Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಳೆಯ ಮನಸ್ಸುಗಳಿಗೆ ವಚನ ಸಂಸ್ಕಾರ ಅಗತ್ಯ:...

ಎಳೆಯ ಮನಸ್ಸುಗಳಿಗೆ ವಚನ ಸಂಸ್ಕಾರ ಅಗತ್ಯ: ಪಿನಾಕಪಾಣಿ

ವಾರ್ತಾಭಾರತಿವಾರ್ತಾಭಾರತಿ10 Dec 2017 7:34 PM IST
share
ಎಳೆಯ ಮನಸ್ಸುಗಳಿಗೆ ವಚನ ಸಂಸ್ಕಾರ ಅಗತ್ಯ: ಪಿನಾಕಪಾಣಿ

ಬೆಂಗಳೂರು, ಡಿ.10: ಎಲ್ಲೆಲ್ಲೂ ಮೊಬೈಲ್‌ಗಳು ಹರಿದಾಡುತ್ತಿರುವಾಗ, ಟಿವಿಯ ಧಾರವಾಹಿಗಳು ಮನಸ್ಸನ್ನು ಕೆಡಿಸುತ್ತಿರುವಾಗ ಎಳೆಯ ಮನಸ್ಸುಗಳಿಗೆ ವಚನ ಸಂಸ್ಕಾರ ಬಹಳ ಅಗತ್ಯವೆಂದು ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ ಹೇಳಿದ್ದಾರೆ.

 ರವಿವಾರ ವಚನಜ್ಯೋತಿ ಬಳಗವು ಬಸವತತ್ತ್ವಪ್ರಚಾರ ಟ್ರಸ್ಟ್ ಸಹಯೋಗದಲ್ಲಿ ಕುಮಾರಪಾರ್ಕಿನ ಅಕ್ಕಮಹಾದೇವಿ ಸಮಾಜದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿನಿಲಯದಿಂದ ವಿದ್ಯಾರ್ಥಿನಿಲಯಕ್ಕೆ ವಚನಜ್ಯೋತಿ; ಕನ್ನಡ ಸಂಸ್ಕೃತಿ ಸಂಚಾರದಲ್ಲಿ ಮಾತನಾಡಿದ ಅವರು, ವಚನ ಸಂಸ್ಕಾರವೆಂದರೆ ಧಾರ್ಮಿಕ ಕ್ರಿಯೆಯಲ್ಲ, ಅದು ಮಾನಸಿಕ ಕ್ರಿಯೆ. ವಿಶ್ವಕ್ಕೆ ಮಾರ್ಗದರ್ಶನೀಯವಾದ ವಿಚಾರವನ್ನು ಹೇಳಿದ ಬಸವಣ್ಣ ಮತ್ತು ಇತರ ವಚನಕಾರರ ವಚನಗಳನ್ನು ಕಲಿಸುವುದರೊಂದಿಗೆ ಅವುಗಳ ಅರ್ಥವನ್ನು ಹೇಳಿಕೊಟ್ಟು ಬದುಕನ್ನು ಪ್ರೀತಿ ವಿಶ್ವಾಸಗಳಿಂದ ಸುಂದರಗೊಳಿಸುವ ಪ್ರಕ್ರಿಯೆ ಎಂದು ಹೆೀಳಿದರು.

    ಬಸವಣ್ಣ ಕೇವಲ ತತ್ತ್ವವನ್ನು ಮಾತ್ರ ಹೇಳಿಕೊಡಲಿಲ್ಲ, ಸ್ವಾಭಿಮಾನದಿಂದ ಕಾಯಕ ನಡೆಸಿ ದಾಸೋಹ ಭಾವದಿಂದ ಸಂತೃಪ್ತವಾಗಿರುವ ಬಗೆಯನ್ನು ತೋರಿಸಿಕೊಟ್ಟ ಎಂದು ಹೇಳಿದ ಅವರು, ಸಂಪತ್ತನ್ನು ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸಂಗ್ರಹಿಸುವ ಇಂದಿನ ಪ್ರವೃತ್ತಿಗೆ ಬಸವಣ್ಣ ಕಡು ವಿರೋಧಿಯಾಗಿದ್ದ, ಇದನ್ನು ನಾವು ಮಕ್ಕಳಿಗೆ ಹೇಳಿಕೊಡುವುದಷ್ಟೇ ಅಲ್ಲ, ನಾವೂ ಕೂಡಾ ಕಾಯಕದ ಮೂಲಕ ದುಡಿದು ದಾಸೋಹದಿಂದ ಹಂಚಿಕೊಂಡು ತಿನ್ನುವುದನ್ನು ತೋರಿಸಿಕೊಡಬೇಕಾಗಿದೆ, ನಡೆಯೊಳಗೆ ನುಡಿಯ ಪೂರೈಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

 ರಂಗಭೂಮಿ ಕಲಾವಿದ ಅರಬಗಟ್ಟ ಬಸವರಾಜು ವಚನಗಳನ್ನು ಹಾಡುವುದರೊಂದಿಗೆ ವ್ಯಾಖ್ಯಾನ ಮಾಡಿದರು. ಅಕ್ಕಮಹಾದೇವಿ ಸಮಾಜದ ಅಧ್ಯಕ್ಷೆ ಉಮಾದೇವಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದು, ಬಸವತತ್ತ್ವ ಪ್ರಚಾರ ಟ್ರಸ್ಟ್‌ನ ಸ್ಥಾಪಕರಾದ ಜಸ್ಟೀಸ್ ಡಿ.ಎಂ. ಚಂದ್ರಶೇಖರ್ ಅವರು, ಬಸವತತ್ತ್ವ ಪ್ರಚಾರ ನಡೆಯುತ್ತಿದ್ದು, ದ್ಯಾರ್ಥಿನಿಯರು ಇದರ ಸದುಪಯೋಗ ಪಡೆದು ಉತ್ತಮ ಬದುಕನ್ನು ರೂಢಿಸಿಕೊಳ್ಳಲೆಂದು ಆಶಿಸಿದರು. ವಚನಜ್ಯೋತಿ ಬಳಗದ ಕಾರ್ಯಾಧ್ಯಕ್ಷ ಗುರುಪ್ರಸಾದ್ ಕುಚ್ಚಂಗಿ, ಕ ಗುಂಡೀಗೆರೆ ವಿಶ್ವನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X