Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾವಂತರಲ್ಲಿ ಸಂಸ್ಕೃತಿ, ಸಂಸ್ಕಾರ...

ವಿದ್ಯಾವಂತರಲ್ಲಿ ಸಂಸ್ಕೃತಿ, ಸಂಸ್ಕಾರ ಮರೆಯಾಗುತ್ತಿದೆ: ಶಿಲ್ಪಾ

ಎಂಇಎಸ್ ಪ್ರೌಢಶಾಲೆ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ10 Dec 2017 10:54 PM IST
share
ವಿದ್ಯಾವಂತರಲ್ಲಿ ಸಂಸ್ಕೃತಿ, ಸಂಸ್ಕಾರ ಮರೆಯಾಗುತ್ತಿದೆ: ಶಿಲ್ಪಾ

ಚಿಕ್ಕಮಗಳೂರು, ಡಿ.10: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನೂ ಮೈಗೂಡಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಶಿಲ್ಪಾರಾಜಶೇಖರ್ ಸಲಹೆ ಮಾಡಿದ್ದಾರೆ.

  ಅವರು ನಗರದ ಎಂಇಎಸ್ ಪ್ರೌಢಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ಪಠ್ಯದ ಜೊತೆಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನೂ ಕಲಿಸಬೇಕು ಎಂದು ಮನವಿ ಮಾಡಿದರು.

ಜಾಗತೀಕರಣ ಮತ್ತು ಆಧುನೀಕರಣದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚುತ್ತಿದೆ ಆದರೆ ಶಿಕ್ಷಣವಂತರಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಮರೆಯಾಗುತ್ತಿದೆ ಇದರಿಂದಾಗಿ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿ ವಿನಯ, ವಿಧೇಯತೆ ಮತ್ತು ಮಾನವೀಯತೆಯನ್ನು ಬೆಳೆಸಬೇಕು ಎಂದರು.

  ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ನಮ್ಮ ಸಂಸ್ಕೃತಿ, ಸಂಸ್ಕಾರ, ವಿನಯ ಮತ್ತು ವಿಧೇಯತೆಯನ್ನು ಮೈಗೂಡಿಸಿಕೊಂಡರೆ ಉತ್ತಮ ನಾಗರಿಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

   ಸಮಾರಂಭದಲ್ಲಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲಾಯಿತು.

ಸಮಾರಂಭಕ್ಕೆ ಮುನ್ನ ನಡೆದ ಕ್ರೀಡಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಉದ್ಘಾಟಿಸಿದರು. ವಿದ್ಯಾರ್ಥಿ ಜೆ.ಕಿರಣ್ ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯಕುಮಾರ್, ಸಹಕಾರ್ಯದರ್ಶಿ ಎಸ್.ಶಂಕರನಾರಾಯಣಭಟ್, ನಿರ್ದೇಶಕಿ ಜಯಶ್ರೀ ಜೋಶಿ, ಆಡಳಿತಾಧಿಕಾರಿ ಶಾಂತಕುಮಾರಿ, ಮುಖ್ಯಶಿಕ್ಷಕ ಬಿ.ಎಂ.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X