Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಕಂಡ ಅಪರೂಪದ ರಾಜಕಾರಣಿ...

ರಾಜ್ಯ ಕಂಡ ಅಪರೂಪದ ರಾಜಕಾರಣಿ ನಿಜಲಿಂಗಪ್ಪ: ಕೆ.ಎಸ್.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ10 Dec 2017 9:23 PM IST
share

ಬೆಂಗಳೂರು, ಡಿ. 10: ತಪ್ಪು ಅನ್ನಿಸಿದ್ದನ್ನು ನೇರವಾಗಿ ವಿರೋಧಿಸುವ, ರಾಜಿಯಾಗದ ನಾಯಕತ್ವ ಗುಣ ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪಅವರಲ್ಲಿತ್ತು. ಇದೇ ಗುಣ ಅವರನ್ನು ಮೇರು ವ್ಯಕ್ತಿಯಾಗಿಸಿದೆ. ಅಲ್ಲದೆ, ಅವರನ್ನು ಮಾದರಿ ರಾಜಕಾರಣಿಯನ್ನಾಗಿ ರೂಪಿಸಿತ್ತು ಎಂದು ಲೇಖಕ ಕೆ.ಎಸ್.ನಾಗರಾಜ್ ಬಣ್ಣಿಸಿದ್ದಾರೆ.

ರವಿವಾರ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಜಂಟಿಯಾಗಿ ಆಯೋಜಿಸಿದ್ದ ಮಾಜಿ ಸಿಎಂ ನಿಜಲಿಂಗಪ್ಪ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ನುಡಿ ನಮನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿಜಲಿಂಗಪ್ಪ ತಾವು ಬೆಳೆಯುವ ಜತೆಗೆ ತಮ್ಮೊಂದಿಗಿದ್ದವರನ್ನೂ ಅಷ್ಟೇ ಪ್ರಾಮುಖ್ಯತೆ ನೀಡಿ ಬೆಳೆಸಿದರು ಎಂದು ಹೇಳಿದರು.

 ಯಾರ ಬಗೆಗೂ ಮೇಲು-ಕೀಳೆಂಬ ಭಾವನೆ ತೋರಲಿಲ್ಲ. ಮುಖ್ಯಮಂತ್ರಿಯಾಗಿ ಭಾವನಾತ್ಮಕ ಹಾಗೂ ಆಡಳಿತಾತ್ಮಕವಾಗಿ ಮೈಸೂರು ರಾಜ್ಯದ ಐದು ಭಾಗಗಳನ್ನು ಒಂದುಗೂಡಿಸಿ ಸಮರ್ಥ ಹಾಗೂ ಜನಪರ ಆಡಳಿತ ನೀಡುವ ಮೂಲಕ ನಾಡಿನ ಜನರ ಆಶೋತ್ತರ ಈಡೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಸರಳ, ಸಮಗ್ರ, ವಚನ ಬದ್ಧ, ನಿಸ್ಪಕ್ಷಪಾತ, ಪರಿಪಕ್ವ ನಿಲುವು ಒಬ್ಬ ಸಮರ್ಥ ನಾಯಕನನ್ನಾಗಿ ರೂಪಿಸಿತು ಎಂದು ಸ್ಮರಿಸಿದರು.

ಏಕೀಕೃತ ಕರ್ನಾಟಕದ ಪ್ರಥಮ ಮುಖ್ಯಮಂತ್ರಿಯೂ ಅಗಿ ಕಾರ್ಯನಿರ್ವಹಿಸಿದ ಅವರು, ರಾಷ್ಟ್ರ ರಾಜಕಾರಣದಲ್ಲೂ ದೊಡ್ಡ ಹೆಸರು ಮಾಡಿದರು. ಕೊಂಚ ತಡವಾಗಿ ರಾಜಕೀಯ ಬದುಕು ಆರಂಭಿಸಿದ ನಿಜಲಿಂಗಪ್ಪ ತಮ್ಮದೇ ಆದ ಛಾಪನ್ನು ರಾಜಕೀಯ ವಲಯದಲ್ಲಿ ಮೂಡಿಸಿದ್ದರು. ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರು ಎನ್ನುವುದಕ್ಕಿಂತ ನ್ಯಾಯಪರ, ನಿಷ್ಠುರ ಹಾಗೂ ಸಜ್ಜನ ರಾಜಕಾರಣಿ ಆಗಿ ಜನಪ್ರಿಯರಾಗಿದ್ದರು ಎಂದು ಹೇಳಿದರು.

