Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೆಮಿಫೈನಲ್ ಹಾದಿಯಲ್ಲಿ ಕರ್ನಾಟಕ

ಸೆಮಿಫೈನಲ್ ಹಾದಿಯಲ್ಲಿ ಕರ್ನಾಟಕ

► ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ನಲ್ಲಿ ಕರ್ನಾಟಕ ಮೇಲುಗೈ ►ಶ್ರೇಯಸ್ ಗೋಪಾಲ್ ಭರ್ಜರಿ ಶತಕ

ವಾರ್ತಾಭಾರತಿವಾರ್ತಾಭಾರತಿ9 Dec 2017 11:56 PM IST
share
ಸೆಮಿಫೈನಲ್ ಹಾದಿಯಲ್ಲಿ ಕರ್ನಾಟಕ

ನಾಗ್ಪುರ,ಡಿ. 9: ಶ್ರೇಯಸ್ ಗೋಪಾಲ್ ಭರ್ಜರಿ ಶತಕದ ನೆರವಿನಲ್ಲಿ ಕರ್ನಾಟಕ ತಂಡ ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಮುಂಬೈ ವಿರುದ್ಧ ಮೇಲುಗೈ ಸಾಧಿಸಿದ್ದು, ಸೆಮಿಫೈನಲ್ ತಲುಪುವ ಹಾದಿಯಲ್ಲಿದೆ.

ವಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾಗಿರುವ ಶನಿವಾರ ಕರ್ನಾಟಕ ತಂಡ ಮೊದಲ ಇನಿಂಗ್ಸ್‌ನಲ್ಲಿ 397 ರನ್‌ಗಳ ಭರ್ಜರಿ ಮುನ್ನಡೆ ಸಾಧಿಸಿದೆ.

ದಿನದ ಆಟ ನಿಂತಾಗ ಮುಂಬೈ ತಂಡ ಎರಡನೇ ಇನಿಂಗ್ಸ್‌ನಲ್ಲಿ 44 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 120 ರನ್ ಗಳಿಸಿದೆ.

55 ರನ್ ಗಳಿಸಿರುವ ಸೂರ್ಯಕುಮಾರ್ ಯಾದವ್ ಮತ್ತು 3 ರನ್ ಗಳಿಸಿರುವ ಆಕಾಶ್ ಪಾರ್ಕರ್ ಔಟಾಗದೆ ಕ್ರೀಸ್‌ನಲ್ಲಿದ್ದರು.

 ಇನಿಂಗ್ಸ್ ಸೋಲು ತಪ್ಪಿಸಲು ಇನ್ನೂ 277 ರನ್ ಗಳಿಸಬೇಕಾಗಿದೆ. ಎರಡನೇ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡದ ಪೃಥ್ವಿ ಶಾ 14 ಮತ್ತು ಜೈ ಗೋಕುಲ್ ಬಿಸ್ತ್ ಮೊದಲ ವಿಕೆಟ್‌ಗೆ 30 ರನ್ ಸೇರಿಸಿದರು. ಮುಂಬೈ ತಂಡದ ಸ್ಕೋರ್ 9 ಓವರ್‌ಗಳಲ್ಲಿ 30ಕ್ಕೆ ಏರಿತ್ತು. 10ನೇ ಓವರ್‌ನ ಮೊದಲ ಎಸೆತದಲ್ಲಿ ಗೋಕುಲ್ ಬಿಸ್ತ್ (20) ಅವರಿಗೆ ಕೆ.ಗೌತಮ್ ಅವರು ಪೆವಿಲಿಯನ್ ಹಾದಿ ತೋರಿಸಿದರು.

 ಪೃಥ್ವಿ ಶಾ 14 ರನ್ ಗಳಿಸಿ ಶ್ರೀನಾಥ್ ಅರವಿಂದ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಮೂರನೇ ವಿಕೆಟ್‌ಗೆ ಅಖಿಲ್ ಹೆರ್ವಾಡ್ಕರ್ ಮತ್ತು ಸೂರ್ಯಕುಮಾರ್ ಯಾದವ್ 80 ರನ್‌ಗಳ ಜೊತೆಯಾಟ ನೀಡಿದರು. ಅಖಿಲ್ ಅವರು 27 ರನ್ ಗಳಿಸಿ ಗೌತಮ್ ಎಸೆತದಲ್ಲಿ ಕೆ.ಅಬ್ಬಾಸ್‌ಗೆ ಕ್ಯಾಚ್ ನೀಡಿದರು.

ಸೂರ್ಯಕುಮಾರ್ ಯಾದವ್ 115 ಎಸೆತಗಳನ್ನು ಎದುರಿಸಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಲ್ಲಿ 51 ರನ್ ಗಳಿಸಿ ಹೋರಾಟವನ್ನು ಅಂತಿಮ ದಿನಕ್ಕೆ ಕಾಯ್ದಿರಿಸಿದ್ದಾರೆ. ಕರ್ನಾಟಕದ ಕೃಷ್ಣಪ್ಪ ಗೌತಮ್ 30ಕ್ಕೆ 2 ವಿಕೆಟ್ ಹಾಗೂ ಎಸ್.ಅರವಿಂದ್ 23ಕ್ಕೆ 1 ವಿಕೆಟ್ ಪಡೆದರು.

