ಬಂಟ್ವಾಳ ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ
ಕಲಾಪ್ರದರ್ಶನ, ತುಳುವೆರೆ ದಿಬ್ಬಣ
ಬಂಟ್ವಾಳ, ಡಿ. 10: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಹಾಗೂ ಬಂಟ್ವಾಳ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡಿನ ಕಲಾಮಂದಿರದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.
ಬಿ.ಸಿ.ರೋಡ್ ವೃತ್ತದ ಬಳಿಯಿಂದ ಕಲಾಮಂದಿರಕ್ಕೆ ತುಳುನಾಡಿನ ಸಾಂಸ್ಕೃತಿಕ ಸೊಬಗನ್ನು ಪ್ರತಿಬಿಂಬಿಸುವ ಕಲಾಪ್ರದರ್ಶನಗಳೊಂದಿಗೆ ತುಳುವೆರೆ ದಿಬ್ಬಣದ ಆಕರ್ಷಕ ಮೆರವಣಿಗೆ ನಡೆಯಿತು.
ಹಿರಿಯ ಪತ್ರಕರ್ತ, ತುಳು ಸಾಹಿತಿ ಮಲಾರು ಜಯರಾಮ ರೈ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ವಸ್ತು ಪ್ರದರ್ಶನವನ್ನು ಉದ್ಘಾಟನೆ ಮಾಡಿದರು.
ಸಮ್ಮೇಳನ ಸಮಿತಿಯ ಅಧ್ಯಕ್ಷ ಸುದರ್ಶನ್ ಜೈನ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್. ಖಾದರ್, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಕರ್ನಾಟಕ ತುಳು ಸಾಹಿತ್ಯ ಸಮ್ಮೇಳನದ ಸದಸ್ಯ ಎ.ಸಿ.ಭಂಡಾರಿ ಉಪಸ್ಥಿತರಿದ್ದರು.
ಸುದರ್ಶನ್ ಜೈನ್ ಸ್ವಾಗತಿಸಿದರು.