Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕಥನ ಪ್ರೀತಿಯನ್ನು ಹೆಚ್ಚಿಸುವ ‘ಇಹದ...

ಕಥನ ಪ್ರೀತಿಯನ್ನು ಹೆಚ್ಚಿಸುವ ‘ಇಹದ ಪರಿಮಳ’

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ10 Dec 2017 12:00 AM IST
share
ಕಥನ ಪ್ರೀತಿಯನ್ನು ಹೆಚ್ಚಿಸುವ ‘ಇಹದ ಪರಿಮಳ’

ಜಗದ ಮೋಹವನ್ನು ಹಲವು ಕತೆಗಾರರು ಬರೆದಿದ್ದಾರೆ. ಆದರೆ ಕಂನಾಡಿಗಾ ನಾರಾಯಣ ಅವರು ‘ಇಹದ ಪರಿಮಳ’ವನ್ನು ತಮ್ಮ ಕತೆಗಳಲ್ಲಿ ಹೊತ್ತು ತಂದಿದ್ದಾರೆ. ಬೆನ್ನುಡಿಯಲ್ಲಿ ಹೇಳುವಂತೆ ಈ ಸಂಕಲನದಲ್ಲಿರುವ ಪ್ರತಿ ಕತೆಗಳೂ ಪರಿಮಳವನ್ನು ಅರಸುತ್ತಾ ಸಾಗುತ್ತವೆ. ಸಾಧಾರಣವಾಗಿ ಬದುಕಿನ ‘ವಾಸನೆ’ಗಳ ಕುರಿತಂತೆ ಬರೆದವರಿದ್ದಾರೆ. ಕಾಮ, ಪ್ರೇಮ, ಲೋಲುಪತೆ, ಬೆವರು ಇವುಗಳನ್ನು ನವ್ಯ ಸಾಹಿತ್ಯ ದಟ್ಟವಾಗಿ ಕಟ್ಟಿಕೊಟ್ಟಿದೆ. ಆದರೆ ಕಂನಾಡಿಗರದು ಪರಿಮಳದ ಸೆಳೆತವನ್ನು ಮನುಷ್ಯನೊಳಗೆ ಮಾನವೀಯ ನೆಲೆಯಲ್ಲಿ ಕಾಣುತ್ತಾರೆ. ಈ ಸಂಕಲನದಲ್ಲಿ ಒಟ್ಟು 13 ಕತೆಗಳು ಇವೆ. ತನ್ನ ಸುತ್ತಮುತ್ತಲಿನ ಕೃತಕ ಬಂಧಗಳನ್ನು ಮೀರಿ ಮಣ್ಣಿನ ಪರಿಮಳಕ್ಕೆ ಸೋಲುವ ನಾಯಕನ ಕತೆಯನ್ನು ಇಹದ ಪರಿಮಳ ಹೇಳುತ್ತದೆ. ಆ ಪರಿಮಳವನ್ನು ದೂರದಿಂದ ಆಸ್ವಾದಿಸುವುದೇನೋ ಚೆನ್ನಾಗಿಯೇ ಇರುತ್ತದೆ. ಆದರೆ ಆ ಪರಿಮಳಕ್ಕಾಗಿ ತೆರಬೇಕಾದ ಭೌತಿಕ ಬದುಕನ್ನು ಮೀರುವುದು ಕಷ್ಟ. ಇದು ಕಥಾನಾಯಕ ಅಮೋಘವರ್ಷನ ಒಳಗಿನ ಸಂಘರ್ಷ. ಒಬ್ಬ ನಟ ಬದುಕಿನ ವೌಲ್ಯಗಳನ್ನು ಅದ್ಭುತವಾಗಿ ನಟಿಸಬಲ್ಲ. ಆದರೆ ಅದನ್ನು ತನ್ನ ಬದುಕಾಗಿಸುವ ಸಂದರ್ಭದಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಇದೇ ಸಂದರ್ಭದಲ್ಲಿ ‘ಗಂಧದ ಬಾಗಿಲು’ ಇನ್ನೊಂದು ರೀತಿಯಲ್ಲಿ ಮನುಷ್ಯನೊಳಗಿನ ಒಳ ಹೊರಗಿನ ವಾಸನೆಯನ್ನು ತಿಳಿಸುತ್ತದೆ. ಒಂದು ದ್ವೇಷ, ಅಸೂಯೆಯಿಂದ ಕರಟಿದ ಪರಿಮಳ. ಇದೇ ಸಂದರ್ಭದಲ್ಲಿ ಅದರ ಬಾಗಿಲು ಮಾತ್ರ ಗಂಧದ ಪರಿಮಳ ಸೂಸುತ್ತದೆ. ಹೀಗೆ ಭಂಗಿಗಿರಿ, ಮಳೆ ಬೇರೆ ಬೇರೆ ರೀತಿಯಲ್ಲಿ ಇಹದ ವಾಸನೆಗಳ ವೈವಿಧ್ಯಗಳ ಸುತ್ತ ಸುತ್ತುತ್ತವೆ. ಉಳಿದಂತೆ ಕತೆಗಳು ಮನುಷ್ಯನೊಳಗಿನ ನೀಚತನ ಮತ್ತು ಒಳ್ಳೆಯತನಗಳ ತಿಕ್ಕಾಟಗಳನ್ನು ಹೇಳುತ್ತವೆ.

ಕಂನಾಡಿಗಾ ಅವರ ಕತೆ ಹೇಳುವ ರೀತಿ, ಪರಿಮಳ ವನ್ನು ಪರಿಣಾಮಕಾರಿಯಾಗಿ ಹಿಡಿದಿಡುತ್ತದೆ. ಮುನ್ನುಡಿಯಲ್ಲಿ ರಘುನಾಥ ಚ.ಹ. ಅವರು ಹೇಳು ವಂತೆ ಕಂನಾಡಿಗಾ ಅವರು ಕಥೆಯೊಂದನ್ನು ನಿರೂ ಪಿಸುವ ಹೊತ್ತಿಗೆ ಅದರಾಚೆಗಿನ ಬೇರೊಂದು ಕಥನವನ್ನು ಕಾಣಿಸುವ ಮೂಲಕ ಬೆರಗು ಮೂಡಿ ಸುತ್ತಾರೆ. ನಾವು ಕಂಡ ಬದುಕನ್ನು ಮತ್ತೊಂದು ಕೋನ ದಲ್ಲಿ ನೋಡಲು ಒತ್ತಾಯಿಸುತ್ತಾರೆ. ಕಂನಾಡಿಗಾ ಅವರ ರಚನೆಗಳು ಕಥನ ಪ್ರೀತಿಯನ್ನು ಓದುಗನಲ್ಲಿ ಹೆಚ್ಚಿಸುವಂತಿದೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 100 ರುಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X