Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೆರುಸಲೇಂ ನಿರ್ಧಾರ ಹಿಂದಕ್ಕೆ ಪಡೆಯಿರಿ:...

ಜೆರುಸಲೇಂ ನಿರ್ಧಾರ ಹಿಂದಕ್ಕೆ ಪಡೆಯಿರಿ: ಟ್ರಂಪ್ ಆಡಳಿತಕ್ಕೆ ಅರಬ್ ವಿದೇಶ ಸಚಿವರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ10 Dec 2017 10:18 PM IST
share
ಜೆರುಸಲೇಂ ನಿರ್ಧಾರ ಹಿಂದಕ್ಕೆ ಪಡೆಯಿರಿ: ಟ್ರಂಪ್ ಆಡಳಿತಕ್ಕೆ ಅರಬ್ ವಿದೇಶ ಸಚಿವರ ಒತ್ತಾಯ

ಕೈರೋ (ಈಜಿಪ್ಟ್), ಡಿ. 10: ಜೆರುಸಲೇಂನ್ನು ಇಸ್ರೇಲ್ ರಾಜಧಾನಿಯಾಗಿ ಮಾನ್ಯ ಮಾಡುವ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುವಂತೆ ಅರಬ್ ವಿದೇಶ ಸಚಿವರು ರವಿವಾರ ಅಮೆರಿಕವನ್ನು ಒತ್ತಾಯಿಸಿದ್ದಾರೆ.

ಇದೊಂದು ‘ಅಪಾಯಕಾರಿ’ ಬೆಳವಣಿಗೆಯಾಗಿದ್ದು, ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ ಹಾಗೂ ಅಮೆರಿಕವನ್ನು ‘ಆಕ್ರಮಣಶೀಲರ’ ಪಟ್ಟಿಯಲ್ಲಿ ಸೇರಿಸುತ್ತದೆ ಎಂದು ಸಚಿವರು ಹೇಳಿದ್ದಾರೆ.

  ಅದೇ ವೇಳೆ, ಟ್ರಂಪ್ ನಿರ್ಧಾರವನ್ನು ಖಂಡಿಸಿ ನಿರ್ಣಯವೊಂದನ್ನು ಅಂಗೀಕರಿಸುವಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಕರೆ ನೀಡುವ ನಿರ್ಣಯವೊಂದನ್ನೂ ಅರಬ್ ಸಚಿವರೂ ಅಂಗೀಕರಿಸಿದ್ದಾರೆ. ಆದರೆ, ಅದಕ್ಕೆ ಅಮೆರಿಕ ವೀಟೊ ಚಲಾಯಿಸಬಹುದು ಎಂಬುದನ್ನೂ ಅವರು ಒಪ್ಪಿಕೊಂಡ್ದಿದ್ದಾರೆ.

 ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರಕ್ಕೆ ಅಮೆರಿಕ ವೀಟೊ ಚಲಾಯಿಸಿದರೆ, ಇಂಥದೇ ನಿರ್ಣಯವನ್ನು ವಿಶ್ವಸಂಸ್ಥೆಯ ಮಹಾಧಿವೇಶನದಲ್ಲೂ ಅರಬ್ ದೇಶಗಳು ಮಂಡಿಸಲಿವೆ ಎಂದು ಈಜಿಪ್ಟ್ ರಾಜಧಾನಿ ಕೈರೋದಲ್ಲಿ ಮುಂಜಾನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಫೆಲೆಸ್ತೀನ್ ವಿದೇಶ ಸಚಿವ ರಿಯಾದ್ ಅಲ್-ಮಾಲಿಕಿ ತಿಳಿಸಿದರು.

ಶನಿವಾರ ರಾತ್ರಿ ಆರಂಭಗೊಂಡ ಅರಬ್ ದೇಶಗಳ ತುರ್ತು ಸಭೆ ರವಿವಾರ ಮುಂಜಾವಿನವರೆಗೂ ನಡೆಯಿತು.

ಆದಾಗ್ಯೂ, ಸಭೆಯಲ್ಲಿ ಅಂಗೀಕರಿಸಿದ ಎರಡು ಪುಟಗಳ ನಿರ್ಣಯದಲ್ಲಿ ಅಮೆರಿಕದ ವಿರುದ್ಧ ಯಾವುದೇ ದಂಡನಾ ಕ್ರಮಗಳನ್ನು ತೆಗೆದುಕೊಳ್ಳುವ ಪ್ರಸ್ತಾಪವಿಲ್ಲ.

ತಿಂಗಳೊಳಗೆ ಸಚಿವರು ಇನ್ನೊಮ್ಮೆ ಸಭೆ ಸೇರುತ್ತಾರೆ ಎಂದು ನಿರ್ಣಯ ತಿಳಿಸಿದೆ ಹಾಗೂ ಈ ವಿಷಯದ ಬಗ್ಗೆ ಚರ್ಚಿಸಲು ಜೋರ್ಡಾನ್‌ನಲ್ಲಿ ತುರ್ತು ಅರಬ್ ಶೃಂಗಸಮ್ಮೇಳನವೊಂದನ್ನು ಸಾಧ್ಯತೆಯನ್ನು ಜೀವಂತವಾಗಿರಿಸಿದೆ.

ರಾಜಕೀಯ ನಿರ್ಣಯ: ಅರಬ್ ಲೀಗ್ ಮುಖ್ಯಸ್ಥ

ಗಾಝಾ ಪಟ್ಟಿ ಮತ್ತು ಪಶ್ಚಿಮ ದಂಡೆಯಲ್ಲಿ ವಾಸಿಸುತ್ತಿರುವ ಫೆಲೆಸ್ತೀನೀಯರು ವ್ಯಕ್ತಪಡಿಸುತ್ತಿರುವಷ್ಟು ಆಕ್ರೋಶವನ್ನು ನಿರ್ಣಯ ಹೊಂದಿಲ್ಲ.

‘‘ನಾವೊಂದು ರಾಜಕೀಯ ನಿರ್ಣಯವನ್ನು ತೆಗೆದುಕೊಂಡಿದ್ದೇವೆ. ಇದು ಬೀದಿಗಳಲ್ಲಿ ನಡೆಯುತ್ತಿರುವುದನ್ನು ಪ್ರತಿಫಲಿಸಬೇಕೆಂದಿಲ್ಲ. ರಾಜಕೀಯ ಕೆಲಸ ಜವಾಬ್ದಾರಿಯ ಕೆಲಸವಾಗಿದೆ’’ ಎಂದು ಅರಬ್ ಲೀಗ್ ಮುಖ್ಯಸ್ಥ ಅಹ್ಮದ್ ಅಬುಲ್ ೇಟ್ ಹೇಳಿದರು.

‘‘ಜೆರುಸಲೇಂ 50 ವರ್ಷಗಳಿಂದ ಆಕ್ರಮಣಕ್ಕೊಳಗಾಗಿದೆ. ಇದು ಮುಂದುವರಿದ ಯುದ್ಧವಾಗಿದೆ. ಈ ಯುದ್ಧವು ಬಿಗಡಾಯಿಸುತ್ತದೆ’’ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X