂಪಾದಕೀಯ ಹೇಳಿದೆ.

‘‘ಆದರೆ, ಭಾರತ ಸರಿಯಾಗಿ ವರ್ತಿಸಲಿಲ್ಲ’’ ಎಂದು ಅದು ಅಭಿಪ್ರಾಯಪಟ್ಟಿದೆ.

ಭಾರತೀಯ ಡ್ರೋನೊಂದು ತನ್ನ ವಾಯುಕ್ಷೇತ್ರವನ್ನು ಉಲ್ಲಂಘಿಸಿ ಗಡಿಯ ತನ್ನ ಭಾಗದಲ್ಲಿ ಪತನಗೊಂಡಿದೆ ಎಂದು ಚೀನಾ ಗುರುವಾರ ಹೇಳಿತ್ತು. ಈ ಬಗ್ಗೆ ಚೀನಾವು ಭಾರತಕ್ಕೆ ಪ್ರತಿಭಟನೆಯನ್ನು ಸಲ್ಲಿಸಿದೆ.

ಅದೇ ವೇಳೆ, ನಿಯಮಿತ ತರಬೇತಿಯಲ್ಲಿ ತೊಡಗಿದ್ದ ಡ್ರೋನ್ ತಾಂತ್ರಿಕ ಸಮಸ್ಯೆಯಿಂದಾಗಿ ನಿಯಂತ್ರಣ ತಪ್ಪಿ ಗಡಿ ದಾಟಿದೆ ಎಂಬುದಾಗಿ ಭಾರತ ಸ್ಪಷ್ಟೀಕರಣ ನೀಡಿದೆ.

‘‘ಅದು ತಾಂತ್ರಿಕ ದೋಷವೇ ಆಗಿದ್ದರೂ, ಅದೇ ತಪ್ಪು ಸ್ಥಳ ಮತ್ತು ತಪ್ಪು ಸಮಯದಲ್ಲಿ ಯಾಕೆ ಸಂಭವಿಸುತ್ತದೆ? ಒಂದು ವೇಳೆ, ಚೀನಾದ ಡ್ರೋನ್ ತಾಂತ್ರಿಕ ದೋಷದಿಂದಾಗಿ ಭಾರತೀಯ ಭೂಭಾಗಕ್ಕೆ ನುಗ್ಗಿದರೆ, ಅದು ಕೇವಲ ಆಕಸ್ಮಿಕ ಎಂಬ ವಿವರಣೆಯನ್ನು ಭಾರತ ಒಪ್ಪುವುದೇ?’’ ಎಂದು ಸಂಪಾದಕೀಯ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X