ಸಂಸ್ಕೃತಿ ಇಲಾಖೆ ಅಪರ ನಿರ್ದೇಶಕ ಡಾ.ಹೊನ್ನಲಿಂಗಯ್ಯ ಮಾತನಾಡಿ, ದೇಶದಲ್ಲಿ ರಾಷ್ಟ್ರ ನಾಯಕರ ಹಾಗೂ ಹಬ್ಬ ಹರಿದಿನಗಳ ಆಚರಣೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತೇವೆ. ಆದರೆ, ದೇಶ ಕಟ್ಟಲು, ರಾಜ್ಯ ಕಟ್ಟಲು ಶ್ರಮಿಸಿದ, ದುಡಿದ ನಾಯಕರು ಹುಟ್ಟಿದ ದಿನಗಳನ್ನು ಮರೆ ಬಿಟ್ಟಿರುತ್ತೇವೆ. ಈ ಕುರಿತು ಸರಕಾರ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ಆರ್ಥಿಕವಾಗಿ ಹಿಂದುಳಿದವರ ಮೊಕದ್ದಮೆಗಳನ್ನು ವಾದಿಸುತ್ತಾ ಭೂ ಸುಧಾರಣೆ ಹಾಗೂ ಉಳುವವರಿಗೆ ಭೂಮಿ ಕೊಡಿಸಬೇಕು ಎಂದು ಅಪಾರ ಪ್ರಮಾಣದಲ್ಲಿ ಶ್ರಮ ವಹಿಸಿದರು. ಅದರಲ್ಲಿ ಯಶಸ್ಸು ಕಂಡರು. ಅದಕ್ಕಿಂತ ಮುಖ್ಯವಾಗಿ ಇವರ ಕಾಂಗ್ರೆಸ್ ಪಕ್ಷದಲ್ಲಿ ಬದುಕು ಮತ್ತು ಸ್ವಾತಂತ್ರ ಸಂಗ್ರಾಮದೊಂದಿಗಿನ ಸಂಬಂಧ ವಿಶೇಷವಾಗಿದೆ. 1924ರಲ್ಲಿ ಗಾಂಧಿಯನ್ನು ಕಂಡು, ಅಂದಿನಿಂದ ಮುಂದೆ ಕಾಂಗ್ರೆಸ್ ಜತೆಗಿನ ನಿಕಟ ಸಂಪರ್ಕ ಬೆಳೆಸಿಕೊಂಡು ಗಮನಾರ್ಹರಾಗಿ ಗುರುತಿಸಿಕೊಂಡರು ಎಂದು ವಿವರಿಸಿದರು.

ನಿಜಲಿಂಗಪ್ಪರನ್ನು ನವ ಕರ್ನಾಟಕದ ನಿರ್ಮಾತೃ ಎಂದು ಜನ ನೆನಪಿಸಿಕೊಳ್ಳುತ್ತಾರೆ. ಆದರೆ, ಶರಾವತಿ ಜಲ ವಿದ್ಯುತ್ ಯೋಜನೆ ಮತ್ತು ಕಾಳಿ ವಿದ್ಯುತ್ ಯೋಜನೆಯ ಪ್ರಮುಖ ರೂವಾರಿಯಾಗಿದ್ದಾರೆ. ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿಗೆ ಅಪಾರವಾದ ಸೇವೆ ಸಲ್ಲಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಿರೀಶ್ ಪಟೇಲ್ ಹಾಗೂ ನಾಗರಾಜಮೂರ್ತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X