Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಆಟೊಗಳಲ್ಲಿ ‘ಡಿಸ್ ಪ್ಲೇ...

ಶಿವಮೊಗ್ಗ ಆಟೊಗಳಲ್ಲಿ ‘ಡಿಸ್ ಪ್ಲೇ ಕಾರ್ಡ್’ ಕಡ್ಡಾಯ

ಸಂಚಾರ ಪೊಲೀಸರಿಂದ ನೂತನ ನಿಯಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Dec 2017 10:48 PM IST
share
ಶಿವಮೊಗ್ಗ ಆಟೊಗಳಲ್ಲಿ ‘ಡಿಸ್ ಪ್ಲೇ ಕಾರ್ಡ್’ ಕಡ್ಡಾಯ

ನಿಯಮ ಪಾಲಿಸಲಿವೆ 5ಸಾವಿರ ಆಟೊಗಳು

ಶಿವಮೊಗ್ಗ, ಡಿ. 10: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಆಟೋಗಳಲ್ಲಿ ಚಾಲಕರ ವಿವರಗಳನ್ನೊಳಗೊಂಡ ‘ಡಿಸ್ ಪ್ಲೇ ಕಾರ್ಡ್’ಅಳವಡಿಕೆ ಮಾಡುವುದನ್ನು ಪೊಲೀಸ್ ಇಲಾಖೆ ಕಡ್ಡಾಯಗೊಳಿಸಿದೆ. ರವಿವಾರ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆಯವರು ಆಟೋಗಳಲ್ಲಿ ‘ಡಿಸ್ ಪ್ಲೇ ಕಾರ್ಡ್’ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಡಿಸ್ ಪ್ಲೇ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಪ್ರತಿಯೊಂದು ಆಟೋಗಳಲ್ಲಿಯೂ ಅಳವಡಿಕೆ ಮಾಡಬೇಕು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಗಂಗಾಧರಪ್ಪ, ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಸಂತೋಷ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಏನಿದು ಕಾರ್ಡ್?: ಶಿವಮೊಗ್ಗ ನಗರದಲ್ಲಿ ಅಧಿಕೃತ ಹಾಗೂ ಅನಧಿಕೃತ ಸೇರಿದಂತೆ ಒಟ್ಟು ಸುಮಾರು 5000ಕ್ಕೂ ಅಧಿಕ ಪ್ರಯಾಣಿಕ ಆಟೋಗಳು ಸಂಚರಿಸುತ್ತಿವೆ. ಆಟೋಗಳಲ್ಲಿ ಪ್ರಯಾಣಿಸುವ ನಾಗರಿಕರಿಗೆ ಸುರಕ್ಷತೆ ಕಲ್ಪಿಸುವ ಉದ್ದೇಶದಿಂದ ಸಂಚಾರಿ ಠಾಣೆ ಪೊಲೀಸರು ಆಟೋಗಳಲ್ಲಿ ಚಾಲಕರ ಸಮಗ್ರ ವಿವರ ಒಳಗೊಂಡ ‘ಡಿಸ್ ಪ್ಲೇ ಕಾರ್ಡ್’ ಅಳವಡಿಕೆಗೆ ಕ್ರಮಕೈಗೊಂಡಿದ್ದಾರೆ.

ಎಸ್ಪಿ ಅಭಿನವ್ ಖರೆ

► ಪ್ರತೀ ಆಟೊದ ಮಾಹಿತಿ ಸಂಚಾರ ಠಾಣೆಯಲ್ಲಿ ಲಭ್ಯ

ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಆಟೊಗಳು, ಚಾಲಕರ ವಿವರಗಳನ್ನು ಮೊದಲೇ ಸಂಗ್ರಹಿಸಿಟ್ಟು ಕೊಂಡಿರಲಾಗುತ್ತದೆ. ಪ್ರಯಾಣಿಕರು ನೀಡುವ ಮಾಹಿತಿಯ ಆಧಾರದ ಮೇಲೆ ಪರಿಶೀಲನೆ ನಡೆಸಿ, ತ್ವರಿತವಾಗಿ ಚಾಲಕರನ್ನು ಪತ್ತೆ ಹಚ್ಚಲು ಸಹಾಯಕವಾಗುತ್ತದೆ ಎಂದು ಸಂಚಾರ ಪೊಲೀಸರು ಅಭಿಪ್ರಾಯ ಪಡುತ್ತಾರೆ.

ಕಾರ್ಡ್‌ನಲ್ಲಿ ಏನೆಲ್ಲಾ ಇರಲಿದೆ

ಸಂಚಾರಿ ಠಾಣೆ ಪೊಲೀಸರು ಜಾರಿಗೆ ತಂದಿರುವ ನೂತನ ಡಿಸ್ ಪ್ಲೇ ಕಾರ್ಡ್‌ನಲ್ಲಿ ಚಾಲಕನ ಭಾವಚಿತ್ರ, ಹೆಸರು, ಮೊಬೈಲ್ ನಂಬರ್, ವಿಳಾಸ, ಆಟೋದ ನೋಂದಣಿ ಸಂಖ್ಯೆ ಮೊದಲಾದ ವಿವರಗಳಿರುತ್ತವೆ. ಪ್ರಯಾಣಿಕರು ಕುಳಿತುಕೊಳ್ಳುವ ಸೀಟ್‌ನ ಮುಂಭಾಗ ಈ ಕಾರ್ಡ್ ಪ್ರದರ್ಶಿಸಲಾಗುತ್ತದೆ.

ಆಟೋಗಳಲ್ಲಿ ಡಿಸ್ ಪ್ಲೇ ಕಾರ್ಡ್ ಅಳವಡಿಕೆ ಮಾಡುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ. ಇದರಿಂದ ತಾವು ಸಂಚರಿಸುತ್ತಿರುವ ಆಟೋಗಳ ಚಾಲಕರ ವಿವರ ಸುಲಭವಾಗಿ ತಿಳಿಯ ಬಹುದಾಗಿದೆ. ಅವರಿಂದ ಏನಾದರೂ ಕಿರಿಕಿರಿಯಾದರೆ ಪೊಲೀಸರಿಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ. ಹಾಗೆಯೇ ಅದರಲ್ಲಿರುವ ಮಾಹಿತಿ ಸಂಗ್ರಹಿಸಿಟ್ಟುಕೊಂಡು ತುರ್ತು, ಅನಿವಾರ್ಯ ಸಂದರ್ಭಗಳಲ್ಲಿ ಚಾಲಕರನ್ನು ಸಂಪರ್ಕಿಸಲು ಸಹಕಾರಿಯಾಗುತ್ತದೆ.

ನಾಗರತ್ನಾ, ಪ್ರಯಾಣಿಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X