<ಕರ್ನಾಟಕ ಮೊದಲ ಇನಿಂಗ್ಸ್ 570: ಇದಕ್ಕೂ ಮೊದಲು ಕರ್ನಾಟಕ ತಂಡ ಮೊದಲ ಇನಿಂಗ್ಸ್ ನಲ್ಲಿ 163.3 ಓವರ್‌ಗಳಲ್ಲಿ 570 ರನ್‌ಗಳಿಗೆ ಆಲೌಟಾಗಿತ್ತು. ಶ್ರೇಯಸ್ ಗೋಪಾಲ್ ಅವರು 150 ರನ್(274ಎ, 11ಬೌ) ಗಳಿಸಿ ಅಜೇಯರಾಗಿ ಉಳಿದರು.

24ರ ಹರೆಯದ ಶ್ರೇಯಸ್ ಗೋಪಾಲ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ನಾಲ್ಕನೇ ಶತಕ ದಾಖಲಿಸಿದರು.

ಇವರನ್ನು ಹೊರತುಪಡಿಸಿದರೆ ಕರ್ನಾಟಕದ ನಾಲ್ವರು ದಾಂಡಿಗರಾದ ಮಾಯಾಂಕ್ ಅಗರ್‌ವಾಲ್(78), ಮಿರ್ ಕೌನಿನ್ ಅಬ್ಬಾಸ್(50), ಶ್ರೀನಿವಾಸ್ ಅರವಿಂದ್(51), ವಿಕೆಟ್ ಕೀಪರ್ ಸಿ.ಎಂ.ಗೌತಮ್(79) ಅರ್ಧಶತಕ ದಾಖಲಿಸಿದರು.

ಕರ್ನಾಟಕ ಎರಡನೇ ದಿನದಾಟದಂತ್ಯಕ್ಕೆ 122 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 395 ರನ್ ಗಳಿಸಿತ್ತು.

ಎಸ್.ಗೋಪಾಲ್ ಔಟಾಗದೆ 80 ರನ್ ಮತ್ತು ಆರ್.ವಿನಯ್ ಕುಮಾರ್ 31 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು. ಇವರು ಬ್ಯಾಟಿಂಗ್ ಮುಂದುವರಿಸಿ 84 ರನ್ ಸೇರಿಸಿದರು. ವಿನಯ್ ಕುಮಾರ್ 37 ರನ್ ಗಳಿಸಿ ಔಟಾದರು. ಆಗ ತಂಡದ ಸ್ಕೋರ್ 125.4 ಓವರ್‌ಗಳಲ್ಲಿ 405 ತಲುಪಿತ್ತು.

 ಏಳನೆ ವಿಕೆಟ್‌ಗೆ ಗೌತಮ್ (38) ಮತ್ತು ಗೋಪಾಲ್ ಜೊತೆಯಾಟದಲ್ಲಿ 73 ರನ್ ಸೇರಿಸಿದರು. ಅಂತಿಮ ವಿಕೆಟ್‌ಗೆ ಗೋಪಾಲ್ ಮತ್ತು ಶ್ರೀನಾಥ್ ಅರವಿಂದ್(51) ಅವರು 92ರನ್ ಸೇರಿಸುವ ಮೂಲಕ ಕರ್ನಾಟಕದ ಸ್ಕೋರ್‌ನ್ನು 570ಕ್ಕೆ ತಲುಪಿಸಿದರು.

ಮುಂಬೈ ತಂಡದ ಶಿವಮ್ ದುಬೆ 98ಕ್ಕೆ 5,ಶಿವಮ್ ಮಲ್ಹೋತ್ರಾ 97ಕ್ಕೆ 3 ಮತ್ತು ಧವಳ್ ಕುಲಕರ್ಣಿ 105ಕ್ಕೆ 2 ವಿಕೆಟ್ ಪಡೆದರು.

►ಸಂಕ್ಷಿಪ್ತ ಸ್ಕೋರ್ ವಿವರ

►ಮುಂಬೈ ಮೊದಲ ಇನಿಂಗ್ಸ್ 173

►ಕರ್ನಾಟಕ ಮೊದಲ ಇನಿಂಗ್ಸ್ 163.3 ಓವರ್‌ಗಳಲ್ಲಿ ಆಲೌಟ್ 570(ಶ್ರೇಯಸ್ ಗೋಪಾಲ್ ಔಟಾಗದೆ 150, ಅಗರ್‌ವಾಲ್ 78, ಗೌತಮ್ 79, ಅರವಿಂದ್ 51,ಅಬ್ಬಾಸ್ 50; ದುಬೆ 98ಕ್ಕೆ 5,ಶಿವಮ್ ಮಲ್ಹೋತ್ರಾ 97ಕ್ಕೆ 3 )

►ಮುಂಬೈ ದ್ವಿತೀಯ ಇನಿಂಗ್ಸ್ 44 ಓವರ್‌ಗಳಲ್ಲಿ 120/3( ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ 55; ಗೌತಮ್ 30ಕ್ಕೆ 2).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X